ಮೈಸೂರು ರಿಂಗ್ ರಸ್ತೆ ಅಪಘಾತ ಪ್ರಕರಣ: ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪೊಲೀಸ್ ಆಯುಕ್ತರಿಂದ ಪ್ರಶಂಸನಾ ಪತ್ರ

ಮೈಸೂರು: ಜಿಲ್ಲೆಯ ರಿಂಗ್ ರಸ್ತೆಯಲ್ಲಿ ಇತ್ತೀಚೆಗೆ ಅಪಘಾತ ಪ್ರಕರಣ ನಡೆದಾಗ ಸ್ಥಳೀಯರು ರೊಚ್ಚಿಗೆದ್ದು ದಾಂಧಲೆ ನಡೆಸಿದ್ದರು. ಅದಾದಮೇಲೆ ಖುದ್ದು ಬೈಕ್ ಮೇಲೆ ಸಂಚರಿಸುತ್ತಿದ್ದ ವ್ಯಕ್ತಿ ಪೊಲೀಸರ ಸಮ್ಮುಖದಲ್ಲಿ ನೀಡಿದ ಹೇಳಿಕೆಯೇ ಬೇರೊಂದು.. ಅದಾದ ಮೇಲೆ ಪೊಲೀಸರು ದಾಂಧಲೆ ನಡೆಸಿದವರ ಪೈಕಿ 13 ಮಂದಿಯನ್ನು ಒಳಗೆ ಹಾಕಿದ್ದಾರೆ. ಇಷ್ಟೆಲ್ಲಾ ಆದ ಮೇಲೆ, ಖದ್ದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಅವರು ಅಂದು ಸ್ಥಳದಲ್ಲಿದ್ದ ಅಷ್ಟೂ ಮಂದಿ ಪೊಲೀಸರನ್ನು ಪ್ರಶಂಸಿ, ಗೌರವಿಸುತ್ತಿರುವ ಸುದ್ದಿಯೂ ಕೇಳಿಬಂದಿದೆ. ಒಟ್ಟಿನಲ್ಲಿ ಪ್ರಕರಣವನ್ನು ಎಳೆ ಎಳೆಯಾಗಿ ಬಿಡಿಸಿ ನೋಡಿದಾಗ ಅಸಹಜ ಘಟನಾವಳಿಗಳು ನಡೆದಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ರಿಂಗ್ ರಸ್ತೆಯಲ್ಲಿ ನಡೆದ ಅಪಘಾತದ ವೇಳೆ ಕಾರ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಮೈಸೂರು ನಗರದ ಪೊಲೀಸ್ ಆಯುಕ್ತ ಡಾಚಂದ್ರಗುಪ್ತ ಪ್ರಹಲಸಷಾ ಪತ್ರ ನೀಡಿ ಗೌರವಿಸಿದ್ದಾರೆ. ಅಪಘಾತ ಸಮಯದಲ್ಲಿ ತಕ್ಷಣ ಕಾರ್ಯ ಪ್ರವೃತ್ತರಾದ ಸಂಚಾರ ಪೊಲೀಸರು 12 ತುರ್ತು ಸಂದನ ವಾತಾವದ ಕರ್ತವ್ಯದ ಪೊಲೀಸರು ಗಾಯಗೊಂಡಿದ್ದ ವ್ಯಕ್ತಿಯನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಮೃತನ ಚಲನವನ್ನು ಕವಾಗಾರಕ್ಕೆ ತಲುಪಿಸಿ ಅಪಘಾತಗೊಂಡಿದ್ದ ವಾಹನಗಳನ್ನು ಸ್ಥಳದಿಂದ ತೆರವುಗೊಳಿಸುವಲ್ಲಿ ಆಟತ್ತಮ ಕಾರ್ಯ ನಿರ್ವಹಿಸಿದ್ದಾರೆ. ಹೀಗಾಗಿ ಇದನ್ನು ಗಮನಿಸಿ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಬಾಲಿವುಡ್​ ನಟ ಅಮೀರ್​ ಖಾನ್​ಗೆ ಕೊರೋನಾ ಪಾಸಿಟಿವ್​..!

Wed Mar 24 , 2021
ಇತ್ತೀಚೆಗಷ್ಟೆ ಸಾಮಾಜಿಕ ಜಾಲತಾಣಕ್ಕೆ ಗುಡ್​ ಬೈ ಹೇಳುವ ಮೂಲಕ ಸದ್ದು ಮಾಡಿದ್ದ ನಟ ಅಮೀರ್​ ಖಾನ್ ಈಗ ಕೊರೋನಾ ವಿಷಯದಿಂದಾಗಿ ಸುದ್ದಿಯಲ್ಲಿದ್ದಾರೆ. ನಟ ಅಮೀರ್ ಖಾನ್​ ಅವರಿಗೆ ಕೊರೋನಾ ಸೋಂಕಾಗಿದ್ದು, ಸದ್ಯಕ್ಕೆ ಹೋಂ ಕ್ವಾರಂಟೈನ್​ನಲ್ಲಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೋನಾ ಎರಡನೇ ಅಲೆ ಆರಂಭವಾಗಿದೆ. ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೆ ನಟ ರಣಬೀರ್​ ಕಪೂರ್ ಸಹ ಕೊರೋನಾ ಸೋಂಕಿನಿಂದಾಗಿ ಹೋಂ ಕ್ವಾರಂಟೈನ್​ನಲ್ಲಿದ್ದಾರೆ.ಈಗ ನಟ ಅಮೀರ್ ಖಾನ್​ ಅವರಿಗೂ ಕೊರೋನಾ ಸೋಂಕಾಗಿದೆ.ಅಮೀರ್ […]
file

Advertisement

Wordpress Social Share Plugin powered by Ultimatelysocial