ರಾತ್ರಿ ಪಾರ್ಟಿ ಮಾಡಿ ಗುಡಿಸಲಲ್ಲಿ ಮಲಗಿದ್ದಾಗ ಬೆಂಕಿ ಅವಘಡ

 

ಗುಡಿಸಲಿನಲ್ಲಿ ರಾತ್ರಿ ಪಾರ್ಟಿ ಮಾಡಿ ಮದ್ಯದ ಅಮಲಿನಲ್ಲಿ ಮಲಗಿದ್ದ ವೇಳೆ ಆಕಸ್ಮಿಕ ಬೆಂಕಿ (Fire Accident‌) ತಗುಲಿ ಒಬ್ಬ ವ್ಯಕ್ತಿ ಸಜೀವ ದಹನವಾಗಿದ್ದರೆ, ಮತ್ತೊಬ್ಬರು ಸಣ್ಣಪುಟ್ಟ ಸುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿರುವ ಘಟನೆ ಭಾಲ್ಕಿ ತಾಲೂಕಿನ ಹರನಾಳ ಗ್ರಾಮದ ಜಮೀನಿನಲ್ಲಿ ನಡೆದಿದೆ.60 ವರ್ಷ ಜಗನಾಥ ಹಲಗೆ ಸಜೀವ ದಹನಕ್ಕೆ ಒಳಗಾದ ವ್ಯಕ್ತಿ. ಜಗನಾಥ ಹಲಗೆ ಹಾಗೂ ಮಾರುತಿ ಗೊರನೆ ಎಂಬ ಇಬ್ಬರು ತಡ ರಾತ್ರಿ ಗುಡಿಸಲಿನಲ್ಲಿ ಪಾರ್ಟಿ ಮಾಡಿದ್ದರು. ಇಬ್ಬರೂ ನಿದ್ದೆಗೆ ಜಾರಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.ಬೆಂಕಿ ಹೊತ್ತಿಕೊಂಡಾಗ ಇಬ್ಬರಿಗೂ ಎಚ್ಚರವಾಗಿದೆ. ಈ ವೇಳೆ ಜಗನಾಥ ಹಲಗೆ ಅವರ ರಕ್ಷಣೆಗೆ ಜತೆಯಲ್ಲಿದ್ದ ಮಾರುತಿ ಹೋದರಾದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಂಕಿ ತೀವ್ರತೆ ಪಡೆದುಕೊಂಡಿದ್ದರಿಂದ ಹೊರಗೆ ಧಾವಿಸಿದ್ದಾರೆ. ಆದರೆ, ಇದೇ ವೇಳೆ ಜಗನಾಥ ಬೆಂಕಿಗೆ ಆಹುತಿಯಾಗಿದ್ದಾರೆ. ಸುದ್ದಿ ತಿಳಿದ ಜಗನಾಥ ಹಲಗೆ ಸಂಬಂಧಿಕರು ಸ್ಥಳಕ್ಕೆ ಆಗಮಿಸಿದ್ದು, ರೋಧಿಸುತ್ತಿದ್ದಾರೆ.ಜಮೀನಿನಲ್ಲಿ ಜೋಳ ಕಾಯುವ ಸಂಬಂಧ ಪುಟ್ಟ ಗುಡಿಸಲನ್ನು ನಿರ್ಮಿಸಿಕೊಂಡಿದ್ದರು. ಇಲ್ಲಿಗೆ ಬಂದಿದ್ದ ಜಗನಾಥ ಹಲಗಿ ಹಾಗೂ ಮಾರುತಿ ಪಾರ್ಟಿ ಮಾಡಿದ್ದಾರೆ. ರಾತ್ರಿ ಮದ್ಯದ ನಶೆಯಲ್ಲಿಯೇ ಮಲಗಿದ್ದಾರೆನ್ನಲಾಗಿದೆ. ಈ ವೇಳೆ ಗುಡಿಸಲಿಗೆ ಬೆಂಕಿ ತಗುಲಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸವಾರ ಸಾವು

Sat Dec 31 , 2022
ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಅರಳಿಹಳ್ಳಿ ಬಳಿ ಶುಕ್ರವಾರ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಒಬ್ಬ ಸವಾರ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಶಶಿ (24) ಮೃತ ಯುವಕ. ಗಾಯಾಳುಗಳನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಸಕಾಲಕ್ಕೆ ಆಂಬ್ಯುಲೆನ್ಸ್‌ ಬಾರದ ಹಿನ್ನೆಲೆಯಲ್ಲಿ ಖಾಸಗಿ ವಾಹನದಲ್ಲಿ ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಂದಿಹಾಳ ಕ್ರಾಸ್ ಬಳಿ ಶನಿವಾರ ಬೈಕ್‌ಗೆ ಕಾರು ಡಿಕ್ಕಿಯಾಗಿ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು […]

Advertisement

Wordpress Social Share Plugin powered by Ultimatelysocial