ನಾನು ಮತ್ತೊಮ್ಮೆ ಸಿಎಂ ಆಗೋ ಪ್ರಶ್ನೆಯೇ ಇಲ್ಲ : ಬಿಎಸ್‌ವೈ ಸ್ಪಷ್ಟನೆ

ಬೆಂಗಳೂರು,ಮಾ.11- ಮತ್ತೊಮ್ಮೆ ತಾವು ರಾಜ್ಯದ ಮುಖ್ಯಮಂತ್ರಿಯಾಗುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿಧಾನಸಭೆಯಲ್ಲಿಂದು ಆಯವ್ಯಯದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಸಿಎಂ ಆಗುತ್ತೇನೆಂದು ಹೇಳಿಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.

ರಾಜ್ಯಾದ್ಯಂತ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್, ಪಕ್ಷದ ಕಾರ್ಯಕ್ರಮಗಳನ್ನು ಇಟ್ಟುಕೊಂಡು ಎಲ್ಲ ಮುಖಂಡರೊಂದಿಗೆ ಪ್ರವಾಸ ಮಾಡಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ. ನೀವು ನಿಮ್ಮ ಕಾರ್ಯಕ್ರಮಗಳನ್ನು ಇಟ್ಟುಕೊಂಡು ಪ್ರವಾಸಕ್ಕೆ ಬನ್ನಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಹೇಳಿದರು.

ದೇಶದ ಜನ ಪ್ರಧಾನಿ ಮೋದಿ ಮತ್ತು ಬಿಜೆಪಿ ಪರವಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಾವು ಒಗ್ಗಟ್ಟಿನಿಂದ ಹೋರಾಟ ಮಾಡಿ 130ರಿಂದ 140 ಸ್ಥಾನಗಳಲ್ಲಿ 100ಕ್ಕೆ ನೂರರಷ್ಟು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗುತ್ತೇವೆ. ಮತ್ತೆ ಸರ್ಕಾರ ತರಲು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇವೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾ.13 ರಂದು ಮಹಿಳೆಯರ ಬೃಹತ್ ಪರಿವರ್ತನಾ ಬೈಕ್ ರಾಲಿ

Fri Mar 11 , 2022
ಬೆಂಗಳೂರು, ಮಾ. 11: ಅಂತಾ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಅಕೀಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ಮಹಿಳಾ ಘಟಕ ಇದೇ 13 ರಂದು ಭಾನುವಾರ ಬೆಂಗಳೂರಿನಲ್ಲಿ ಮಹಿಳೆಯರ ಬೃಹತ್ ಪರಿವರ್ತನಾ ಬೈಕ್ ರಾಲಿ ಆಯೋಜಿಸಿದೆ.ಬಸವನಗುಡಿಯ ಶಂಕರಪುರಂನ ಶೃಂಗೇರಿ ಶಂಕರಮಠದಿಂದ ಆರಂಭವಾಗಿ ಬನಶಂಕರಿ 2ನೇ ಘಟ್ಟದಲ್ಲಿರುವ ಮಹಾಸಭಾ ಕಚೇರಿ ವರೆಗೆ ನಡೆಲಿರುವ ಈ ರ್ಯಾಲಿಯನ್ನು ಅಂದು ಬೆಳಿಗ್ಗೆ ಎಂಟು ಗಂಟೆಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು […]

Advertisement

Wordpress Social Share Plugin powered by Ultimatelysocial