ರಾಯ್ಪುರ: ಬಿಜೆಪಿ (BJP) ಜಿಲ್ಲಾ ಉಪಾಧ್ಯಕ್ಷನನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.
ಈ ಘಟನೆ ನಾರಾಯಣ್ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.
ಮೃತನನ್ನು ಸಾಹು ಎಂದು ಗುರುತಿಸಲಾಗಿದೆ. ಕೊಲೆ ಕೃತ್ಯದ ಹಿಂದೆ ನಕ್ಸಲ (Naxal) ರ ಕೈವಾಡವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಸಾಹು ಅವರು ಛೋಟೆಡೊಂಗರ್ ಗ್ರಾಮದಲ್ಲಿರುವ ತಮ್ಮ ಮನೆಯಲ್ಲಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಇಬ್ಬರು ಆಗಂತುಕರು ಏಕಾಏಕಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲದೆ ಕುಟುಂಬದವರ ಎದುರೇ ಸಾಹು ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಸಾಹು ಅವರನ್ನು ಕೂಡಲೇ ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಸಂಬಂಧ ಅಲ್ಲಿನ ಪೊಲೀಸರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಕೃತ್ಯದ ಹಿಂದೆ ನಕ್ಸಲರ ಕೈವಾಡವಿರುವುದು ಮೇಲ್ನೋಟಕ್ಕೆ ತಿಳಿದುಬರುತ್ತಿದೆ. ಎಲ್ಲಾ ಆಯಾಮಗಳಲ್ಲಿ ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada