ಜೆಸಿಬಿ ಚಾಲಕನನ್ನು ಫೋನ್ ಮಾಡಿ ಕರೆಸಿಕೊಂಡ ದುಷ್ಕರ್ಮಿಗಳು ಅಟ್ಟಾಡಿಸಿ ಇರಿದಿದ್ದೂ ಅಲ್ಲದೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಂದಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ನಗರದ ಹೊರವಲಯದ ರಮ್ಮನಹಳ್ಳಿಯಲ್ಲಿ ಅರ್ಜುನ್ (24) ಕೊಲೆಯಾದ ಯುವಕ.
ಜೆಸಿಬಿ ವಾಹನ ಚಾಲಕನಾಗಿದ್ದ ಅರ್ಜುನ್ ನನ್ನು ಕಳೆದ ರಾತ್ರಿ ಫೋನ್ ಮಾಡಿ ಕರೆಸಿಕೊಂಡ ಪರಿಚಯಿಸ್ಥರೇ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಚಾಕುವಿನಿಂದ ಮನಬಂದಂತೆ ಚುಚ್ಚಿ ಅಟ್ಟಾಡಿಸಿ ಕೊಲೆಗೆ ಯತ್ನಿಸಿರುವ ದುಷ್ಕರ್ಮಿಗಳು, ಕೊನೆಗೆ ಹಳ್ಳಕ್ಕೆ ತಳ್ಳಿ ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಅಡಿಷನಲ್ ಎಸ್ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೈಸೂರು ಮೆಡಿಕಲ್ ಕಾಲೇಜು ಶವಾಗಾರದಲ್ಲಿ ಮೃತ ದೇಹದ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.