ಮೈಸೂರಿನಲ್ಲಿ ನಡೆಯುತ್ತಿರುವ ಶ್ರೀ, ಪ್ರಣತಿ ನಟನೆಯ ‘ಜಸ್ಟ್ ಪಾಸ್’ ಸಿನಿಮಾ ಶೂಟಿಂಗ್.

ರಾಯ್ಸ್ ಎಂಟರ್ಟೇನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ ‘ಜಸ್ಟ್ ಪಾಸ್’ ಚಿತ್ರಕ್ಕೆ ಅರಮನೆ ನಗರಿ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮೈಸೂರಿನ ಹಾರ್ಡ್ವಿಕ್ ಪಬ್ಲಿಕ್ ಕಾಲೇಜ್, ನಂಜರಾಜ ಹಾಲ್, ಆಲಮ ಚೌಟ್ರಿ, ಗೌರ್ನ್ಮೆಂಟ್ ಗೆಸ್ಟ್ ಹೌಸ್, ಲೇಡಿಸ್ ಕ್ಲಬ್ ಮುಂತಾದ ಕಡೆ 25 ದಿನಗಳ ಚಿತ್ರೀಕರಣ ನಡೆದಿದೆ.
ನಾಯಕ ಶ್ರೀ, ನಾಯಕಿ ಪ್ರಣತಿ, ಸಾಧುಕೋಕಿಲ, ರಂಗಾಯಣ ರಘು, ಸುಚೇಂದ್ರ ಪ್ರಸಾದ್, ‘ಕಾಂತಾರ’ ಸಿನಿಮಾ ಖ್ಯಾತಿಯ ದೀಪಕ್ ರೈ, ಪ್ರಕಾಶ್ ತುಂಬಿನಾಡು, ಗೋವಿಂದೇಗೌಡ, ದಾನಪ್ಪ ಮುಂತಾದ ಕಲಾವಿದರು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.
‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಂ.ರಘು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಹರ್ಷವರ್ಧನ್ ರಾಜ್ ‘ಜಸ್ಟ್ ಪಾಸ್’ ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಸುಜಯ್ ಕುಮಾರ್ ಛಾಯಾಗ್ರಹಣ ಮಾಡುತ್ತಿದ್ದಾರೆ.
ನಟ ಶ್ರೀ ಅವರು ಕೊನೆಯದಾಗಿ ‘ಗಜಾನನ & ಗ್ಯಾಂಗ್’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಒಟ್ಟಾರೆಯಾಗಿ ಶ್ರೀ ಅವರು ಸದ್ಯ ಬೆಳ್ಳಿತೆರೆಯಲ್ಲಿ ಬ್ಯುಸಿಯಾಗಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಮೀನ ರಾಶಿ ಭವಿಷ್ಯ.

Fri Jan 27 , 2023
ನಿಮ್ಮ ಅಧಿಕ ಚೈತನ್ಯವನ್ನು ಇಂದು ಚೆನ್ನಾಗಿ ಬಳಸಿಕೊಳ್ಳಲು ಪ್ರಯತ್ನಿಸಿ. ವ್ಯಾಪಾರ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಸಂಜೆ ಅಡಿಗೆ ಮನೆಗೆ ಅಗತ್ಯ ವಸ್ತುಗಳ ಖರೀದಿ ನಿಮ್ಮನ್ನು ವ್ಯಸ್ತವಾಗಿಡುತ್ತದೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು. ಇದು ನಿಮ್ಮನ್ನು ವ್ಯಕ್ತಪಡಿಸಲು ಮತ್ತು ಸೃಜನಶೀಲ ಸ್ವರೂಪದ ಯೋಜನೆಗಳಲ್ಲಿ ಕೆಲಸ ಮಾಡಲು ಒಳ್ಳೆಯ ಸಮಯ. ಇಂದು ಈ ರಾಶಿಚಕ್ರದ ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯವನ್ನು ದುರುಪಯೋಗಪಡಿಸಿಕೊಳ್ಳಬಹುದು. […]

Advertisement

Wordpress Social Share Plugin powered by Ultimatelysocial