ನೂರಾರು ಸಿನಿಮಾಗಳ ಛಾಯಾಗ್ರಾಹಕ ಗೋಪಾಲಕೃಷ್ಣ್ ಮಹಾವೀರ್ ಇನ್ನಿಲ್ಲ 2hr

"ಗಂಧದಗುಡಿ" ಸೇರಿ ನೂರಾರು ಸಿನಿಮಾಗಳ ಛಾಯಾಗ್ರಾಹಕ ಗೋಪಾಲಕೃಷ್ಣ್ ಮಹಾವೀರ್ ಇನ್ನಿಲ್ಲ

ಬೆಂಗಳೂರು: ಇಂದು ಖ್ಯಾತ ಹಿರಿಯ ಛಾಯಾಗ್ರಾಹಕ ಗೋಪಾಲಕೃಷ್ಣ್ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಈ ಹಿನ್ನೆಲೆ ಮಹಾವೀರ್ ಜೈನ್ ಆಸ್ಪತ್ರೆ ವಿರುದ್ದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಿವಿಯ ಶಸ್ತ್ರ ಚಿಕಿತ್ಸೆಗೆಂದು ಜೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗೋಪಾಲಕೃಷ್ಣ ಇದ್ದಕ್ಕಿದ್ದಂತೆ ಕೊನೆಯುಸಿರೆಳೆದಿದ್ದಾರೆ.

ಗೋಪಾಲಕೃಷ್ಣನ್ ಅವರು,

ಗಂಧದಗುಡಿ ಸೇರಿ ನೂರಾರು ಖ್ಯಾತ ಸಿನಿಮಾಗಳ ಕ್ಯಾಮರಾ ಅಸಿಸ್ಟೆಂಟ್ ಹಾಗೂ ಕ್ಯಾಮರಾ ಮ್ಯಾನ್ ಆಗಿದ್ದರು. ಇವರು ಅ.23ರಂದು ಜೈನ್ ಆಸ್ಪತ್ರೆಗೆ ದಾಖಲಾಗಿದ್ದು, 28ರಂದು ಗೋಪಾಲಕೃಷ್ಣನ್ ರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಚಿಕಿತ್ಸೆ ಬಳಿಕ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಕೈ ಕಾಲು ಸ್ವಾಧೀನ ಕಳೆದುಕೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಭುವನ ಸುಂದರಿ ಹರ್ನಾಜ್ ಕೌರ್ ಸಂಧು ಭಾರತಕ್ಕೆ ಆಗಮನ

Thu Dec 16 , 2021
ನವದೆಹಲಿ: ಭುವನ ಸುಂದರಿ (miss-universe) ಸ್ಪರ್ಧೆಯಲ್ಲಿ ವಿಜೇತರಾದ ಭಾರತದ ಹರ್ನಾಜ್ ಕೌರ್ ಸಂಧು ಇಂದು ಸ್ವದೇಶಕ್ಕೆ ಆಗಮಿಸಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಇಂದು ಸಂಜೆ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭುವನ ಸುಂದರಿ ‘ಹರ್ನಾಜ್ ಕೌರ್ ಸಂಧು’ರನ್ನು ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಅವರ ಬರುವಿಕೆಗಾಗಿಯೇ ಕಾದು ಕುಳಿತಿದ್ದ ಅಭಿಮಾನಿಗಳು, ಸ್ನೇಹಿತರು ಮತ್ತು ಬಂಧುಗಳುಹರ್ನಾಜ್ ಕೌರ್ ಸಂಧು ಪರ ಘೋಷಣೆಗಳನ್ನು ಕೂಗಿ ಸ್ವಾಗತಿಸಿದರು. Please follow and like us:

Advertisement

Wordpress Social Share Plugin powered by Ultimatelysocial