ಮಂಡ್ಯದ 4-5 ಕ್ಷೇತ್ರಗಳಲ್ಲಿ ಕಮಲ ಅರಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ. ಇದೇ ಡಿಸೆಂಬರ್ 20 ರ ಒಳಗೆ ಮಂಡ್ಯ ಅಖಾಡಕ್ಕೆ ಬಿಜೆಪಿ ಚತುರರು ಎಂಟ್ರಿ ಕೊಡ್ತದ್ದಾರೆ. ಕೇಂದ್ರ ಸಚಿವ ಕ್ರಿಷನ್ ಪಾಲ್ ಗುರ್ಜರ್ಗೆ ಮಂಡ್ಯ ಉಸ್ತುವಾರಿ ವಹಿಸಿದೆ ಬಿಜೆಪಿ. ಗುರ್ಜರ್ ಕೇಂದ್ರ ಇಂಧನ ಬೃಹತ್ ಕೈಗಾರಿಕಾ ಸಚಿವರಾಗಿದ್ದಾರೆ. ಈಗಾಗಲೇ ಎರಡು ಬಾರಿ ಮಂಡ್ಯ ಪ್ರವಾಸ ಮಾಡಿದ್ದಾರೆ. ಇದೇ ಡಿ.20ರ ಒಳಗೆ ಮತ್ತೆ ಮಂಡ್ಯಕ್ಕೆ ಎಂಟ್ರಿ ಕೊಡಲಿದ್ದು ಮಂಡ್ಯದ 7 ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈಗಾಗಲೇ ಮಂಡ್ಯ ಬಿಜೆಪಿ ನಾಐಕರ ಜೊತೆ ರಹಸ್ಯ ಮಾತುಕತೆ ಕೂಡ ನಡೆಸಿದ್ದಾರೆ. ಈ ಮೂಲಕ ಮಂಡ್ಯದಲ್ಲಿ ಕೇಸರಿ ಪತಾಕೆ ಹಾರಿಸಲು ಬಿಜೆಪಿ ಸಜ್ಜಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ಲೋಡ್ಮಾಡಿ:
https://play.google.com/store/apps/details?id=com.speed.newskannada
Please follow and like us: