ಮೈಸೂರು: ಪತ್ನಿ ರುಂಡ ಕತ್ತರಿಸಿ ಕೊಂದ ಕಿರಾತಕ ಪತಿ

 

ಅನೈತಿಕ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ ಪತಿ ಆಕೆಯ ರುಂಡ ಕತ್ತರಿಸಿ ಕೊಂದ ಭೀಕರ ಘಟನೆ ಮೈಸೂರು ಜಿಲ್ಲೆ ವರುಣಾ ಬಳಿಯ ಚೆಟ್ಟನಹಳ್ಳಿಯಲ್ಲಿ ನಡೆದಿದೆ.

ನಲವತ್ತು ವರ್ಷದ ಪುಟ್ಟಮ್ಮ ಕೊಲೆಯಾದ ಮಹಿಳೆಯಾಗಿದ್ದು, ಆರೋಪಿ ಪತಿ ದೇವರಾಜ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ದಂಪತಿಗೆ 20 ವರ್ಷದ ಮಗಳಿದ್ದು, ಆಕೆ ಕಾಲೇಜಿಗೆ ಹೋಗಿದ್ದಾಗ ಪತ್ನಿ ಜೊತೆ ಜಗಳ ತೆಗೆದ ದೇವರಾಜ್‌ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಪದೇಪದೆ ಪತ್ನಿಯ ಶೀಲ ಶಂಕಿಸಿ ಜಗಳ ತೆಗೆಯುತ್ತಿದ್ದ ದೇವರಾಜ್‌, ಮೊದಲ ಹೆಂಡತಿಯನ್ನೂ ಸಹ ಕೊಲೆ ಮಾಡಲು ಯತ್ನಿಸಿ ಜೈಲು ವಾಸ ಅನುಭವಿಸಿದ್ದ, ಇದೀಗ ಪತ್ನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದು ಪೊಲೀಸರು ಶೋಧ ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಶ್ವದಲ್ಲೇ ಅತಿ ಹೆಚ್ಚು ಅಪಘಾತವಾಗುವುದು ಭಾರತದಲ್ಲಿ:

Tue Jun 28 , 2022
ನವದೆಹಲಿ: ಎಂಟು ಸೀಟಿನ ವಾಹನಗಳಿಗೆ ಆರು ಏರ್​ಬ್ಯಾಗ್​ ಇರಲೇಬೇಕೆಂದು ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ತಿಳಿಸಿದ್ದಾರೆ. ವಾಹನಗಳನ್ನು ಮತ್ತಷ್ಟು ಸುರಕ್ಷತೆ ಹೆಚ್ಚಿಸುವ ಅನಿವಾರ್ಯವಿದ್ದು, ದೇಶದಲ್ಲಿ ಪ್ರತಿವರ್ಷ ರಸ್ತೆ ಅಪಘಾತದಿಂದಲೇ 5 ಲಕ್ಷಕ್ಕೂ ಅಧಿಕ ಮಂದಿ ಮೃತಪಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ವಿಶ್ವದಲ್ಲೇ ಭಾರತದಲ್ಲೇ ಅಧಿಕ ಮಂದಿ ಅಪಘಾತದಲ್ಲಿ ಮೃತಪಡುವವರ ಸಂಖ್ಯೆ ಅಧಿಕವಾಗಿದ್ದು, ಇದಕ್ಕೆ ವಾಹನಗಳು ಸುರಕ್ಷತಾ ಕ್ರಮ ವೈಫಲ್ಯವೂ ಆಗಿವೆ. ವಾಹನ ತಯಾರಿಕಾ ಕಂಪನಿಗಳು ಈ ಬಗ್ಗೆ ಹೆಚ್ಚು […]

Advertisement

Wordpress Social Share Plugin powered by Ultimatelysocial