ಕಾಂಗ್ರೆಸ್​ ನಾಯಕ ನವಜೋತ್​ ಸಿಂಗ್​​ ಸಿಧು ಜೈಲಿನಲ್ಲಿ ಮೊದಲ ದಿನ ಕಳೆದಿದ್ದು ಹೀಗೆ:

ಚಂಡಿಗಢ: ಪ್ರಕರಣವೊಂದರಲ್ಲಿ ಜೈಲು ಶಿಕ್ಷೆಗೊಳಗಾಗಿ ನಿನ್ನೆಯಷ್ಟೇ ಶರಣಾಗಿರುವ ಕಾಂಗ್ರೆಸ್​​ ನಾಯಕ ನವಜೋತ್​ ಸಿಂಗ್​ ಸಿಧು ಜೈಲಿನಲ್ಲಿ ಮೊದಲ ದಿನ ಕಳೆದಿದ್ದಾರೆ.

ರಸ್ತೆ ಗಲಾಟೆ ಪ್ರಕರಣವೊಂದರಲ್ಲಿ ಸಿಧುಗೆ ಸುಪ್ರೀಂಕೋರ್ಟ್​​ ಒಂದು ವರ್ಷ ಜೈಲು ಶಿಕ್ಷೆ ಪ್ರಕಟಿಸಿತ್ತು.

ನ್ಯಾಯಾಲಯಕ್ಕೆ ಹಾಜರಾಗಲು ಗಡುವು ನೀಡಿತ್ತು. ಈ ಹಿನ್ನಲೆಯಲ್ಲಿ ಶುಕ್ರವಾರ ಪೊಲೀಸರ ಮುಂದೆ ಶರಣಾಗಿದ್ದರು.

ಇದೀಗ ಪಟಿಯಾಲ ಜೈಲಿನಲ್ಲಿ ಕಾಲ ಕಳೆಯುತ್ತಿರುವ ಸಿಧು ಅವರಿಗೆ ಸದ್ಯಕ್ಕೆ ಯಾವುದೇ ವಿಶೇಷ ಆತಿಥ್ಯ ನೀಡಿಲ್ಲ, ಸಾಮಾನ್ಯ ಖೈದಿಯಂತೆ ಇದ್ದಾರೆ ಎಂದು ಜೈಲಧಿಕಾರಿಗಳು ತಿಳಿಸಿದ್ದಾರೆ.

ಐಷಾರಾಮಿ ಬದುಕು ಕಂಡಿರುವ ಸಿಧುಗೆ ಇದು ತೀರಾ ಹೊಸತು. ಜೈಲಿನಲ್ಲಿ ಕಾಲ ಕಳೆಯುವುದು ಅವರಿಗೆ ತುಂಬಾ ಕಷ್ಟವಾಗುತ್ತಿದೆ. ಮೊದಲ ದಿನ ರಾತ್ರಿ ಊಟ ಮಾಡದೇ ಮಾತ್ರೆ ನುಂಗಿ ಮಲಗಿದ್ದಾರಂತೆ. ಇವರಿಗಾಗಿ ವಿಶೇಷ ಆಹಾರದ ವ್ಯವಸ್ಥೆಯೇನೂ ಮಾಡಿಲ್ಲವಂತೆ. ಇನ್ನು ಅವರ ಖೈದಿ ಸಂಖ್ಯೆ 241383 ಹೀಗಿದೆ.

ಸದ್ಯ ಕೆಲ ಕಾಯಿಲೆಗಳು ಇರುವುದರಿಂದ ಅವರು ಮಾತ್ರೆಗಳನ್ನು ಸೇವಿಸಲೇಬೇಕಿದೆ. ಇತರೆ ಆಹಾರ ಅಗತ್ಯವಿದ್ದರೆ, ಜೈಲಿನಲ್ಲಿ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗುತ್ತದೆ. ಅವರೇ ತಯಾರಿಸಿಕೊಳ್ಳಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಾಯುಭಾರ ಕುಸಿತ: ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆ!

Sat May 21 , 2022
  ಬಂಗಾಳಕೊಲ್ಲಿಯಲ್ಲಿ ವಾಯುಭಾರತ ಕುಸಿತದಿಂದ ಮೂರು ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈಗಾಗಲೇ ಭಾರಿ ಮಳೆಯಿಂದ ತತ್ತರಿಸಿರುವ ಬೆಂಗಳೂರಿನ ಜನರಿಗೆ ಶಾಕಿಂಗ್ ನ್ಯೂಸ್ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ. ಇಂದು ಸಂಜೆ ವೇಳೆಗೆ ಬೆಂಗಳೂರಿನಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮೇ […]

Advertisement

Wordpress Social Share Plugin powered by Ultimatelysocial