ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ಅದ್ದೂರಿ ಮತ್ತು ಸಡಗರ ಸಂಭ್ರಮದಿಂದ ಬಸವೇಶ್ವರ ಜಯಂತಿ ಮಹೋತ್ಸವ ಜರುಗಿತು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಂಜನಗೂಡು ತಾಲೂಕು ಘಟಕದ ವತಿಯಿಂದ ಬಸವ ಜಯಂತಿಯನ್ನು ಆಯೋಜಿಸಲಾಗಿತ್ತು. ಪಟ್ಟಣದ ಹುಲ್ಲಹಳ್ಳಿ ಮುಖ್ಯರಸ್ತೆಯ ಮಂಗಳ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು. ಶಿವ ಪಾದ ಸ್ವಾಮಿ ಗದ್ದುಗೆಯಿಂದ ಹುಲ್ಲಹಳ್ಳಿ ಮುಖ್ಯರಸ್ತೆಯ ಮಂಗಳ ಮಂಟಪದ ವರೆಗೂ ಅದ್ದೂರಿ ಮೆರವಣಿಗೆ ನಡೆಯಿತು. ನಾದಸ್ವರ ನಂದಿಕಂಬ ಕುಣಿತ, ಗಾರುಡಿ ಗೊಂಬೆ , ಡೊಳ್ಳು ಕುಣಿತ , ಪೂಜಾ ಕುಣಿತ ಗೊರವರ ಕುಣಿತ, ವೀರಗಾಸೆ, ಕಳಸ ಹೊತ್ತ ಮಹಿಳೆಯರಿಂದ ಹಾಗೂ ವಿವಿಧ ಜಾನಪದ ಕಲಾತಂಡಗಳೊಂದಿಗೆ ಭಕ್ತಿ ಪೂರ್ವಕ ಮೆರವಣಿಗೆ ನಡೆಸಲಾಯಿತು .
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada