ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ನ್ಯಾಯಯುತ ಬೇಡಿಕೆಗಳು ಈಡೇರದಿದ್ದಲ್ಲಿ ಮಾರ್ಚ್ 01 ರಿಂದ ಕರ್ತವ್ಯಕ್ಕೆ ಗೈರು ಹಾಜರಾಗಿ ಅನಿರ್ದಿಷ್ಟವಧಿ ಮುಷ್ಕರ ನಡೆಸಿ ಸರ್ಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತೇವೇ ಎಂದು ತಿಳಿಸಿದರು.ವೇತನ ಭತ್ಯೆ ಪರಿಷ್ಕರಣೆ ಹಳೆ ಪಿಂಚಣಿ ಯೋಜನೆಯನ್ನ ಜಾರಿಗೊಳಿಸಬೇಕು, ಸರ್ಕಾರ 7 ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ತ್ವರಿತವಾಗಿ ಪಡೆಯುವ ಮೂಲಕ ಜಾರಿಗೆ ಬರುವಂತೆಯೂ ಶೇ.40% ವೇತನ ಹೆಚ್ಚಳ ಸೌಲಭ್ಯ ಕುರಿತಂತೆ ಸರ್ಕಾರವು ಆದೇಶ ಹೊರಡಿಸುವ ಮೂಲಕ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.ಓಪಿಎಸ್ ಯೋಜನೆಯು ಈಗಾಗಲೇ ರಾಜಸ್ತಾನ, ಛತ್ತೀಸ್ ಗಡ, ಜಾರ್ಖಂಡ್, ಹಿಮಾಛಲ ಪ್ರದೇಶಗಳಲ್ಲಿ ಜಾರಿಯಲ್ಲಿದ್ದು ರಾಜ್ಯದಲ್ಲೂ ಇದನ್ನ ಅನುಷ್ಠಾನಗೊಳಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡರು.ಆರೋಗ್ಯ ಮತ್ತು ತುರ್ತು ಸೇವೆಯ ಸಿಬ್ಬಂದಿಗಳು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸವರು ಹೊರತು ಪಡಿಸಿಬ ಇತರೆ ಎಲ್ಲಾ ಇಲಾಖೆಯ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ತಿಳಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada