ಪತ್ನಿ ರಮ್ಯಾ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನಟ ನರೇಶ್..!

 

ತೆಲುಗು ನಟ ನರೇಶ್ ಮತ್ತು ಬೆಂಗಳೂರಿನ ರಮ್ಯಾ ದಾಂಪತ್ಯದ ವಿವಾದ ಬೀದಿರಂಪ ಆಗಿತ್ತು. ನರೇಶ್ ಅವರ ಮೇಲೆ ರಮ್ಯಾ ಅವರು ಹಲವು ಆರೋಪಗಳನ್ನು ಮಾಡಿದ್ದರು. ಅಲ್ಲದೇ, ಮೈಸೂರಿನಲ್ಲಿ ನರೇಶ್ ಮತ್ತು ಪವಿತ್ರಾ ಲೋಕೇಶ್ ಹೋಟೆಲ್ ವೊಂದರಲ್ಲಿ ಉಳಿದುಕೊಂಡಿದ್ದಾಗ, ಅವರ ಮೇಲೆ ಚೆಪ್ಪಲಿ ಎಸೆಯುವಂತಹ ಪ್ರಯತ್ನ ಕೂಡ ಮಾಡಿದ್ದರು.

ಒಂದು ವಾರಗಳ ಕಾಲ ಭಾರೀ ಸದ್ದು ಮಾಡಿದ್ದ ವಿವಾದ, ಒಂದು ವಾರದಿಂದ ತಣ್ಣಗಾಗಿದೆ.

ಈ ಕುರಿತು ಮಾತನಾಡಿರುವ ನರೇಶ್, ‘ರಮ್ಯಾ ನನಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಕೆಲ ಪ್ರಭಾವಿಗಳು ಅವರೊಂದಿಗೆ ಸೇರಿಕೊಂಡು ಈ ರೀತಿ ಗಲಾಟೆ ಮಾಡಿಸುತ್ತಿದ್ದಾರೆ. ರಮ್ಯಾ ಮತ್ತು ನನ್ನ ಡಿವೋರ್ಸ್ ಕೇಸ್ ಕೋರ್ಟಿನಲ್ಲಿದೆ. ಹಾಗಾಗಿ ಇನ್ಮುಂದೆ ಯಾವುದೇ ಹೇಳಿಕೆಯನ್ನು ಕೊಡಲಾರೆ. ನಾನು ಕೋರ್ಟ್ ನಲ್ಲೇ ಹೋರಾಟ ಮಾಡಿ ನ್ಯಾಯ ಪಡೆಯುತ್ತೇನೆ’

ಪವಿತ್ರಾ ಲೋಕೇಶ್ ಮತ್ತು ನರೇಶ್ ಮೈಸೂರಿನ ಹೋಟೆಲ್ ವೊಂದರಲ್ಲಿ ತಂಗಿದ್ದಾಗ ರಮ್ಯಾ ಅವರ ಮೇಲೆ ಹಲ್ಲೆ ಮಾಡಲು ಯತ್ನಿಸಿರುವ ವಿಚಾರವನ್ನೂ ಅವರು ಗಂಭೀರವಾಗಿ ತಗೆದುಕೊಂಡಿದ್ದಾರಂತೆ. ಹಾಗಾಗಿ ಕೋರ್ಟ್ ಮೊರೆ ಹೋಗುವುದಾಗಿ ಅವರು ಆಪ್ತರ ಎದುರು ಹೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಗಲಾಟೆಯ ನಂತರ ಪವಿತ್ರಾ ಲೋಕೇಶ್ ಮತ್ತು ನರೇಶ್ ಹೈದರಾಬಾದ್ ನಲ್ಲೇ ಉಳಿದುಕೊಂಡಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ಸುದ್ದಿ ಮಾಡಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ನಟಿ ರಶ್ಮಿಕಾ ಮಂದಣ್ಣ ಅವರು ಪ್ಯಾನ್​ ಇಂಡಿಯಾ ಹೀರೋಯಿನ್​ ಆಗಿ ಬೆಳೆದಿದ್ದಾರೆ.

Tue Jul 12 , 2022
  ಸದ್ಯಕ್ಕಂತೂ ರಶ್ಮಿಕಾ ಮಂದಣ್ಣ ಸಖತ್​ ಬ್ಯುಸಿ ಆಗಿದ್ದಾರೆ. ಹಲವು ಪ್ರಾಜೆಕ್ಟ್​ಗಳನ್ನು ಒಪ್ಪಿಕೊಂಡಿರುವ ಅವರಿಗೆ ಕೈ ತುಂಬ ಸಂಭಾವನೆ ಸಿಗುತ್ತಿದೆ. ನಟಿ ರಶ್ಮಿಕಾ ಮಂದಣ್ಣ  ಅವರು ಪ್ಯಾನ್​ ಇಂಡಿಯಾ ಹೀರೋಯಿನ್​ ಆಗಿ ಬೆಳೆದಿದ್ದಾರೆ. ಅವರ ಬಗ್ಗೆ ದಿನಕ್ಕೊಂದು ಗಾಸಿಪ್   ಕೇಳಿಬರುತ್ತಿದೆ. ಎಲ್ಲದಕ್ಕೂ ಅವರು ಪ್ರತಿಕ್ರಿಯೆ ನೀಡೋದಿಲ್ಲ. ಆದರೆ ಕೆಲವು ವಿಚಾರಗಳಿಗೆ ಖಂಡಿತವಾಗಿ ಉತ್ತರ ನೀಡುತ್ತಾರೆ. ರಶ್ಮಿಕಾ ಮಂದಣ್ಣ ಮತ್ತು ನಟ ಟೈಗರ್​ ಶ್ರಾಫ್​  ಬಗ್ಗೆ ಕೆಲವು ದಿನಗಳಿಂದ ಒಂದು ಗುಸುಗುಸು ಹಬ್ಬಿತ್ತು. ಇಬ್ಬರೂ ಜೊತೆಯಾಗಿ […]

Advertisement

Wordpress Social Share Plugin powered by Ultimatelysocial