ಮೂಗಿನ ಸಮಸ್ಯೆಗೆ ಚಿಕಿತ್ಸೆ ಪಡೆಯಲೆಂದು ರಾಯಚೂರು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಾದ ಯುವತಿ ಮೃತಪಟ್ಟಿದ್ದು, ವೈದ್ಯರ ಎಡವಟ್ಟಿನಿಂದ ಯುವತಿ ಮೃತಪಟ್ಟಿದ್ದಾಳೆ ಎಂದು ರಿಮ್ಸ್ ಮುಂದೆ ನೂರಾರು ಜನರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಾಯಚೂರು ನಗರದ ರಾಜೇಶ್ವರಿ (18) ಮೃತ ಯುವತಿ.ಮೃತ ರಾಜೇಶ್ವರಿ ರಿಮ್ಸ್ನಲ್ಲಿ ನರ್ಸಿಂಗ್ ಸೀಟ್ ಪಡೆದಿದ್ದಳು. ಜ. 10ಕ್ಕೆ ನರ್ಸಿಂಗ್ ಅಡ್ಮಿಷನ್ ಆಗಬೇಕಿತ್ತು.ಮೂಗಿನ ಸಮಸ್ಯೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆಕೆಗೆ ವೈದ್ಯರು ಆಪರೇಷನ್ ಮಾಡಿದ್ದರು. ಇದೀಗ ರಾಜೇಶ್ವರಿ ಮೃತಪಟ್ಟಿದ್ದಾಳೆ. ಹೀಗಾಗಿ ವೈದ್ಯ ರಾಜಶೇಖರ್ ಪಾಟೀಲ್ ವಿರುದ್ಧ ಕುಟುಂಬಸ್ಥರು ನೇರ ಆರೋಪ ಮಾಡಿದ್ದಾರೆ. ಪೋಷಕರು ರಿಮ್ಸ್ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳು ಸಭೆ ನಡೆಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada