ಯುವಜನೋತ್ಸವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಯುವಜನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಾಕಷ್ಟು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಹುಬ್ಬಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆ ಪರಿಶೀಲನೆ ನಡೆಸಲಾಯಿತು.
ಹೌದು ಈಗಾಗಲೇ ಸಚಿವರು ಹಾಗೂ ರಾಜಕೀಯ ನಾಯಕರು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಅಲ್ಲದೇ ಮೋದಿಯವರು ಕೂಡ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮೂಲಕ ರೈಲ್ವೆ ಮೈದಾನಕ್ಕೆ ತೆರಳುತ್ತಿದ್ದು, ಈ ನಿಟ್ಟಿನಲ್ಲಿ ಶ್ವಾನದಳ, ಸ್ಪೆಷಲ್ ಪೊಲೀಸ್ ಪೋರ್ಸ್ ಮೂಲಕ ಭದ್ರತೆ ಪರಿಶೀಲನೆ ನಡೆಸಲಾಗುತ್ತಿದೆ.
ಇನ್ನೂ ಪೊಲೀಸ್ ಅಧಿಕಾರಿಗಳು ಹಾಗೂ ಸಿಎಂ ಆಪ್ತ ಸಹಾಯಕರು ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದ್ದು, ಇನ್ನೆನೂ ಕೆಲವು ಕ್ಷಣಗಳಲ್ಲಿ ಸಿಎಂ ಕೂಡ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗೂಳಿಪುರ ಗ್ರಾಮದ ವೀರಶೈವ ಬಡಾವಣೆಯಲ್ಲಿ ವಿದ್ಯುತ್ ಕಂಬಕ್ಕಾಗಿ ಆಗ್ರಹ

Thu Jan 12 , 2023
ಚಾಮರಾಜನಗರ ತಾಲ್ಲೂಕಿನ ಗೂಳಿಪುರ ಗ್ರಾಮದ ವೀರಶೈವ ಬಡಾವಣೆಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತಿ ವತಿಯಿಂದ ಬೋರ್ವೆಲ್ ಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದು, ವಿದ್ಯುತ್ ಹರಿಸಲು ಕಂಬವಿಲ್ಲದೆ ದೂರದಿಂದ ಲೈನ್ ಎಳೆದಿದ್ದಾರೆಈ ಲೈನ್ಗಳು ಮನೆಗಳ ಮೇಲೆ ಹಾದು ಹೋಗಿರುವುದರಿಂದ ವಾಸದ ಮನೆಯವರು ಭಯಪಟ್ಟು ಓಡಾಡುವ ಪರಿಸ್ಥಿತಿ ಉಂಟಾಗಿದೆಇದೇ ರಸ್ತೆಯ ಮೂಲಕ ಶಾಲೆಗೆ ಮಕ್ಕಳು ಸಾರ್ವಜನಿಕರು ದಿನನಿತ್ಯ ಭಯದ ವಾತಾವರಣದಲ್ಲಿ ಓಡಾಡುತ್ತಿದ್ದಾರೆಕಂಬವಿಲ್ಲದೆ ಲೈನ್ ಗಳನ್ನು ಮನೆಯ ಗೋಡೆಗೆ ಹೇಳದಿರುವುದರಿಂದ ಅನಾಹುತಗಳು ಸಂಭವಿಸಿದರೆ ನೇರ […]

Advertisement

Wordpress Social Share Plugin powered by Ultimatelysocial