ಬೆಂಗಳೂರು: ಮುಸ್ಲಿಂ ಅಂಗಡಿಗಳಲ್ಲಿ ವಸ್ತುಗಳ ಖರೀದಿಗೆ ಬ್ರೇಕ್ ಹಾಕಲು ಹಿಂದು ಪರ ಸಂಘಟನೆಗಳು ಚಿಂತನೆ ನಡೆಸಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಅಂಗಡಿಯಲ್ಲಿ ಖರೀದಿ ನಿಷೇಧ ಹೇರಲಾಗಿದ್ದು, ಜಾತ್ರೆ, ಮಹೋತ್ಸವ ಇತರೆ ಸಮಾರಂಭಗಳಲ್ಲಿ ಮುಸ್ಲಿಂ ಅಂಗಡಿಗಳಿಗೆ ನಿಷೇಧಿಸಲಾಗಿದೆ.
ಮುಸ್ಲಿಂ ಅಂಗಡಿಗಳಲ್ಲಿ ಯಾವುದೇ ಕಾರಣಕ್ಕೂ ವಸ್ತುಗಳ ಖರೀದಿ ಮಾಡಬಾರದು ಅಂತ ಹಿಂದೂ ಪರ ಸಂಘಟನೆಗಳು ಕರೆ ಕೊಟ್ಟಿದ್ದು, ಈಗ ಮತ್ತೊಂದು ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನ ಬಹುತೇಕ ಮಾಲ್, ಅಂಗಡಿಗಳಲ್ಲಿ ಮುಸ್ಲಿಂ ಸಿಂಬಲ್ ಇರೋ ಹಲಾಲ್ ವಸ್ತುಗಳನ್ನು ಖರೀದಿ ಗೆ ಬ್ರೇಕ್ ಹಾಕಲು ಚಿಂತನೆ ನಡೆಸಲಾಗಿದ್ದು, ಮುಖ್ಯವಾಗಿ ಮಾಂಸ, ಕೋಳಿ ಅಂಗಡಿಗಳಲ್ಲಿ ಖರೀದಿಗೆ ನಿಷೇಧ ಹಾಕಲು ಮುಂದಾಗಿದ್ದು, ಮುಸ್ಲಿಂ ವ್ಯಾಪಾರಿಗಳು ಕೋಳಿ ಅಥವಾ ಕುರಿ ಬಲಿ ಕೊಡುವಾಗ ಹಲಾಲ್ ಸೂತ್ರವನ್ನು ಅನುಸರಿಸುತ್ತಾರೆ. ಈ ಹಿನ್ನೆಲೆಯಲ್ಲಿ ಹಲಾಲ್ ಮಾಂಸ, ಕೋಳಿ ಕೊಳ್ಳದಿರಲು ಹಿಂದುಗಳಿಗೆ ಕರೆ ಕೊಡಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Thu Mar 24 , 2022
ಬೆಂಗಳೂರು, ಮಾ. 24- ಮಹಿಳಾ ಸಾಫ್ಟ್ವೇರ್ ಎಂಜಿನಿಯರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕೆಂಪಾಪುರದ ನಿವಾಸಿ ನಿಖಿಲಾ (37) ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ. ನಿಖಿಲಾ ಅವರು ಅರ್ಜುನ್ ಎಂಬುವವರನ್ನು ವಿವಾಹವಾಗಿದ್ದು, ಕೆಂಪಾಪುರದಲ್ಲಿ ವಾಸವಾಗಿದ್ದರು. ದಂಪತಿ ಅನ್ಯೋನ್ಯವಾಗಿದ್ದರು ಎನ್ನಲಾಗಿದೆ. ಈ ನಡುವೆ ನಿನ್ನೆ ನಿಖಿಲಾ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸುದ್ದಿ ತಿಳಿದು ಅಮೃತಹಳ್ಳಿ ಠಾಣೆ […]