ಬಿಬಿಎಂಪಿಯಲ್ಲಿ ಎನ್ ಆರ್ ರಮೇಶ್ ಸುದ್ದಿಗೋಷ್ಟಿ.

 

 

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರುಗಳ ಸುರಿಮಳೆ.

10 ಬೃಹತ್ ಹಗರಣಗಳಿಗೆ ಸಂಬಂಧಿಸಿದ ದಾಖಲೆಗಳ ಬಿಡುಗಡೆ

ಸಿದ್ಧರಾಮಯ್ಯ, ರಾಬರ್ಟ್ ವಾದ್ರಾ, ಕೆ. ಜೆ. ಜಾರ್ಜ್, ಕೃಷ್ಣ ಭೈರೇಗೌಡ, ಯು. ಟಿ. ಖಾದರ್, ಎಂ. ಬಿ. ಪಾಟೀಲ್, ಜಮೀರ್ ಅಹಮದ್, ದಿನೇಶ್ ಗುಂಡೂರಾವ್, ಎಂ. ಕೃಷ್ಣಪ್ಪ, ಎನ್. ಎ. ಹ್ಯಾರೀಸ್ ಹಾಗೂ ಪ್ರಿಯಾ ಕೃಷ್ಣ ಅವರುಗಳ ವಿರುದ್ಧ 10 ದೂರುಗಳು ದಾಖಲು

9 ಮಂದಿ ಹಿರಿಯ IAS ಅಧಿಕಾರಿಗಳು, 5 ಮಂದಿ KAS ಅಧಿಕಾರಿಗಳು ಸೇರಿದಂತೆ 21 ಮಂದಿ ಅಧಿಕಾರಿಗಳ ವಿರುದ್ಧ ದೂರುಗಳು ದಾಖಲು

3,728 ಪುಟಗಳ ಸಂಪೂರ್ಣ ದಾಖಲೆಗಳ ಸಹಿತ 10 ದೂರುಗಳ ಸಲ್ಲಿಕೆ

62 ಗಂಟೆಗಳ ಅವಧಿಯ ವಿಡಿಯೋ ತುಣುಕುಗಳು ಮತ್ತು 900 ಕ್ಕೂ ಹೆಚ್ಚು ಛಾಯಾಚಿತ್ರಗಳನ್ನೊಳಗೊಂಡ 2 DVD ಗಳ ಬಿಡುಗಡೆ ಎಂದು ಮಾಹಿತಿ

ಭ್ರಷ್ಟಾಚಾರ, ವಂಚನೆ, ಅಧಿಕಾರ ದುರುಪಯೋಗ, ನಕಲಿ ದಾಖಲೆ ತಯಾರಿಕೆ ಮತ್ತು ಸರ್ಕಾರಿ ಭೂ ಕಬಳಿಕೆ ಪ್ರಕರಣಗಳು ದಾಖಲು

ಖುದ್ದು ಸಿದ್ಧರಾಮಯ್ಯ ವಿರುದ್ಧವೇ 7 ದೂರುಗಳು ದಾಖಲು

ಮಾಜಿ ಸಚಿವರಾದ ಕೆ. ಜೆ. ಜಾರ್ಜ್ ವಿರುದ್ಧ 4 ದೂರುಗಳು ದಾಖಲು

ಮಾಜಿ ಸಚಿವರಾದ ಯು. ಟಿ. ಖಾದರ್, ಜಮೀರ್ ಅಹಮದ್ ಹಾಗೂ ಕೃಷ್ಣ ಭೈರೇಗೌಡ ವಿರುದ್ಧ ತಲಾ 2 ದೂರುಗಳು ದಾಖಲು

ಮಾಜಿ ಸಚಿವರಾದ ಎಂ. ಬಿ. ಪಾಟೀಲ್, ದಿನೇಶ್ ಗುಂಡೂರಾವ್, ಎಂ. ಕೃಷ್ಣಪ್ಪ, ಶಾಸಕರಾದ ಎನ್. ಎ. ಹ್ಯಾರೀಸ್ ಹಾಗೂ ಮಾಜಿ ಶಾಸಕ ಪ್ರಿಯಾ ಕೃಷ್ಣ ರವರುಗಳ ವಿರುದ್ಧ ತಲಾ 1 ದೂರುಗಳು ದಾಖಲು

ದೂರುಗಳನ್ನು ದಾಖಲಿಸಿರುವ ಕುರಿತ ಮಾಹಿತಿ ನೀಡಿದ N. R. ರಮೇಶ್

ಕೃಷಿ ಭಾಗ್ಯ ಯೋಜನೆಯ ಹೆಸರಿನಲ್ಲಿ ನಡೆದಿದೆ ಎನ್ನಲಾದ 800 ಕೋಟಿ ರೂಪಾಯಿಗಳ ಹಗರಣ

560 ಕೋಟಿ ರೂಪಾಯಿ ಮೊತ್ತದ ಇಂದಿರಾ ಕ್ಯಾಂಟೀನ್‍ ಗಳ ಗ್ರಾಹಕರ ಹೆಸರಿನಲ್ಲಿ ನಡೆದಿರುವ ಹಗರಣ

ರಾಬರ್ಟ್ ವಾದ್ರಾ ಪಾಲುದಾರಿಕೆಯ DLF ಸಂಸ್ಥೆಯು ಸುಮಾರು ₹ 9,600 ಕೋಟಿ ರೂಪಾಯಿಗಳಿಗೂ ಹೆಚ್ಚು ಬೆಲೆಬಾಳುವ 1,100 ಎಕರೆ ಸರ್ಕಾರೀ ಸ್ವತ್ತುಗಳನ್ನು ಕಬಳಿಸಿರುವ ಬೆಂಗಳೂರಿನ ಬೃಹತ್ ಭೂ ಕಬಳಿಕೆ ಹಗರಣ

ವಿಶ್ವೇಶ್ವರಯ್ಯ ಜಲ ನಿಗಮದ ಕಾಮಗಾರಿಯೊಂದರ ಹೆಸರಿನಲ್ಲಿ ನಕಲಿ Work Done Certificate ಗಳನ್ನು ಪಡೆದು ಪೂರ್ವ ನಿಗದಿತ ಗುತ್ತಿಗೆದಾರರಿಗೆ ಕಾನೂನು ಬಾಹಿರವಾಗಿ ಗುತ್ತಿಗೆ ನೀಡಿರುವ 158 ಕೋಟಿ ಮೊತ್ತದ ಹಗರಣ

ಬಿಬಿಎಂಪಿ ವ್ಯಾಪ್ತಿಯ 439 ಬಸ್ ತಂಗುದಾಣಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಪಾಲಿಕೆಗೆ ನಿಯಮಾನುಸಾರ ಪಾವತಿಸಬೇಕಾಗಿದ್ದ 68.15 ಕೋಟಿ ರೂಪಾಯಿಗಳಷ್ಟು ಜಾಹೀರಾತು ಶುಲ್ಕವನ್ನು ಪಾವತಿಸದೇ, ತಮ್ಮ ಸರ್ಕಾರದ ಸಾಧನೆಗಳ ಪ್ರಚಾರ ಕಾರ್ಯಗಳಿಗೆ ಬಳಸಿಕೊಂಡಿದ್ದ 68.15 ಕೋಟಿ ಜಾಹಿರಾತು ಶುಲ್ಕ ವಂಚನೆ ಹಗರಣ

ಪ್ರಧಾನ ಮಂತ್ರಿ ನರೇಂದ್ರ ಮೋದಿರವರ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಸ್ವಚ್ಛ ಭಾರತ ಅಭಿಯಾನದ ಅನುಷ್ಠಾನದ ಹೆಸರಿನಲ್ಲಿ ಕಾನೂನುಬಾಹಿರವಾಗಿ ಅನುದಾನದ ದುರ್ಬಳಕೆ ಮಾಡಿಕೊಂಡಿರುವ ನೂರಾರು ಕೋಟಿ ರೂಪಾಯಿಗಳ ಹಗರಣ

ಬಿಬಿಎಂಪಿ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಆಯ್ದ 200 ಪ್ರಮುಖ ಸ್ಥಳಗಳಲ್ಲಿ ತಲಾ 02 ರಂತೆ Under Ground Dust Bin ಗಳನ್ನು ಅಳವಡಿಸುವ ಯೋಜನೆಯ ಹೆಸರಿನಲ್ಲಿ ನಡೆದಿರುವ 40 ಕೋಟಿ ರೂಪಾಯಿಗಳಷ್ಟು ಲೂಟಿ ಮಾಡಿರುವ  ಹಗರಣ

ಬಿಬಿಎಂಪಿ ವ್ಯಾಪ್ತಿಯಲ್ಲಿ LED ಬೀದಿ ದೀಪಗಳ ಅಳವಡಿಕೆ ಯೋಜನೆಯ ಹೆಸರಿನಲ್ಲಿ ನಡೆದಿರುವ 1,600 ಕೋಟಿ ರೂಪಾಯಿಗಳ ಹಗರಣ

Karnataka State AIDS Prevention Society (KSAPS) ಯ ಮೂಲಕ ನಡೆದಿರುವ ನೂರಾರು ಕೋಟಿ ಮೊತ್ತದ ಹಣ ದುರ್ಬಳಕೆ ಹಗರಣ

ಬಡ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಹೆಸರಿನಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮೂಲಕ ನಡೆದಿರುವ ನೂರಾರು ಕೋಟಿ ರೂಪಾಯಿಗಳ ಹಗರಣ

ಮಾನ್ಯ ಮುಖ್ಯಮಂತ್ರಿಗಳಿಗೆ ಎಲ್ಲಾ 10 ಹಗರಣಗಳ ಸಂಪೂರ್ಣ ದಾಖಲೆಗಳ ಸಹಿತ ದೂರು ಸಲ್ಲಿಕೆ.

CID ತನಿಖೆಗೆ ಅಥವಾ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಮಾನ್ಯ ಮುಖ್ಯಮಂತ್ರಿಗಳನ್ನು ಆಗ್ರಹಿಸಿರುವ N. R. ರಮೇಶ್.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಂಪನಿ ಬೆಳವಣಿಗೆಗೆ ಕಾರಣರಾದ ನೌಕರರಿಗೆ ಕಾರ್ ಕೊಟ್ಟ ಮಾಲೀಕ ಭರ್ಜರಿ ಗಿಫ್ಟ್.

Thu Feb 2 , 2023
ಅಹಮದಾಬಾದ್: ಅಹಮದಾಬಾದ್‌ ನ ಐಟಿ ಸಂಸ್ಥೆಯು ಉದ್ಯೋಗಿಗಳಿಗೆ ಕಾರ್ ಗಳನ್ನು ನೀಡಿ ಗೌರವಿಸಿದೆ, ತ್ರಿಧ್ಯಾ ಟೆಕ್ ಐಟಿ ಸಂಸ್ಥೆಯು ಕಂಪನಿಯ ಬೆಳವಣಿಗೆಗೆ ಕೊಡುಗೆ ನೀಡಿದ 13 ಉದ್ಯೋಗಿಗಳಿಗೆ ಕಾರ್ ಗಳನ್ನು ಉಡುಗೊರೆಯಾಗಿ ನೀಡಿದೆ. ಉದ್ಯೋಗಿಗಳ ಕಠಿಣ ಪರಿಶ್ರಮ ಅವರ ಸಮರ್ಪಣೆಗಾಗಿ ಶ್ಲಾಘನೆಯ ಸಂಕೇತವಾಗಿ ಕಾರ್ ನೀಡಲಾಗಿದೆ. ತ್ರಿಧ್ಯಾ ಟೆಕ್ ಡಿಜಿಟಲ್ ಟ್ರಾನ್ಸ್‌ ಫರ್ಮೇಷನ್ ಸೇವೆಗಳನ್ನು ಒದಗಿಸುತ್ತದೆ. ಈ ಉದ್ಯೋಗಿಗಳು ಮೊದಲಿನಿಂದಲೂ ಈ ಐಟಿ ಕಂಪನಿಯೊಂದಿಗೆ ಸಂಬಂಧ ಹೊಂದಿದ್ದರಿಂದ ಮತ್ತು ಅವರ ಕಠಿಣ […]

Advertisement

Wordpress Social Share Plugin powered by Ultimatelysocial