ಬಹುಕಾಲದ ಗೆಳೆಯ ವಿಘ್ನೇಶ್ ಶಿವನ್ ಜೊತೆ ನಯನತಾರಾ ಮದುವೆ..

ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಹಲವು ತಿಂಗಳಿಂದ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಖ್ಯಾತ ನಟಿ ನಯನತಾರಾ ಕೊನೆಗೂ ಮದುವೆ ಆಗುತ್ತಿದ್ದಾರೆ. ಅನೇಕ ದಿನಗಳಿಂದ ಈ ಜೋಡಿಯ ವಿವಾಹದ ಕುರಿತು ಹಲವು ಸುದ್ದಿಗಳು ಹರಿದಾಡುತ್ತಿದ್ದವು. ಮೂರ್ನಾಲ್ಕು ಬಾರಿ ಮದುವೆ ದಿನಾಂಕ ಕೂಡ ಬಹಿರಂಗವಾಗಿತ್ತು.

ಆದರೆ, ಅದೆಲ್ಲವೂ ಸುಳ್ಳಾಗಿತ್ತು.

ಇದೀಗ ಮತ್ತೊಂದು ದಿನಾಂಕ ನಿಗದಿಯಾಗಿದ್ದು, ಜೂನ್ 9 ಕ್ಕೆ ಈ ಜೋಡಿ ಹಸೆಮಣೆ ಏರಲಿದೆ ಎನ್ನುವುದು ಅವರ ಆಪ್ತರು ಖಚಿತ ಪಡಿಸಿರುವ ಮಾಹಿತಿ. ವಿಘ್ನೇಶ್ ಶಿವನ್ ಕುಟುಂಬ ಕೂಡ ತಿರುಪತಿಯಲ್ಲಿ ಮದುವೆಯಾಗಲಿದ್ದಾರೆ ಎನ್ನುವ ಮಾಹಿತಿಯನ್ನು ಖಚಿತ ಪಡಿಸಿದೆ.

ವಿಘ್ನೇಶ್ ಶಿವನ್ ಮತ್ತು ನಯನತಾರಾ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಒಂದೇ ಮನೆಯಲ್ಲೇ ವಾಸಿಸುತ್ತಿದ್ದಾರೆ ಎನ್ನುವ ಮಾಹಿತಿ ಕೂಡ ಹರಿದಾಡುತ್ತಿತ್ತು. ದೇಶ ವಿದೇಶಗಳ ಸುತ್ತಾಟ, ದೇವಸ್ಥಾನಗಳಿಗೆ ಭೇಟಿ. ಖಾಸಗಿ ಸಮಾರಂಭದಲ್ಲಿ ಭಾಗಿಯಾಗಲು ಇಬ್ಬರೂ ಒಟ್ಟಾಗಿಯೇ ಹೋಗುತ್ತಿದ್ದರು. ಹಾಗಾಗಿ ಈ ಜೋಡಿ ಮುಂದೊಂದು ದಿನ ಮದುವೆಯಾಗಲಿದೆ ಎನ್ನುವ ಸುದ್ದಿಯೂ ಇತ್ತು. ಇದೀಗ ಅದನ್ನು ನಿಜವಾಗಿಸಿದ್ದಾರೆ ನಯನತಾರಾ.

ನಯನಾ ತಾರಾ ಮತ್ತು ವಿಜಯ್ ಸೇತುಪತಿ ಕಾಂಬಿನೇಷನ್ ನ ಹೊಸ ಸಿನಿಮಾ ಮೊನ್ನೆಯಷ್ಟೇ ರಿಲೀಸ್ ಆಗಿದೆ. ಈ ಸಿನಿಮಾದ ನಿರ್ದೇಶನವನ್ನು ವಿಘ್ನೇಶ್ ಶಿವನ್ ಅವರೇ ಮಾಡಿದ್ದರು. ನಿರ್ಮಾಪಕರು ಕೂಡ ಇವರೇ ಆಗಿದ್ದರು. ಆ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಗೆದ್ದಿದೆ. ಇದೇ ಖುಷಿಯಲ್ಲೇ ಮೊನ್ನೆಯಷ್ಟೇ ತಿರುಪತಿಗೆ ನಯನಾ ತಾರಾ ಮತ್ತು ವಿಘ್ನೇಶ್ ಭೇಟಿ ನೀಡಿದ್ದರು. ಅದೇ ಸಂದರ್ಭದಲ್ಲಿ ಮದುವೆ ದಿನಾಂಕವನ್ನು ನಿಗದಿ ಮಾಡಿಸಿದ್ದಾರಂತೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಿನಿಲೋಕಕ್ಕೆ ಸಚಿನ್ ಚೆಲುವರಾಯಸ್ವಾಮಿ ರೀ-ಎಂಟ್ರಿ... ಬೆಂಗಳೂರು ಬಾಯ್ಸ್ ಸಿನಿಮಾ ಮೂಲಕ ಅದ್ದೂರಿ ಕಂಬ್ಯಾಕ್!

Tue May 10 , 2022
ಹೋಗುಮೆ ಹೋಗುಮೆ ಎಲ್ಲರ ಒಂದಪ್ಪ ಕದ್ದು ಹೋಗುಮೆ….ಇದು ಕನ್ನಡ ಚಿತ್ರರಂಗದ ಎವರ್ ಗ್ರೀನ್ ಸಿಂಗಿಂಗ್…ವಿ.ನಾಗೇಂದ್ರ ಪ್ರಸಾದ್ ಅಂದ ಚೆಂದದ ಪದಗಳನ್ನು ಪೊಣಿಸಿ ಬರೆದ ಅದ್ಭುತ ಸಾಹಿತ್ಯದ ಈ ಗಾನಲಹರಿಗೆ ಧ್ವನಿಯಾದವರು ನವೀನ್ ಸಜ್ಜು. ಇದೇ ಹಾಡಿನಲ್ಲಿ ಲವರ್ ಬಾಯ್ ಲುಕ್ ನಲ್ಲಿ, ಅದ್ಭುತ ನಟನೆ ಮೂಲಕ ಗಮನಸೆಳೆದವರು ಸಚಿನ್ ಚೆಲುವರಾಯಸ್ವಾಮಿ. ಮಾಜಿ ಸಚಿವ ಚೆಲುವರಾಯಸ್ವಾಮಿ ಸುಪುತ್ರ ಸಚಿನ್, ಕಳೆದ ಐದು ವರ್ಷದ ಹಿಂದೆ ಹ್ಯಾಪಿ ಬರ್ತ್​​ಡೇ ಸಿನಿಮಾ ಮೂಲಕ ಸ್ಯಾಂಡಲ್ […]

Advertisement

Wordpress Social Share Plugin powered by Ultimatelysocial