ದೇಶದ ರೈತರಿಗೆ ನ್ಯೂ ಇಯರ್ ಗಿಫ್ಟ್.

ದೇಶದ ರೈತರಿಗೆ ಸಿಹಿಸುದ್ದಿ ನೀಡಲು ಕೇಂದ್ರ ಸರ್ಕಾರ ಸಜ್ಜಾಗಿದ್ದು, ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಮತ್ತೊಂದು ಕಂತಿನ ಹಣವನ್ನ ಬಿಡುಗಡೆ ಮಾಡಲು ಸಿದ್ಧವಾಗುತ್ತಿದೆ.ಪಿಎಂ ಕಿಸಾನ್ ಯೋಜನೆಯಡಿ ಲಾಭ ಪಡೆಯುವ ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ 13ನೇ ಕಂತಿನ ಹಣವನ್ನ ಶೀಘ್ರದಲ್ಲೇ ಪಡೆಯುವ ಸಾಧ್ಯತೆಯಿದೆ.ಅದ್ರಂತೆ, ಡಿಸೆಂಬರ್’ನಿಂದ ಮಾರ್ಚ್ ಅವಧಿಗೆ ಅನ್ನದಾತರಿಗೆ 2 ಸಾವಿರ ರೂ. ಶೀಘ್ರದಲ್ಲೇ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಲಿದೆ.ಮೋದಿ ಸರಕಾರ ರೈತರ ಬ್ಯಾಂಕ್ ಖಾತೆಗೆ ಇದುವರೆಗೆ 12 ಕಂತುಗಳ ಹಣವನ್ನ ಜಮಾ ಮಾಡಿದೆ. ಅಂದರೆ ಪ್ರತಿ ರೈತರಿಗೆ ಈಗಾಗಲೇ ರೂ. 24 ಸಾವಿರ ಸಿಕ್ಕಿದೆ ಎನ್ನಬಹುದು. ಹೊಸ ವರ್ಷದಲ್ಲಿ ಇನ್ನೂ ರೂ. 2 ಸಾವಿರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.ಪಿಎಂ ಕಿಸಾನ್ 13 ನೇ ಕಂತಿನ ಹಣವನ್ನ ಜನವರಿ 15ರೊಳಗೆ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಬಹುದು ಎಂದು ವರದಿಗಳು ಹೇಳುತ್ತವೆ. ಅಂದರೆ ಹೊಸ ವರ್ಷದಲ್ಲಿ ರೈತರಿಗೆ ಸಿಹಿಸುದ್ದಿ ಸಿಗಲಿದೆ. ವರದಿಗಳ ಪ್ರಕಾರ ಸಂಕ್ರಾಂತಿ ಹಬ್ಬದ ಮುನ್ನವೇ ರೈತರಿಗೆ ಹಣ ತಲುಪಬಹುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಅಟಲ್‌ ಉತ್ಸವಕ್ಕೆ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌

Wed Dec 21 , 2022
ಮಣಿಪಾಲ : ಬಿಜೆಪಿ ನಗರ, ಗ್ರಾಮಾಂತರ ಸಮಿತಿ ವತಿಯಿಂದ ನಗರದ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಡಿ. 24ರಂದು ಸಂಜೆ 5ರಿಂದ ಆಯೋಜಿಸಿರುವ ಅಟಲ್‌ ಉತ್ಸವ – ಹೊನಲು ಬೆಳಕಿನ ರಾಷ್ಟ್ರ ಮಟ್ಟದ ಅಟಲ್‌ ಟ್ರೋಫಿ ಪ್ರೊ ಕಬಡ್ಡಿ ಪಂದ್ಯಕೂಟದಲ್ಲಿ ಕೇಂದ್ರ ಕ್ರೀಡಾ, ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಭಾಗವಹಿಸಲಿದ್ದಾರೆ ಎಂದು ಶಾಸಕ ಕೆ.ರಘುಪತಿ ಭಟ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ರಾತ್ರಿ 7ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಚಿವ […]

Advertisement

Wordpress Social Share Plugin powered by Ultimatelysocial