ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಯುವಜನೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಸಾಕಷ್ಟು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಹುಬ್ಬಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆ ಪರಿಶೀಲನೆ ನಡೆಸಲಾಯಿತು.
ಹೌದು ಈಗಾಗಲೇ ಸಚಿವರು ಹಾಗೂ ರಾಜಕೀಯ ನಾಯಕರು ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಅಲ್ಲದೇ ಮೋದಿಯವರು ಕೂಡ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮೂಲಕ ರೈಲ್ವೆ ಮೈದಾನಕ್ಕೆ ತೆರಳುತ್ತಿದ್ದು, ಈ ನಿಟ್ಟಿನಲ್ಲಿ ಶ್ವಾನದಳ, ಸ್ಪೆಷಲ್ ಪೊಲೀಸ್ ಪೋರ್ಸ್ ಮೂಲಕ ಭದ್ರತೆ ಪರಿಶೀಲನೆ ನಡೆಸಲಾಗುತ್ತಿದೆ.
ಇನ್ನೂ ಪೊಲೀಸ್ ಅಧಿಕಾರಿಗಳು ಹಾಗೂ ಸಿಎಂ ಆಪ್ತ ಸಹಾಯಕರು ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದ್ದು, ಇನ್ನೆನೂ ಕೆಲವು ಕ್ಷಣಗಳಲ್ಲಿ ಸಿಎಂ ಕೂಡ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
https://play.google.com/store/apps/details?id=com.speed.newskannada