ರಾಜ್ಯಸಭೆ: ನಾಲ್ಕನೇ ಸ್ಥಾನದ ಗೆಲುವಿಗೆ ಬೇಕಿದೆ ಆ ಒಂದು ಮತ;

 

ಬೆಂಗಳೂರು: ರಾಜ್ಯಸಭೆಯ ನಾಲ್ಕನೇ ಸ್ಥಾನಕ್ಕಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪರಸ್ಪರ ಕಚ್ಚಾಟದಲ್ಲಿ ನಿರತವಾಗಿದ್ದರೆ, ಬಿಜೆಪಿ ಮಾತ್ರ ನಿರಾಳವಾಗಿದೆ.

ನಾಲ್ಕನೇ ಸ್ಥಾನಕ್ಕಾಗಿ ಕಣಕ್ಕೆ ಇಳಿದಿರುವ ಬಿಜೆಪಿಯ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡು ಪಕ್ಷದ ಜತೆ ಉತ್ತಮ ಸಂಬಂಧ ಹೊಂದಿದ್ದು, ಇದು ಅಡ್ಡ ಮತದಾನದ ಹಂತಕ್ಕೂ ಕರೆದೊಯ್ಯುವ ಸಾಧ್ಯತೆ ಇದೆ.

ತನ್ನ ಮೊದಲೆರಡು ಅಭ್ಯರ್ಥಿಗಳ ಗೆಲುವಿಗೆ ಬಿಜೆಪಿ ಎಷ್ಟು ಮತಗಳನ್ನು ಹಂಚಿಕೆ ಮಾಡಬಹುದು ಎಂಬುದು ಇನ್ನೂ ಗೊತ್ತಾಗಿಲ್ಲ. ಸಾಮಾನ್ಯ ಲೆಕ್ಕಚಾರದ ಪ್ರಕಾರ ತಲಾ 45 ಮತ ನಿಯೋಜನೆ ಮಾಡಿದರೂ ಲೆಹರ್ ಸಿಂಗ್ ಅವರಿಗೆ 32 ಮತ ಉಳಿಕೆಯಾಗುತ್ತದೆ. ಇತ್ತ ಜೆಡಿಎಸ್ ಅಭ್ಯರ್ಥಿ ಕುಪ್ಪೇಂದ್ರ ರೆಡ್ಡಿಯವರ ಬಳಿಯೂ ಅಷ್ಟೇ ಮತ‌ ಉಳಿಯುತ್ತದೆಯಾದರೂ ಕಾಂಗ್ರೆಸ್ ಅಥವಾ ಬಿಜೆಪಿಯಿಂದ ಮತ ಹೊರ ಹೋಗುವ ಸಾಧ್ಯತೆ ಕಡಿಮೆ.

ಒಂದೊಮ್ಮೆ ಕಾಂಗ್ರೆಸ್ ನಿಂದ ಒಂದು ಮತ ಕುಪ್ಪೇಂದ್ರ ರೆಡ್ಡಿ ಪರ ಚಲಾವಣೆಯಾದರೂ ಅದು ಜೆಡಿಎಸ್ ಅನ್ನು ಗೆಲುವಿನ ದಡ ಹತ್ತಿಸುತ್ತದೆ. ಆದರೆ ಸದ್ಯದ ಸ್ಥಿತಿಯಲ್ಲಿ ಆ ಸಾಧ್ಯತೆ ಕಡಿಮೆ. ಕಾಂಗ್ರೆಸ್ ಗೆಲ್ಲುವುದಕ್ಕೆ ಕನಿಷ್ಠ ಎಂಟು ಮತಗಳು ಬೇಕು. ಆದರೆ ಜೆಡಿಎಸ್ ನಿಂದ ಅಷ್ಟು ಸಂಖ್ಯೆಯಲ್ಲಿ ಅಡ್ಡ ಮತದಾನವಾಗುವ ಸಾಧ್ಯತೆ ಕಡಿಮೆ. ಒಂದು ಮತ ಕಾಂಗ್ರೆಸ್ ಪರ ವಾಲಿದರೂ ಬಿಜೆಪಿ ಮೂರನೇ ಅಭ್ಯರ್ಥಿಯ ಗೆಲುವು ನಿಶ್ಚಿತವಾಗುತ್ತದೆ. ಹೀಗಾಗಿ ರಾಜ್ಯಸಭಾ ಚುನಾವಣೆಯ ನಾಲ್ಕನೇ ಸ್ಥಾನದ ಗೆಲುವಿಗೆ ಈ ಒಂದು ಮತದ ಲೆಕ್ಕಾಚಾರ ಮಹತ್ವ ಪಡೆದುಕೊಂಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಬಿ ಟೀಂ ಯಾರೆಂಬುದು ಗೊತ್ತಾಗಲಿದೆ: ಕುಮಾರಸ್ವಾಮಿ

Sat Jun 4 , 2022
ಹುಬ್ಬಳ್ಳಿ, ಜೂ.4- ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಯಾರೊಂದಿಗೂ ಚರ್ಚೆ ಮಾಡಿಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಒಂದು ಕಲ್ಲಿಗೆ ಎರಡು ಹಕ್ಕಿ ಹೊಡೆದಿಲ್ಲ. ಬದಲಿಗೆ ತಲೆ ಮೇಲೆ ಚಪ್ಪಡಿ ಎಳೆದುಕೊಂಡಿದ್ದಾರೆ ಎಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಬಿಜೆಪಿಯ ಬಿ ಟೀಂ ಯಾರೆಂಬುದು ಗೊತ್ತಾಗಲಿದೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಸೋತರೆ ಯಾವುದೇ […]

Advertisement

Wordpress Social Share Plugin powered by Ultimatelysocial