ವಿವಾದಿತ ಕೃಷಿ ಕಾಯ್ದೆ ಕುರಿತು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿಕೆ ನೀಡಿದ್ದು ಸಂಚಲನ ಮೂಡಿಸಿದೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ನರೇಂದ್ರ ಸಿಂಗ್ ತೋಮರ್ ಅವರು, ‘ಕೃಷಿ ಕಾಯ್ದೆ ವಿಚಾರವಾಗಿ ಒಂದು ಹೆಜ್ಜೆ ಹಿಂದೆ ಹೋಗಿರಬಹುದು. ಆದರೆ ಮತ್ತೆ ಮುನ್ನುಗ್ಗುತ್ತೇವೆ ಎಂದು ಹೇಳಿದ್ದಾರೆ.
ಸಂಸತ್ತಿನಲ್ಲಿ ಚರ್ಚೆಯ ಕೊರತೆಯಿಂದ ಆ ಮಹತ್ವದ ಕಾಯ್ದೆಯನ್ನು ರದ್ದುಗೊಳಿಸಲಾಯಿತು. ಸ್ವಾತಂತ್ರ್ಯ ಬಂದು 70 ವರ್ಷಗಳ ಬಳಿಕ ಕೃಷಿ ಕ್ಷೇತ್ರದಲ್ಲಿ ಸರ್ವತೋಮುಖ ಅಭಿವೃದ್ದಿಗಾಗಿ ನಮ್ಮ ಸರ್ಕಾರ ಕ್ರಾಂತಿಕಾರಿ ಕಾನೂನು ತರಲು ಮುಂದಾಗಿತ್ತು.
ಇದು ಕೆಲವು ಪಟ್ಟಭದ್ರ ಹಿತಾಸಕ್ತಿಗಳಿಗೆ ಹಿಡಿಸಲಿಲ್ಲ. ಹೀಗಾಗಿ ಕಾಯ್ದೆಗಳ ಕುರಿತು ಅಪಪ್ರಚಾರ ಮಾಡಿ ಅವುಗಳ ವಿರುದ್ಧ ಪ್ರತಿಭಟಿಸುವಂತೆ ಮಾಡಿದರು. ಆದರೆ ಅವರಿಗೆ ನೆನಪಿರಲಿ.. ಸರ್ಕಾರ ಇದರಿಂದ ನಿರಾಶೆಗೊಂಡಿಲ್ಲ.
‘ರೈತರ ಅನುಕೂಲಕ್ಕಾಗಿ ನಾವು ಒಂದು ಹೆಜ್ಜೆ ಹಿಂದೆ ಇರಿಸಿದ್ದೇವೆ. ಭವಿಷ್ಯದಲ್ಲಿ ಮತ್ತೆ ಮುಂದಕ್ಕೆ ತೆರಳಲಿದ್ದೇವೆ. ಕೃಷಿ ಕಾನೂನುಗಳಲ್ಲಿ ಅಗತ್ಯ ಬದಲಾವಣೆಮಾಡಿ ಮತ್ತೆ ತರಲಿದ್ದೇವೆ ಎಂದು ತೋಮರ್ ಕಾರ್ಯಕ್ರಮದಲ್ಲಿ ಘೋಷಿಸಿದ್ದಾರೆ.ಇದು ದೇಶದಲ್ಲಿ ಸಂಚಲನಮೂಡಿಸಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: