2022-23ನೇ ಸಾಲಿನ ಬಜೆಟ್ನಲ್ಲಿ ಎಲ್ಲಾ ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸುವಂತೆ ವಿವಿಧ ಯುವಜನ ಸಂಘಗಳು ಸೇರಿದಂತೆ 500ಕ್ಕೂ ಹೆಚ್ಚು ಯುವಕರು ಪ್ರಧಾನಿ ಮತ್ತು ಕೇಂದ್ರ ಹಣಕಾಸು ಸಚಿವರನ್ನು ಒತ್ತಾಯಿಸಿದ್ದಾರೆ.
‘ಸಕ್ಷಮ್ ಯುವ, ಸಶಕ್ತ್ ಯುವ’ (ಸಮರ್ಥ ಯುವಜನ, ಬಲಿಷ್ಠ ಯುವಜನ) ಎಂಬ ಘೋಷವಾಕ್ಯ ಹೊಂದಿರುವ ರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ ಸಿಗರೇಟ್, ಬೀಡಿ ಮತ್ತು ಹೊಗೆರಹಿತ ತಂಬಾಕಿನ ಮೇಲೆ ವಿಧಿಸಿರುವ ಅಬಕಾರಿ ಸುಂಕವನ್ನು ಹೆಚ್ಚಿಸಿ, ದೇಶದ ಯುವ ಜನಾಂಗಕ್ಕಾಗಿ ಆರೋಗ್ಯಕರ ಮತ್ತು ವ್ಯಸನಮುಕ್ತ ಬೆಳವಣಿಗೆಗೆ ಪೂರಕವಾದ ಪರಿಸರ ನಿರ್ಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada