ಅಕ್ಕನ ಜೊತೆ ಪದೇ ಪದೇ ಗಲಾಟೆ ಮಾಡುತ್ತಿದ್ದ ಬಾವನ ಮೇಲೆ ರೊಚ್ಚಿಗೆದ್ದ ಬಾಮೈದ ನಿನ್ನೆ ರಾತ್ರಿ ಕಲ್ಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ನಗರದ ನಂದಿನಿ ಲೇಔಟ್ನಲ್ಲಿ ನಡೆದಿದೆ. ಖಾಸಗಿ ಟ್ರಾನ್ಸ್ ಪೋರ್ಟ್ ನಲ್ಲಿ ಕೆಲಸ ಮಾಡುತಿದ್ದ ಅಜೀಮ್ ಹಲವು ವರ್ಷಗಳ ಹಿಂದೆ ಖಾದರ್ ಸಹೋದರಿಯನ್ನು ಮದುವೆಯಾಗಿದ್ದ. ದಂಪತಿಗಳ ನಡುವೆ ನಿನ್ನೆ ಜಗಳ ನಡೆದಿದ್ದು ಅಕ್ಕನ ಬಾವ ಗಲಾಟೆ ವಿಷಯ ಅರಿತ ಆರೋಪಿ ಖಾದರ್ ತಾನು ವಾಸವಿದ್ದ ಕೂಲಿ ನಗರದಿಂದ ತನ್ನ ಇಬ್ಬರು ಗೆಳೆಯರ ಜೊತೆ ಅಕ್ಕನ ಮನೆ ಬಳಿ ಬಂದಿದ್ದ. ಈ ವೇಳೆ ಬಾವನ ಜೊತೆ ಖಾದರ್ ಮಾತಿಗಿಳಿದಿದ್ದಾನೆ. ಗಲಾಟೆಯಲ್ಲಿ ಅಜಿಮ್ ಉಲ್ಲಾನ ಮೇಲೆ ಕಲ್ಲುಗಳಿಂದ ತಲೆಯ ಮೇಲೆ ಹಲವು ಬಾರಿ ಕಲ್ಲಿನಿಂದ ಹಲ್ಲೆ ಮಾಡಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ನಂದಿನಿ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ:ಕಾಲು ಜಾರಿ ಬಿದ್ದು ಯುವಕನ ಸಾವು