ತನ್ನದೇ ಯೂಟ್ಯೂಬ್ ಚಾನೆಲ್ ಆರಂಭಿಸಿದ ನಟ ಶರಣ್..!!

ನಟ ಶರಣ್ ಅಫೀಶಿಯಲ್ ಹೆಸರಿನಲ್ಲಿ ಆರಂಭವಾಗಿರೊ ಯೂಟ್ಯೂಬ್ ಚಾನಲ್, ಆರಂಭವಾಗಿ ಒಂದು ದಿನ ಆಗಿದೆಯಷ್ಟೆ. ಇದರ ಬಗ್ಗೆ ಇತ್ತೀಚೆಗಷ್ಟೆ ವೀಡಿಯೋ ಒಂದನ್ನು ಮಾಡಿ ಮಾಹಿತಿ ಹಂಚಿಕೊಂಡ ಶರಣ್, ನಾನು ನನ್ನದೇ ಆದ ಯೂಟ್ಯೂಬ್ ಚಾನೆಲ್‌ ಒಂದನ್ನು ಆರಂಭಿಸುತ್ತಿದ್ದೇನೆ. ಇದರ ಹಿಂದೆ ದೊಡ್ಡ ಉದ್ದೇಶ ಏನಿಲ್ಲ. ನನ್ನ ಜೀವನದ ಆಗುಹೋಗುಗಳು, ನನ್ನ ನಟನೆಯ ಸಿನಿಮಾ ಮಾಹಿತಿಗಳು ಹಾಗೂ ನನ್ನ ಹವ್ಯಾಸಗಳನ್ನು ನಿಮ್ಮ ಮುಂದೆ ಇಡುತ್ತೇನೆ. ಹೀಗಾಗಿ ಇವೆಲ್ಲವನ್ನು ಹಂಚಿಕೊಳ್ಳಲು ನನಗೆ ಇದೆ ಸರಿಯಾದ ಮಾರ್ಗ ಎನ್ನಿಸಿತು. ಕೆಲವು ಆಪ್ತರಿಂದ ಒಂದಷ್ಟು ಮಾರ್ಗದರ್ಶನವನ್ನು ಪಡೆದು ಚಾನೆಲ್ ಆರಂಭಿಸುವ ಬಗ್ಗೆ ಚಿಂತಿಸಿದ್ದೇನೆ ಎಂದಿದ್ದರು.

ಹೀಗಾಗಿ ಅಫೀಶಿಯಲ್ ಆಗಿ ಯೂಟ್ಯೂಬ್ ಚಾನೆಲೆ ಆರಂಭಿಸಿರುವ ಶರಣ್ ,ಸಂಸ್ಕೃತ ಭಾಷೆಯ ವೇದಾಂತ ದೇಸಿಕ ಚಿತ್ರದ ರಘುವೀರ ಗಧ್ಯಂ ಹಾಡನ್ನು ಬಹಳ ಅದ್ಭುತವಾಗಿ ಹಾಡಿದ್ದಾರೆ. ರಾಜ್ ಕುಮಾರ್ ಭಾರತಿ ಮೂಲ ಹಾಡಿನ ಸಂಗೀತ ನಿರ್ದೇಶನ ಮಾಡಿದ್ದು, ಇದರ ಕವರ್ ಸಾಂಗ್ ಮಾಡಿ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಟ್ಟಿದ್ದಾರೆ ನಟ ಶರಣ್.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪೈರಸಿ ಇತ್ತೀಚಿನ ಪಿಡುಗು..!!

Fri Oct 29 , 2021
ಪೈರಸಿ ಮಾಡಲು ಯತ್ನಿಸುವವರ ಮೇಲೆ ಕಣ್ಣಿಡುತ್ತೇವೆ. ಬಿಡುವುದಿಲ್ಲ, ಶಿಕ್ಷೆ ಆಗುತ್ತದೆ ಸಿನಿಮಾ ತಯಾರಕರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡುತ್ತೇವೆ ಎಂದು ಗುರುವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.ಕರ್ನಾಟಕ ಸಿನಿಮಾ ನಿಯಂತ್ರಣ ಕಾಯ್ದೆ 1964 ರ ನಂತರ 2014 ರಲ್ಲಿ ನಿಯಮಾವಳಿ ರೂಪಿಸಿತ್ತು. ಇದಕ್ಕೀಗ ತಿದ್ದುಪಡಿ ತರುವ ಪ್ರಸ್ತಾವನೆ ಇದೆ ಎಂದು ತಿಳಿಸಿದರು.ಪೈರಸಿ ಇತ್ತೀಚಿನ ಪಿಡುಗು. ಕೋಟಿಗಟ್ಟಲೆ ಹಣ ಸುರಿದು ತಯಾರಿಸಿದ ಸಿನಿಮಾವನ್ನ ಕ್ಷಣಾರ್ಧದಲ್ಲಿ ಮಾಡಿ, ಶ್ರಮ, ಹಣ […]

Advertisement

Wordpress Social Share Plugin powered by Ultimatelysocial