ಮೈಸೂರು: ಜಿಲ್ಲೆಯ ರಿಂಗ್ ರಸ್ತೆಯಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣ ನಡೆದಾಗ ಸ್ಥಳೀಯರು ರೊಚ್ಚಿಗೆದ್ದು ದಾಂಧಲೆ ನಡೆಸಿದ್ದರು. ಅದಾದಮೇಲೆ ಖುದ್ದು ಬೈಕ್ ಮೇಲೆ ಸಂಚರಿಸುತ್ತಿದ್ದ ವ್ಯಕ್ತಿ ಪೊಲೀಸರ ಸಮ್ಮುಖದಲ್ಲಿ ನೀಡಿದ ಹೇಳಿಕೆಯೇ ಬೇರೊಂದು.. ಅದಾದ ಮೇಲೆ ಪೊಲೀಸರು ದಾಂಧಲೆ ನಡೆಸಿದವರ ಪೈಕಿ 13 ಮಂದಿಯನ್ನು ಒಳಗೆ ಹಾಕಿದ್ದಾರೆ. ಇಷ್ಟೆಲ್ಲಾ ಆದ ಮೇಲೆ, ಖದ್ದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅವರು ಅಂದು ಸ್ಥಳದಲ್ಲಿದ್ದ ಅಷ್ಟೂ ಮಂದಿ ಪೊಲೀಸರನ್ನು ಪ್ರಶಂಸಿ, ಗೌರವಿಸುತ್ತಿರುವ ಸುದ್ದಿಯೂ ಕೇಳಿಬಂದಿದೆ. ಒಟ್ಟಿನಲ್ಲಿ ಪ್ರಕರಣವನ್ನು ಎಳೆ ಎಳೆಯಾಗಿ ಬಿಡಿಸಿ ನೋಡಿದಾಗ ಅಸಹಜ ಘಟನಾವಳಿಗಳು ನಡೆದಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ರಿಂಗ್ ರಸ್ತೆಯಲ್ಲಿ ನಡೆದ ಅಪಘಾತದ ವೇಳೆ ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮೈಸೂರು ನಗರದ ಪೊಲೀಸ್ ಆಯುಕ್ತ ಡಾಚಂದ್ರಗುಪ್ತ ಪ್ರಹಲಸಷಾ ಪತ್ರ ನೀಡಿ ಗೌರವಿಸಿದ್ದಾರೆ. ಅಪಘಾತ ಸಮಯದಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಂಚಾರ ಪೊಲೀಸರು 12 ತುರ್ತು ಸಂದನ ವಾತಾವದ ಕರ್ತವ್ಯದ ಪೊಲೀಸರು ಗಾಯಗೊಂಡಿದ್ದ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಮೃತನ ಚಲನವನ್ನು ಕವಾಗಾರಕ್ಕೆ ತಲುಪಿಸಿ ಅಪಘಾತಗೊಂಡಿದ್ದ ವಾಹನಗಳನ್ನು ಸ್ಥಳದಿಂದ ತೆರವುಗೊಳಿಸುವಲ್ಲಿ ಆಟತ್ತಮ ಕಾರ್ಯ ನಿರ್ವಹಿಸಿದ್ದಾರೆ. ಹೀಗಾಗಿ ಇದನ್ನು ಗಮನಿಸಿ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.