ನಾನು ಹಿಜಾಬ್ ಧರಿಸಿ ವಿಧಾನಸಭೆಗೆ ಬರಬಹುದಾದರೆ, ಅವರು ಕಾಲೇಜಿಗೇಕೆ ಹೋಗಬಾರದು?: ಶಾಸಕಿ ಕನೀಝ್ ಫಾತಿಮಾ

 

ಬೆಂಗಳೂರು: ಹಿಜಾಬ್ ಧರಿಸಿ ನನಗೆ ವಿಧಾನಸಭೆ ಪ್ರವೇಶಿಸಲು ಸಾಧ್ಯವಾದರೆ, ಈ ಹುಡುಗಿಯರಿಗೆ ಶಾಲೆ ಅಥವಾ ಕಾಲೇಜಿನಲ್ಲಿ ಏಕೆ ಅವಕಾಶ ನಿರಾಕರಿಸಲಾಗಿದೆ ಎಂದು ಕಲಬುರಗಿ ಉತ್ತರ ವಿಧಾನಸಭೆ ಕ್ಷೇತ್ರ ಕನೀಝ್ ಫಾತಿಮಾ ಪ್ರಶ್ನಿಸಿದ್ದಾರೆ.ಉಡುಪಿ ಕುಂದಾಪುರ ಸೇರಿದಂತೆ ಕೆಲ ಸರಕಾರಿ ವಿದ್ಯಾಸಂಸ್ಥೆಗಳಲ್ಲಿ ಸಂಘಪರಿವಾರ ಪ್ರೇರಿತ ʼಹಿಜಾಬ್‌- ಕೇಸರಿ ಶಾಲುʼ ಪ್ರಕರಣಕ್ಕೆ ಸಂಬಂಧಿಸಿ ಅವರು ಟ್ವೀಟ್‌ ಮಾಡಿದ್ದಾರೆ. ಹಿಜಾಬ್‌ ಧರಿಸಿದ್ದಕ್ಕೆ ವಿದ್ಯಾರ್ಥಿನಿಯರನ್ನು ಗೇಟ್‌ ಹೊರಗಡೆ ನಿಲ್ಲಿಸಿದ ವೀಡಿಯೋವನ್ನೂ ಅವರು ಟ್ವೀಟ್‌ ಮಾಡಿದ್ದಾರೆ.ಶುಕ್ರವಾರ ತಮ್ಮ ಟ್ವೀಟ್‌ ನಲ್ಲಿ ಅವರು, “ಹಿಜಾಬ್ ಧರಿಸಿ ನನಗೆ ವಿಧಾನಸಭೆ ಪ್ರವೇಶಿಸಲು ಸಾಧ್ಯವಾದರೆ, ಈ ಹುಡುಗಿಯರಿಗೆ ಶಾಲೆ ಅಥವಾ ಕಾಲೇಜಿನಲ್ಲಿ ಏಕೆ ಅವಕಾಶ ನಿರಾಕರಿಸಲಾಗಿ ಶಿಕ್ಷಣ ಸಂಸ್ಥೆಗಳಲ್ಲಿ ಏಕಾಏಕಿ ಕೇಸರೀಕರಣಗೊಳಿಸುವ ಪ್ರಯತ್ನ ಏಕೆ ನಡೆಯುತ್ತಿದೆ? ಹಿಜಾಬ್ ನಮ್ಮ ಹಕ್ಕು. ಅದಕ್ಕೆ ಬೇಕಾಗಿ ಪ್ರಾಣ ಬೇಕಾದರೂ ಕೊಡಬಹುದು ಆದರೆ ಹಿಜಾಬ್ ಅನ್ನು ಬಿಟ್ಟು ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಂಬೇಡ್ಕರ್ ಫೋಟೋ ವಿವಾದಕ್ಕೆ ಅಂತ್ಯ ಹಾಡಿದ ಹೈಕೋರ್ಟ್

Sat Feb 5 , 2022
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಫೋಟೋ ವಿವಾದಕ್ಕೆ ಹೈಕೋರ್ಟ್ ಅಂತ್ಯಹಾಡಿದೆ. ಕೋರ್ಟ್ ನ ಅಧಿಕೃತ ಸಮಾರಂಭಗಳಲ್ಲಿ ಫೋಟೋ ಇಡುತ್ತೇವೆ. ಡಾ. ಬಿ.ಆರ್. ಅಂಬೇಡ್ಕರ್ ಫೋಟೋ ಇಡಲು ನ್ಯಾಯಮೂರ್ತಿಗಳ ಪೂರ್ಣ ಸಭೆಯಲ್ಲಿ ನಿರ್ಧರಿಸಲಾಗಿದೆ ಎನ್ನಲಾಗಿದೆ.ಅಂಬೇಡ್ಕರ್ ಅವರ ಫೋಟೋ ಕೋರ್ಟ್ ಅಧಿಕೃತ ಸಮಾರಂಭಗಳಲ್ಲಿ ಇಡಲಾಗುತ್ತದೆ. ಜನವರಿ 26 ಗಣರಾಜ್ಯೋತ್ಸವ, ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ, ನವೆಂಬರ್ 26 ಸಂವಿಧಾನ ದಿನದಂದು ಅಂಬೇಡ್ಕರ್ ಅವರ ಫೋಟೋ ಇಡಲಾಗುವುದು. ಜಿಲ್ಲಾ ಮತ್ತು ತಾಲೂಕು […]

Advertisement

Wordpress Social Share Plugin powered by Ultimatelysocial