Narendra Modi: ಬರೀ ದೇಶ ಅಲ್ಲ, ವಿದೇಶಗಳ ಗಣ್ಯರಿಂದಲೂ ಪ್ರಧಾನಿ ಮೋದಿ ಜನ್ಮದಿನಕ್ಕೆ ಶುಭಾಷಯಗಳ ಮಹಾಪೂರ

ವದೆಹಲಿ, ಸೆಪ್ಟೆಂಬರ್‌, 17: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 73 ವರ್ಷಗಳನ್ನು ಪೂರೈಸಿ ಇಂದಿಗೆ 74ನೇ ವರ್ಷದ ಹುಟ್ಟುಬ್ಬದ ಸಂಭ್ರಮದಲ್ಲಿದ್ದಾರೆ. ಈಗಾಗಲೇ ರಾಷ್ಟ್ರಪತಿ ಸೇರಿದಂತೆ ದೇಶದ ರಾಜಕೀಯ ಗಣ್ಯರು, ಅಭಿಮಾನಿಗಳು ಮೋದಿ ಅವರ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲಾತಾಣದಲ್ಲಿ ಶುಭಾಷಯ ಕೋರಿದ್ದಾರೆ.

ಮತ್ತೊಂದೆ ವಿದೇಶಗಳ ಗಣ್ಯರಿಂದಲೂ ಮೋದಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಶೇಷವಾದ ಶುಭಹಾರೈಕೆಗಳು ಬರುತ್ತಿವೆ.

ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಲು ವಿರ್ಧಾರ ಮಾಡಿರುವ ಬಿಜೆಪಿ ಇಂದು ದೇಶಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಹಾಗೆಯೇ ರಾಜಕೀಯ ನಾಯಕರು, ಗಣ್ಯರು, ಸೆಲೆಬ್ರೆಟಿಗಳಿಂದ ಪ್ರಧಾನಿ ಅವರಿಗೆ ಜನ್ಮದಿನದ ಶುಭ ಹಾರೈಕೆಗಳು ಹರಿದುಬರುತ್ತಿ

 

ಪ್ರಧಾನಿ ನರೇಂದ್ರ ಮೋದಿಯವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಬೆಳಗ್ಗೆ 11 ಗಂಟೆಯ ಸುಮಾರಿಗೆ ದೆಹಲಿಯ ದ್ವಾರಕಾದಲ್ಲಿ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್ ಯಶೋಭೂಮಿಯನ್ನು ಉದ್ಘಾಟನೆ ಮಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಮೋದಿ ಟ್ವೀಟ್ ಮಾಡಿದ್ದು, ನಾನು ದೆಹಲಿಯ ದ್ವಾರಕಾದಲ್ಲಿ ಅತ್ಯಾಧುನಿಕ ಮತ್ತು ಆಧುನಿಕ ಸಮಾವೇಶ ಮತ್ತು ಎಕ್ಸ್ಪೋ ಕೇಂದ್ರವಾದ ಯಶೋಭೂಮಿಯ ಹಂತ-1 ಅನ್ನು ಉದ್ಘಾಟಿಸುತ್ತೇನೆ. ಸಮ್ಮೇಳನಗಳು ಮತ್ತು ಸಭೆಗಳಿಗೆ ಇದು ಅತ್ಯಂತ ಬೇಡಿಕೆಯ ತಾಣವಾಗಿದೆ ಎಂದು ನನಗೆ ವಿಶ್ವಾಸವಿದೆ. ಇದು ಪ್ರಪಂಚದಾದ್ಯಂತ ಪ್ರತಿನಿಧಿಗಳನ್ನು ಸೆಳೆಯುತ್ತದೆ ಎಂದು ತಿಳಿಸಿದ್ದಾರೆ

ಸುಸ್ಥಿರತೆಗೆ ಯಶೋಭೂಮಿ ಸಮನಾರ್ಥಕವಾಗಿರಲಿದೆ. ಇದು ಆಧುನಿಕ ತ್ಯಾಜ್ಯನೀರಿನ ಸಂಸ್ಕರಣಾ ವ್ಯವಸ್ಥೆ, ಮಳೆ ನೀರು ಕೊಯ್ಲನ್ನು ಹೊಂದಿದೆ. ಈ ಸಂಕೀರ್ಣ ಇಂಡಿಯನ್ ಗ್ರೀನ್ ಬಿಲ್ಡಿಂಗ್‌ನಿಂದ ಪ್ರಮಾಣೀಕರಣವನ್ನು ಪಡೆದುಕೊಂಡಿದೆ. ಹೊಸ ಮೆಟ್ರೋ ನಿಲ್ದಾಣ, ಯಶೋಭೂಮಿ ದ್ವಾರಕಾ ಸೆಕ್ಟರ್ 25 ಅನ್ನು ಕೂಡಾ ಉದ್ಘಾಟಿಸಲಾಗುವುದು ಎಂದು ಮೋದಿ ತಿಳಿಸಿದ್ದಾರೆ.

 

Please follow and like us:

tmadmin

Leave a Reply

Your email address will not be published. Required fields are marked *

Next Post

ದಾವಣಗೆರೆ: ಪರಿಸರ ಸ್ನೇಹಿ ಗಣಪ ಮೂರ್ತಿಗಳನ್ನು ತಯಾರಿಸಿ ಉತ್ತಮ ಸಂದೇಶ ಸಾರಿದ ಶಾಲಾ ಮಕ್ಕಳು

Sun Sep 17 , 2023
ದಾವಣಗೆರೆ, ಸೆಪ್ಟೆಂಬರ್‌, 17: ರಾಜ್ಯದೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆಮಾಡಿದೆ. ಅದೇ ರೀತಿ ದಾವಣಗೆರೆ ಜಿಲ್ಲೆಯಲ್ಲೂ ಕೂಡ ಗಣೇಶ ಹಬ್ಬವನ್ನು ಆಚರಣೆ ಮಾಡಲು ಯುವಕರು ತುದಿಗಾಲಲ್ಲಿ ನಿಂತಿದ್ದಾರೆ. ಮತ್ತೊಂದೆಡೆ ಜಿಲ್ಲಾಡಳಿತವು ಪಿಒಕೆ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಿದ್ದು, ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಸೂಚಿಸಿದೆ. ಈ ನಿಯಮದಂತೆಯೇ ದಾವಣಗೆರೆಯ ಸಿದ್ದಗಂಗಾ ಸ್ಕೂಲ್‌ನಲ್ಲಿ ವಿಶೇಷವಾದ ಗಣೇಶನ ಮೂರ್ತಿಯನ್ನು ತಯಾರು ಮಾಡಲಾಗಿದ್ದು, ಇದು ನೋಡುಗರ ಗಮನ ಸೆಳೆದಿದೆ. ಈ ಗಣೇಶ ಮೂರ್ತಿ […]

Advertisement

Wordpress Social Share Plugin powered by Ultimatelysocial