ಬೆಂಗಳೂರು: ಹುಬ್ಬಳ್ಳಿ ಮತ್ತು ದಾವಣಗೆರೆ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯವನ್ನು 50 ರಿಂದ 100ಕ್ಕೆ ಹೆಚ್ಚಿಸೋದು ಹಾಗೂ 19 ಹೊಸ ಚಿಕಿತ್ಸಾಲಯಗಳನ್ನು ಪ್ರಾರಂಭಿಸೋದಕ್ಕೆ ರಾಜ್ಯ ಸರ್ಕಾರ ಅನುಮತಿಸಿ ಆದೇಶಿಸಿದೆ.
ಈ ಮೂಲಕ ರಾಜ್ಯದ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಕಾರ್ಮಿಕ ಇಲಾಖೆಯಿಂದ ನಡವಳಿಯನ್ನು ಹೊರಡಿಸಲಾಗಿದ್ದು, 2022-23ನೇ ಸಾಲಿನ ಆಯವ್ಯಯ ಭಾಷಣದಂತೆ ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿ ಮತ್ತು ದಾವಣಗೆರೆ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗಳ ಹಾಸಿಗೆಗಳ ಸಾಮರ್ಥ್ಯಗಳನ್ನು ಹಾಲಿಯಿರುವ 50 ರಿಂದ 100ಕ್ಕೆ ಪ್ರಸಕ್ತ ಸಾಲಿನಲ್ಲಿಯೇ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೂ ರಾಜ್ಯದಲ್ಲಿ 19 ಹೊಸ ಚಿಕಿತ್ಸಾಲಯಗಳನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಿರುವಂತೆ, ಈ ಕೆಳಕಂಡ ಜಿಲ್ಲೆಗಳಲ್ಲಿ ಪ್ರಾರಂಭಿಸಲು ಕೆಲ ಷರತ್ತುಗಳಿಗೆ ಒಳಪಟ್ಟು, ಸರ್ಕಾರವು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ ಎಂದು ಹೇಳಿದ್ದಾರೆ.
ಹೀಗಿದೆ 19 ಹೊಸ ಚಿಕಿತ್ಸಾಲಯಗಳ ಪಟ್ಟಿ
- ಬಾಗಲಕೋಟೆ ಜಿಲ್ಲೆಯ ಮುಧೋಳ
- ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು
- ತುಮಕೂರು ಜಿಲ್ಲೆಯ ವಸಂತನರಸಾಪುರ
- ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ
- ಕಲಬುರ್ಗಿ ಜಿಲ್ಲೆಯ ಚಿಂಚೋಳಿ
- ಹಾಸನದ ಅರಸೀಕೆರೆ
- ಹಾವೇರಿ ರಾಣೆಬೆನ್ನೂರು
- ಕೋಲಾರ ಜಿಲ್ಲೆಯ ಕೋಲಾರ
- ಕೋಲಾರದ ನರಸಾಪುರ
- ಬಳ್ಳಾರಿಯ ಸಂಡೂರು
- ರಾಮನಗರದ ಕನಕಪುರ
- ಬೀದರ್ ಜಿಲ್ಲೆಯ ನೌಬಾದ್
- ಯಾದಗಿರಿಯ ಯಾದಗಿರಿ
- ಬೆಳಗಾವಿಯ ಹತ್ತರಗಿ
- ಉತ್ತರ ಕನ್ನಡ ಜಿಲ್ಲೆಯ ಶಿರಸಿ
- ಉತ್ತರ ಕನ್ನಡದ ಕುಮಟಾ
- ದಕ್ಷಿಣ ಕನ್ನಡ ಗಂಜಿಮಠ
- ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ
- ಉಡುಪಿಯ ಪಡುಬಿದ್ರಿಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada