ನಾಗಮಂಗಲ ತಾಲ್ಲೂಕಿನ ಕೆಂಪನಕೊಪ್ಪಲು ಗ್ರಾಮದ ಗೇಟ್ನ ಚಾಮರಾಜನಗರ – ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ, ಸ್ವಿಫ್ಟ್ ಕಾರು ಮತ್ತು ಮಿನಿ ಬಸ್ಗಳು ಮುಖಾಮುಖಿಯಾಗಿ ಡಿಕ್ಕಿಯಾದ ಕಾರಣ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಸಾವನ್ನಪ್ಪಿದ ವ್ಯಕ್ತಿಗಳನ್ನು ಕೊಡಗು ಜಿಲ್ಲೆ ಸೋಮವಾರಪೇಟೆ ಮೂಲದ ೩೫ ವರ್ಷದ ಸುದೀಪ್ , ೩೦ ವರ್ಷದ ಶ್ರೀಜಾ ಮತ್ತು ೫೫ ವರ್ಷದ ಸಂಗಮ್ಮ ಎಂದು ಗುರುತಿಸಲಾಗಿದ್ದು, ಕಾರಿನಲ್ಲಿದ್ದ ೧೫ ವರ್ಷದ ಬಾಲಕಿ ಶ್ರೇಯಾ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ, ಇನ್ನು ಈಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಾಲ್ಲೂಕಿನ ಆದಿಚುಂಚನಗಿರಿ ಯಿಂದ ಮೈಸೂರಿನ ಕಡೆಗೆ ವಾಪಾಸಾ ಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಇನ್ನು ವಿಶಯ ತಿಳಿದ ನಂತರ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ.
ನಾಗಮಂಗಲ ಬಳಿ ಅಪಘಾತದಿಂದ ಮೂವರ ಸಾವು
Please follow and like us: