ನಟೊರಿಯಸ್ ಮನೆಗಳ್ಳನಿಗೆ ಗುಂಡೇಟು

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿದ್ದು, ಸಿನಿಮೀಯ ರೀತಿ ಜಯನಗರ ಠಾಣೆ ಪೊಲೀಸರು ಮನೆಗಳ್ಳನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ದೇವರ ಬೀಸನಳ್ಳಿ ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿ, ಕಳೆದ ಒಂದು ವಾರದಲ್ಲಿ ನಾಲ್ಕು ಮನೆ ದೋಚಿ ಪರಾರಿಯಾಗಿದ್ದ ಖದೀಮ ಜಯನಗರ ಅಪಾರ್ಟ್ಮೆಂಟ್ ಒಂದರ ಬಳಿ ಪೊಲೀಸರ ಕಣ್ಣಿಗೆ ಬಿದ್ದಿದ್ದಾನೆ. ಈ ವೇಳೆ ಬಂಧಿಸಲು ಮುಂದಾದ ಖಾಕಿ ಸಿಬ್ಬಂದಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲು ಮುಂದಾಗಿದ್ದಾನೆ, ಕೂಡಲೇ ಇನ್ಸ್ಪೆಕ್ಟರ್ ಸುದರ್ಶನ್ ಅವರು ಆರೋಪಿಗೆ ಶರಣಾಗುವಂತೆ ತಿಳಿಸಿದ್ದಾರೆ. ಆದರೆ ಅವರ ಮಾತನ್ನು ಧಿಕ್ಕರಿಸಿ ಮತ್ತೆ ಹಲ್ಲೆ ಮಾಡಲು ಮುಂದಾದಾಗ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಇದನ್ನೂ ಓದಿ:ಉಂಡ ಮನೆಗೆ ಕನ್ನ ಹಾಕಿದ ಖದೀಮರು.!

Please follow and like us:

Leave a Reply

Your email address will not be published. Required fields are marked *

Next Post

KSRTC ಬಸ್ ಚಾಲಕನಿಗೆ ಚಾಕುವಿನಿಂದ ಇರಿದ ಕೇಸ್

Wed Feb 10 , 2021
ಜ.22ರಂದು KSRTC ಚಾಲಕನಿಗೆ ಚಾಕು ಇರಿದು ಪರಾರಿಯಾಗಿದ ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದಂತ ವೇಳೆಯಲ್ಲಿ, ಪರಾರಿಯಾಗಲು ಯತ್ನಿಸಿ ಪೊಲೀಸರ ಗುಂಡೇಟಿಗೆ ನರಳಿದ್ದಾರೆ. ಆರೋಪಿಗಾಗಿ ಬಲೆ ಬಿಸಿದ್ದ ಬಿಳಿಕೆರೆ ಠಾಣೆ ಪೊಲೀಸರು ಆರೋಪಿಗಳ ಇರುವ ಖಚಿತ ಮಾಹಿತಿಯನ್ನು ಪಡೆದು ಜಯಂತ್, ವಿಘ್ನೇಶ್ ಹಾಗೂ ದೀಪಕ್ ಬಂಧಿಸಿ ಕರೆದೊಯ್ಯುತ್ತಿದ್ದರು. ಹುಣಸೂರು ತಾಲೂಕಿನ ಹಂದನಹಳ್ಳಿ ಗೇಟ್ ಬಳಿ ಕರೆದೊಯ್ಯುತ್ತಿದ್ದಂತ ವೇಳೆಯಲ್ಲಿ ಆರೋಪಿ ಜಯಂತ್, ಹೆಡ್ ಕಾನ್ಸ್ ಟೇಬಲ್ ರವಿ ಮೇಲೆ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. […]

Advertisement

Wordpress Social Share Plugin powered by Ultimatelysocial