ಮೂಗಿನ ಸಮಸ್ಯೆಗೆ ಆಸ್ಪತ್ರೆಗೆ ದಾಖಲಾದ ಯುವತಿ ಸಾವು

 

ಮೂಗಿನ ಸಮಸ್ಯೆಗೆ ಚಿಕಿತ್ಸೆ ಪಡೆಯಲೆಂದು ರಾಯಚೂರು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಾದ ಯುವತಿ ಮೃತಪಟ್ಟಿದ್ದು, ವೈದ್ಯರ ಎಡವಟ್ಟಿನಿಂದ ಯುವತಿ ಮೃತಪಟ್ಟಿದ್ದಾಳೆ ಎಂದು ರಿಮ್ಸ್ ಮುಂದೆ ನೂರಾರು ಜನರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಯಚೂರು ನಗರದ ರಾಜೇಶ್ವರಿ (18) ಮೃತ ಯುವತಿ.ಮೃತ ರಾಜೇಶ್ವರಿ ರಿಮ್ಸ್‌ನಲ್ಲಿ ನರ್ಸಿಂಗ್ ಸೀಟ್ ಪಡೆದಿದ್ದ‌ಳು. ಜ. 10ಕ್ಕೆ ನರ್ಸಿಂಗ್ ಅಡ್ಮಿಷನ್ ಆಗಬೇಕಿತ್ತು.ಮೂಗಿನ ಸಮಸ್ಯೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆಕೆಗೆ ವೈದ್ಯರು ಆಪರೇಷನ್ ಮಾಡಿದ್ದರು. ಇದೀಗ ರಾಜೇಶ್ವರಿ ಮೃತಪಟ್ಟಿದ್ದಾಳೆ. ಹೀಗಾಗಿ ವೈದ್ಯ ರಾಜಶೇಖರ್ ಪಾಟೀಲ್ ವಿರುದ್ಧ ಕುಟುಂಬಸ್ಥರು ನೇರ ಆರೋಪ ಮಾಡಿದ್ದಾರೆ. ಪೋಷಕರು ರಿಮ್ಸ್ ‌ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳು ಸಭೆ ನಡೆಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೈಕ್‌-ಕಾರು ನಡುವೆ ಅಪಘಾತ; ಮಾಜಿ ಸೈನಿಕ ಸ್ಥಳದಲ್ಲೇ ಸಾವು

Sat Dec 31 , 2022
ಇಲ್ಲಿನ ಅಮ್ಮಿನಬಾವಿ ಬಳಿ ಬೈಕ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಮಾಜಿ ಸೈನಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲ್ಲಪ್ಪ ಇದ್ಲಿ ಮೃತಪಟ್ಟ ಮಾಜಿ ಯೋಧ.ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಂದಿಹಾಳ ಕ್ರಾಸ್ ಬಳಿ ಶನಿವಾರ ಬೈಕ್‌ಗೆ ಕಾರು ಡಿಕ್ಕಿಯಾಗಿ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಯಾದಗಿರಿ ಜಿಲ್ಲೆ […]

Advertisement

Wordpress Social Share Plugin powered by Ultimatelysocial