ಬೆಳ್ತಂಗಡಿ, ಫೆ.5: ದ್ವಿಚಕ್ರ ವಾಹನಕ್ಕೆ ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಇಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನಡೆದಿದ್ದು, ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದಾನೆ. ಇನ್ನೋರ್ವ ಗಂಭೀರ ಗಾಯಗೊಂಡಿದ್ದಾನೆ.ಮೃತರನ್ನು ಬೈಕ್ ಸವಾರ, ಮಡಿಕೇರಿ ತಾಲೂಕಿನ ಊರುಬೈಲ್ ಚೆಂಬ್ ಗ್ರಾಮದ ಮುಕ್ಕುಯಿ ಮನೆ ನಿವಾಸಿ ಲಾರೆನ್ಸ್ ಎಂ.ಜಿ.(38) ಎಂದು ಗುರುತಿಸಲಾಗಿದೆ. ಸಹ ಸವಾರ ಬೆಳ್ತಂಗಡಿ ತಾಲೂಕಿನ ನೆಲ್ಲಿಕಾರು ನಿವಾಸಿ ಜಾನ್(81) ಎಂಬವರು ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇವರಿಬ್ಬರು ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಇಂದು ಬೆಳಗ್ಗಿನ ಜಾವ ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ತಿಳಿದುಬಂದಿದೆ.ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada