ಬಿಜೆಪಿಯು ದೇಶದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ

 

ಹೈದರಾಬಾದ್: ಬಿಜೆಪಿಯು ದೇಶದಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಹರಡುತ್ತಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರ ಮೇಲೆ ಯುದ್ಧ ಸಾರಿದೆ ಎಂದು ಎಐಎಂಐಎಂ ಅಧ್ಯಕ್ಷ, ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ.

ಇಲ್ಲಿನ ಮೆಕ್ಕಾ ಮಸೀದಿಯ ‘ಜಲ್ಸೆ ಯಾಮ್-ಉಲ್-ಕುರಾನ್’ ಆವರಣದಲ್ಲಿ ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು. ಇದೇ ವೇಳೆ, ದ್ವೇಷ ಹರಡುವ ಕೃತ್ಯಗಳನ್ನು ನಿಲ್ಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಓವೈಸಿ ಆಗ್ರಹಿಸಿದ್ದಾರೆ.

‘ನಮ್ಮ ದೇಶದಲ್ಲಿ ಮುಸ್ಲಿಮರ ವಿರುದ್ಧ ಬಿಜೆಪಿ ದ್ವೇಷದ ಬಿರುಗಾಳಿ ಎಬ್ಬಿಸಿದೆ. ಮುಸ್ಲಿಮರು ತಾಳ್ಮೆ ಮತ್ತು ಧೈರ್ಯ ಕಳೆದುಕೊಳ್ಳಬಾರದು. ಸಂವಿಧಾನದ ಮಿತಿಯಲ್ಲೇ ಈ ದಬ್ಬಾಳಿಕೆಯ ವಿರುದ್ಧ ಹೋರಾಡಿ’ ಎಂದು ಅವರು ಹೇಳಿದ್ದಾರೆ.

‘ಬಿಜೆಪಿಯು ಮುಸ್ಲಿಮರ ಮೇಲೆ ಅತಿಯಾದ ಒತ್ತಡ ಹೇರಲು ಬಯಸುತ್ತಿದೆ. ಅವರನ್ನು ಅತಿಯಾಗಿ ನೋಯಿಸುವ ಮೂಲಕ ಅವರು ಆಯುಧ ಹಿಡಿಯುವಂತೆ ಮಾಡಲು ಪ್ರೇರೇಪಿಸುತ್ತಿದೆ’ ಎಂದು ಓವೈಸಿ ದೂರಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯಕ್ಕೆ ಅಮಿತ್ ಶಾ ಭೇಟಿ

Sat Apr 30 , 2022
  ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮೇ 3ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ರಾಜ್ಯ ಬಿಜೆಪಿ ಕಚೇರಿಗೂ ಭೇಟಿ ನೀಡಿ ಪಕ್ಷದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಅಮಿತ್ ಶಾ ರಾಜ್ಯ ಭೇಟಿ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಬಹುದೆಂಬ ವಿಚಾರ ಮುನ್ನೆಲೆಗೆ ಬಂದಿದ್ದು, ಹೀಗಾಗಿ ಸಚಿವಾಕಾಂಕ್ಷಿಗಳ ರಾಜಕೀಯ ಚಟುವಟಿಕೆ ಗರಿಗೆದರಿದೆ. ಸಂಪುಟ ವಿಸ್ತರಣೆಯಾಗುತ್ತದೋ ಅಥವಾ ಪುನರ್ರಚನೆಯೋ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದ್ದು, ವಿಧಾನಸಭಾ ಚುನಾವಣೆ […]

Advertisement

Wordpress Social Share Plugin powered by Ultimatelysocial