ಟೀಮ್ ಇಂಡಿಯಾ ODI ಉಪ ನಾಯಕನಾಗಿ ಜಸ್ಪ್ರೀತ್ ಬುಮ್ರಾ……

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮೂರು ಏಕದಿನ ಪಂದ್ಯಗಳ ಸರಣಿಗೆ ಬಿಸಿಸಿಐ ಶುಕ್ರವಾರ ತಂಡವನ್ನು ಪ್ರಕಟಿಸಿದೆ. ಗಾಯಗೊಂಡಿರುವ ರೋಹಿತ್ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ, ಈ  ಹಿನ್ನೆಲೆಯಲ್ಲಿ ಬಿಸಿಸಿಐ ನ ಆಯ್ಕೆ ಸಮೀತಿ  ಕೆ.ಎಲ್ ರಾಹುಲ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದೆ. ಅದೇ ರೀತಿ ತಂಡದ ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರಿಗೆ ಉಪ ನಾಯಕತ್ವದ ಜವಾಬ್ದಾರಿ ವಹಿಸಿದ್ದಾರೆ.

ತಂಡದಲ್ಲಿ ಯುವ ಆಟಗಾರ ಶ್ರೇಯಸ್ ಅಯ್ಯರ್, ಐಪಿಎಲ್‌ ನಾಯಕರಾಗಿರುವ ಅನುಭವಿ ರಿಷಬ್ ಪಂತ್ ಇದ್ದರೂ ಆಯ್ಕೆಗಾರರು ಬುಮ್ರಾಗೆ ಒಲವು ತೋರಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಪ್ರಕಟಗೊಂಡಿರುವ ಭಾರತ ಏಕದಿನ ತಂಡ:
ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ರುತು ರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾಂತ್ ಕಿಶನ್, ; ಸುಂದರ್, ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಪ್ರಸಿದ್‌ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆಡಿನ ಮರಿ ರಕ್ಷಿಸಲು ಹೋಗಿ ಯುವಕನೋರ್ವ ಸಾವನ್ನಪ್ಪಿದ್ದಾನೆ

Mon Jan 3 , 2022
ಆಡಿನ ಮರಿಯನ್ನು ರಕ್ಷಿಸಲು ಹೋಗಿ ಯುವಕನೋರ್ವ ಪ್ರಾಣ ಕಳೆದುಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಳೆದ ವರ್ಷ ಆಗಸ್ಟ್ 28ರಂದು ಜೋಕಟ್ಟೆ ಪರಿಸರದಲ್ಲಿ ರೈಲ್ವೆ ಹಳಿಗೆ ಆಡಿನ ಮರಿಯೊಂದು ಸಿಲುಕಿಕೊಂಡಿತ್ತು, ಇದನ್ನ ಕಂಡ ಮಂಗಳೂರಿನ ಹುಡುಗ ಚೇತನ್‌ ತಕ್ಷಣ ಸ್ಥಳಕ್ಕೆ ಧಾವಿಸಿ ಆಡುಮರಿಯನ್ನು ರಕ್ಷಿಸಿದ್ದಾನೆ. ಆದರೆ ರಕ್ಷಿಸೋ ಸಮಯದಲ್ಲಿ ತನ್ನ ಪ್ರಣವನ್ನೆ ಲೆಕ್ಕಿಸದ ಈತ ಎರಡೂ ಕಾಲುಗಳನ್ನ ಕಳೆದುಕೊಂಡಿದ್ದ. ಈತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ರು, ತನ್ನ ಕುಟುಂಬದ ಆಧಾರಸ್ಥಂಭವಾಗಿದ್ದ  ಚೇತನ್‌ ಈಗ […]

Advertisement

Wordpress Social Share Plugin powered by Ultimatelysocial