ಬೆಂಗಳೂರು: ತಮ್ಮನ್ನು ತಳ್ಳಿ ಅವಮಾನಿಸುವ ಯಾವುದೇ ಉದ್ದೇಶ ಇಲ್ಲ, ನನ್ನ ಅರಿವಿನಲ್ಲೂ ಇಲ್ಲ. ಜನರ ಗುಂಪಿನಲ್ಲಿ ನನ್ನ ಅರಿವಿಗೆ ಬಾರದೇ ಅಚಾತುರ್ಯವಾಗಿದ್ದರೆ ವಿಷಾದಿಸುವೆ… ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ್ ಅವರಿಗೆ ಪತ್ರ ಬರೆದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕ್ಷಮೆ ಕೋರಿದ್ದಾರೆ.
ಮೇಕೆದಾಟು ಪಾದಯಾತ್ರೆಯ ವೇಳೆ ಬಿ.ಆರ್. ಪಾಟೀಲ್ ಅವರನ್ನು ತಳ್ಳಿ, ಟೋಪಿ ಕಿತ್ತು ಹಾಕಿದರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಡಿಕೆಶಿ ಪತ್ರ ಬರೆದು ಕ್ಷಮೆ ಕೋರಿದ್ದಾರೆ. ಪಾದಯಾತ್ರೆ ಅರಮನೆ ಮೈದಾನಕ್ಕೆ ಬಂದ ಸಂದರ್ಭದಲ್ಲಿ ಪಾಟೀಲ್ ಅವರನ್ನು ಅನುಚಿತವಾಗಿ ನಡೆಸಿಕೊಂಡರೆಂಬ ಆರೋಪ ಕೇಳಿ ಬಂದಿತ್ತು. ಪಾಟೀಲ್ ಈ ಬಗ್ಗೆ ಪಕ್ಷದ ಹೈಕಮಾಂಡ್ಗೂ ದೂರು ನೀಡಿದ್ದರು. ಹಿರಿಯ ಮುಖಂಡರಿಗೆ ಅಪಮಾನ ಮಾಡಿದ ಬಗ್ಗೆ ಹೈಕಮಾಂಡ್ ಸಹ ಅಸಮಾಧಾನ ವ್ಯಕ್ತಪಡಿಸಿತ್ತು. ಆ ಹಿನ್ನೆಲೆಯಲ್ಲಿ ಡಿಕೆಶಿ ಗುರುವಾರ ಪತ್ರ ಬರೆದಿದ್ದಾರೆ. ಗೋವಾದಿಂದ ವಾಪಸಾದ ಬಳಿಕ ಖುದ್ದು ಭೇಟಿ ಮಾಡುವುದಾಗಿಯೂ ಪತ್ರದಲ್ಲಿ ಡಿಕೆಶಿ ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada
Please follow and like us:
Fri Mar 11 , 2022
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾಜಿ ಶಾಸಕ ಬಿ.ಆರ್.ಪಾಟೀಲ್ ಅವರಲ್ಲಿ ವಿಷಾದ ಕೋರಿದ್ದಾರೆ. ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ನಾನು ತಮ್ಮನ್ನು ತಳ್ಳಿ ಅವಮಾನ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇಂತಹ ಘಟನೆ ನಡೆದಿರುವುದು ನನಗೆ ಅರಿವಿಲ್ಲ. ಜನರ ನೂಕುನುಗ್ಗಲಿನಲ್ಲಿ ಅಂತಹ ಅಚಾತುರ್ಯ ನಡೆದಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ತಮ್ಮಂತಹ ಹಿರಿಯ ನಾಯಕರಿಗೆ ಅವಮಾನ ಮಾಡುವುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಪಾಟೀಲ್ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಪಕ್ಷದ ಹಿರಿಯ ಮುಖಂಡರ ಆದೇಶದ […]