ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಜೊತೆ ಜೊತೆಗೆ ಓಮಿಕ್ರಾನ್ ವೈರಸ್ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ದೇಶದಲ್ಲೇ ಮೊದಲ ಓಮಿಕ್ರಾನ್ ವೈರಸ್ ಪತ್ತೆಯಾದಂತ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ, ಇಂದು ಮತ್ತೆ 185 ಮಂದಿಗೆ ಓಮಿಕ್ರಾನ್ ದೃಢಪಟ್ಟಿದೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ ಇಂದು ಹೊಸದಾಗಿ 185 ಜನರಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 1,115ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.
ರಾಜ್ಯ ‘ಬಜೆಟ್ ಮಂಡನೆ’ಗೆ ಮುಹೂರ್ತ ಫಿಕ್ಸ್: ಫೆ.14ರಿಂದ ಜಂಟಿ ಅಧಿವೇಶನ ಆರಂಭ, ಮಾರ್ಚ್ ಮೊದಲ ವಾರ ಬಜೆಟ್ ಮಂಡನೆ
ಬಜೆಟ್ ಮಂಡನೆ ಸಂಬಂಧ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಫೆಬ್ರವರಿ 14ರಿಂದ ಆರಂಭಿಸಲಾಗುತ್ತದೆ. ಮಾರ್ಚ್ ಮೊದಲವಾರ ರಾಜ್ಯ ಬಜೆಟ್ ಮಂಡಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.
ಇಂದು ರಾಜ್ಯ ಕ್ಯಾಬಿನೆಟ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ತಜ್ಞರು ಹಲವು ಸಲಹೆ ಸೂಚನೆಗಳನ್ನು ನೀಡಿದ್ದಾರೆ. ನಿಯಂತ್ರಣ ಕ್ರಮಗಳನ್ನು ಮುಂದುವರೆಸೋದಾ ಅಥವಾ ರದ್ದು ಪಡಿಸೋದಾ ಎನ್ನುವ ಬಗ್ಗೆ ವರದಿಯನ್ನು ನೀಡುವಂತೆ ತಜ್ಞರಿಗೆ ಸೂಚಿಸಲಾಗಿದೆ. ಅವರು ವರದಿಯನ್ನು ಸಲ್ಲಿಸಿದ ಬಳಿಕ, 3-4 ದಿನಗಳಲ್ಲಿ ಕೋವಿಡ್ ರೂಲ್ಸ್ ಬಗ್ಗೆ ನಿರ್ಧಾರ ಪ್ರಕಟಿಸೋದಾಗಿ ತಿಳಿಸಿದರು.
ರಾಜ್ಯದಲ್ಲಿ ಬಜೆಟ್ ಅಧಿವೇಶನವನ್ನು ಫೆಬ್ರವರಿ 14ರಿಂದ ಆರಂಭಗೊಳ್ಳಲಿದೆ. ಫೆಬ್ರವರಿ 14ರಿಂದ 25ರವರೆಗೆ ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭಗೊಳ್ಳಲಿದ್ದು, ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ ಆಗಲಿದೆ ಎಂಬುದಾಗಿ ಘೋಷಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada