ಪಾತ್ರೆಗೆ ನೀರು, ಮಶ್ರೂಮ್, ಅರಿಶಿಣ, ಉಪ್ಪು ಹಾಕಿ ಬೇಯಿಸಿಕೊಳ್ಳಿ. ತವಾಕ್ಕೆ ಎಣ್ಣೆ ಹಾಕಿ ಕಾಯಿಸಿ. ಎಣ್ಣೆ ಕಾದ ನಂತರ ದಪ್ಪಗೆ ಹೆಚ್ಚಿದ ಈರುಳ್ಳಿ, ಟೊಮೆಟೊ, ಅರಿಶಿಣ, ಗೋಡಂಬಿ, ಹಾಕಿ ಹಸಿವಾಸನೆ ಹೋಗುವವರೆಗೆ ಹುರಿಯಿರಿ. ಇದಕ್ಕೆ ಕೊತ್ತಂಬರಿ ಸೊಪ್ಪು, ಶುಂಠಿ ಬೆಳುಳ್ಳಿ ಪೇಸ್ಟ್ ಸೇರಿಸಿ ಹುರಿದು, ಅಚ್ಚಖಾರದ ಪುಡಿ, ಧನಿಯಾ ಪುಡಿ, ಗರಂ ಮಸಾಲ, ಸ್ವಲ್ಪ ನೀರು, ತೆಂಗಿನಕಾಯಿ ತುರಿ ಹಾಕಿ ಚೆನ್ನಾಗಿ ಬೆರೆಸಿ. ತಣ್ಣಗಾದ ನಂತರ ನುಣ್ಣಗೆ ರುಬ್ಬಿಕೊಳ್ಳಿ. ಬಾಣಲಿಗೆ ೫ ಸ್ಪೂನ್ ಎಣ್ಣೆ ಹಾಕಿ ಕಾಯಿಸಿ. ದಪ್ಪಗೆ ಹೆಚ್ಚಿದ ಈರುಳ್ಳಿ, ಟೊಮೆಟೊ, ಕಸೂರಿ ಮೇಥಿ, ಹಿದಕಿದ ಅವರೆ ಬೇಳೆ, ಬೇಯಿಸಿದ ಮಶ್ರೂಮ್ ಹಾಕಿ ಬಾಡಿಸಿ, ರುಬ್ಬಿ ಕೊಂಡ ಮಸಾಲ, ಸ್ವಲ್ಪ ನೀರು, ಉಪ್ಪು ಹಾಕಿ ಹದವಾಗಿ ಬೇಯಿಸಿ.ಈಗ ಹಿದಕಿದ ಅವರೆ ಬೇಳೆ ಮಶ್ರೂಮ್ ಗ್ರೇವಿ ಸವಿಯಲು ರೆಡಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada