ಮೈಸೂರು: ‘ಶಾಲೆ ಪರಮಪೂಜಿತ ಸ್ಥಳವಾಗಿದ್ದು, ಅಲ್ಲಿ ಧರ್ಮದ ಪ್ರದರ್ಶನಕ್ಕೆ ಅವಕಾಶವಿಲ್ಲ!

ಮೈಸೂರು: ‘ಶಾಲೆ ಪರಮಪೂಜಿತ ಸ್ಥಳವಾಗಿದ್ದು, ಅಲ್ಲಿ ಧರ್ಮದ ಪ್ರದರ್ಶನಕ್ಕೆ ಅವಕಾಶವಿಲ್ಲ. ಹಿಜಾಬ್‌ ಅಥವಾ ಕೇಸರಿ ಶಾಲು ಮನೆ ಹಾಗೂ ಇತರ ಕಡೆ ಪ್ರದರ್ಶಿಸಬಹುದೇ ಹೊರತು, ಶಾಲೆಗಳಲ್ಲಿ ಅಲ್ಲ’ ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು.ಮೈಸೂರಿನಲ್ಲಿ ಬುಧವಾರ ಮಾಧ್ಯಮದವರ ಜತೆ ಮಾತನಾಡಿ, ‘ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತುವ ಕೆಲಸ ರಾಜಕೀಯ ಪಕ್ಷಗಳಿಂದ ನಡೆಯುತ್ತಿದೆ. ಹಿಂದೂ ಕೋಮುವಾದ, ಮುಸ್ಲಿಂ ಮತೀಯವಾದ ಎರಡು ವಿಜೃಂಭಿಸುತ್ತಿವೆ. ಕೇಸರಿ ಶಾಲು, ಹಿಜಾಬ್‌ಗಿಂತ ಶಿಕ್ಷಣ ದೊಡ್ಡದು. ಧರ್ಮದ ಲಾಂಛನ ಮನೆಗಳಿಗೆ ಸೀಮಿತವಾಗಿರಲಿ. ಅವನ್ನು ಶಾಲೆಯೊಳಗೆ ತರಬೇಡಿ’ ಎಂದು ಸಲಹೆ ನೀಡಿದರು.’ಬಸವರಾಜ ಬೊಮ್ಮಾಯಿ ಅವರೇ, ಯಾರೋ ಮೂರು ಜನ ಕಲ್ಲೆಸೆದ ಕಾರಣಕ್ಕೆ ಶಾಲೆ- ಕಾಲೇಜುಗಳನ್ನು ಮೂರು ದಿನ ಮುಚ್ಚಿಸುತ್ತೀರಾ? ಕಲ್ಲು ಹೊಡೆದವರನ್ನು ಒದ್ದು ಒಳಗೆ ಹಾಕಲು ನಮ್ಮಲ್ಲಿ ಕಾನೂನು ಇಲ್ಲವೇ? ಕಾನೂನಿನಡಿ ಶಿಕ್ಷಿಸುವ ಬದಲು ಶಾಲೆಗೆ ಬಾಗಿಲು ಹಾಕುತ್ತೀರಾ?’ ಎಂದು ತರಾಟೆಗೆ ತೆಗೆದುಕೊಂಡರು.’ಕೆಲವು ಶಾಲೆಗಳ ಆಡಳಿತ ವರ್ಗದವರು ಒಂದೊಂದು ಪಕ್ಷಕ್ಕೆ ಸೇರಿಕೊಂಡಿದ್ದಾರೆ. ಯಾವುದಾದರೂ ಒಂದು ಪಕ್ಷವನ್ನು ಬೆಂಬಲಿಸಿ ಈ ವಿವಾದಕ್ಕೆ ತುಪ್ಪ ಸುರಿಯುವ ಕೆಲಸ ಮಾಡಿದರೆ, ಅಂತಹ ಶಿಕ್ಷಣ ಸಂಸ್ಥೆಗಳ ಪರವಾನಗಿ ರದ್ದುಗೊಳಿಸಬೇಕು’ ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಿರುದ್ಯೋಗ ಮತ್ತು ವಲಸೆ: ಕರ್ನಾಟಕದ ಗೋಹತ್ಯೆ ವಿರೋಧಿ ಕಾನೂನಿನ ಪತನ;

Wed Feb 9 , 2022
ಬಿಜೆಪಿ ನೇತೃತ್ವದ ಸರ್ಕಾರವು ಜಾರಿಗೆ ತಂದ ನಿಷೇಧವು ಗೋಮಾಂಸ ವ್ಯಾಪಾರದಲ್ಲಿರುವವರ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಅವರ ಸುರ್ಮಾ-ರೇಖೆಯ ಕಣ್ಣುಗಳು ಭರವಸೆಯ ಕೆಲವು ಕುರುಹುಗಳನ್ನು ಹೊಂದಿದ್ದವು, ಆದರೆ ಬಿ ಶಾಹಿದ್ ಖುರೇಷಿ ಅವರು ತಮ್ಮ ಹಳೆಯ ಕೆಲಸಕ್ಕೆ ಹಿಂತಿರುಗುವುದಿಲ್ಲ ಎಂದು ಬಹುಶಃ ತಿಳಿದಿದ್ದರು. ದಶಕಗಳಿಂದ, ಅವರ ಕೈಗಳು ಪೂರ್ವ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿರುವ ಕಸಾಯಿಖಾನೆಯಲ್ಲಿ ಮಾಂಸವನ್ನು ಕೆಲಸ ಮಾಡುತ್ತಿದ್ದರು. ಕಟುಕನ ನುರಿತ ಆದರೆ ಶ್ರಮದಾಯಕ ಕೆಲಸದಿಂದ ಅವನ ಅಂಗೈಗಳು ಗಟ್ಟಿಯಾಗುತ್ತವೆ ಮತ್ತು ಒರಟಾಗಿದ್ದವು. […]

Advertisement

Wordpress Social Share Plugin powered by Ultimatelysocial