ಮಂಗಳೂರಿನ ಜೆಎಂಎಫ್ ಸಿ 5ನೇ ನ್ಯಾಯಾಲಯ ಸ್ಯಾಂಡಲ್ ವುಡ್ ಹಿರಿಯ ನಟಿ ಪದ್ಮಜಾ ರಾವ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ನಟಿ ವಿರುದ್ಧ ನ್ಯಾಯಾಲಯ ವಾರಂಟ್ ಹೊರಡಿಸಿದ್ದು ತಲಘಟ್ಟಪುರ ಪೊಲೀಸ್ ಠಾಣೆಗೆ ರವಾನಿಸಿದೆ. ಈ ಕಾರಣದಿಂದ ಪದ್ಮಜಾ ರಾವ್ ರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹಿರಿಯ ನಟಿ ಪದ್ಮಜಾ ರಾವ್ ಅವರು ನಟ, ನಿರ್ದೇಶಕ ವೀರೇಂದ್ರ ಶೆಟ್ಟಿ ಒಡೆತನದ ವೀರೂ ಟಾಕೀಸ್ ಪ್ರೊಡಕ್ಷನ್ ಹೌಸ್ ನಿಂದ ಹಂತ ಹಂತವಾಗಿ ಸುಮಾರು 41 ಲಕ್ಷ ರೂಪಾಯಿ ಸಾಲ ಪಡೆದುಕೊಂಡಿದ್ದರು. ಈ ಸಾಲದ ಭದ್ರತೆಗಾಗಿ 40 ಲಕ್ಷ ರುಪಾಯಿಗಳ ಚೆಕ್ ನೀಡಿದ್ದರು.ಸಾಲವನ್ನು ವಾಪಸ್ ನೀಡದೆ ಹೋದಾಗ ವೀರೇಂದ್ರ ಶೆಟ್ಟಿ ಅವರು ಚೆಕ್ ಬ್ಯಾಂಕ್ ಗೆ ಹಾಕಿದ್ದರು. ಆದರೆ ಅವರ ಖಾತೆಯಲ್ಲಿ ಹಣವಿಲ್ಲದೆ ಚೆಕ್ ಬೌನ್ಸ್ ಆಗಿದೆ. ಈ ಬಗ್ಗೆ ಕೋರ್ಟ್ ನಲ್ಲಿ ಮೊಕದ್ದಮೆ ದಾಖಲಾಗಿತ್ತು.
ಇದನ್ನೂ ಓದಿ:ಮುಧೋಳ ಜನರಿಗೆ ನಿತ್ಯವೂ ಕಾಡುತ್ತಿದೆ ತೆಲುಗು ಗುಂಡಿಗಳ ಭಯ