ಆನ್ ಲೈನ್ ಕ್ಲಾಸ್ ಎಂದು ರೂಂ ಗೆ ಹೋದ ಬಾಲಕಿ; ನೇಣು ಬಿಗಿದುಕೊಂಡು ಆತ್ಮಹತ್ಯೆ!

 

ಬೆಂಗಳೂರು: 15 ವರ್ಷದ ಬಾಲಕಿ ತನಗೆ ಆನ್‌ ಲೈನ್‌ ತರಗತಿಯಿದೆ ಎಂದು ಮನೆಯ ರೂಂನೊಳಗೆ ಹೋಗಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.9ನೇ ತರಗತಿ ಓದುತ್ತಿರುವ ಬಾಲಕಿ ಸೋಮವಾರ ಬೆಳಗ್ಗೆ ಆನ್‌ ಲೈನ್ ತರಗತಿ ಇದೆ ಎಂದು ರೂಂನೊಳಗೆ ಹೋಗಿದ್ದಾಳೆ.ತಾಯಿ ಉಪಹಾರಕ್ಕೆ ಕರೆದರೂ ಬಾಗಿಲು ತೆರೆಯಲಿಲ್ಲ. ಆಗ ಅನುಮಾನಗೊಂಡ ತಾಯಿ ಕಿಟಕಿಯಲ್ಲಿ ನೋಡಿದ್ದಾಳೆ. ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವುದು ಕಂಡು ಬಂದಿದೆ.ಸ್ಥಳೀಯರು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಮನೆಗೆ ಬಂದು ಬಾಗಿಲು ಒಡೆದು ರೂಂನೊಳಗೆ ಪ್ರವೇಶಿಸಿ ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ.

Tue Feb 1 , 2022
ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಅಭೂತಪೂರ್ವ ಕೊಡುಗೆಯನ್ನು ನೀಡಿದ್ದು, ಡಿಜಿಟಲ್ ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದೆ.ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ  ಕೇಂದ್ರ ಸಕಾರವನ್ನು ಶ್ಲಾಘಿಸಿದ್ದಾರೆ.ಕೇಂದ್ರ ಬಜೆಟ್ ಕುರುತು ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ ನಾಗೇಶ್, ಒಂದು ತರಗತಿ, ಒಂದು ಟಿವಿ ಚಾನಲ್ ಕಾರ್ಯಕ್ರಮದಲ್ಲಿ ಸ್ಥಳೀಯ ಭಾಷೆಯಲ್ಲಿ ಕಲಿಸಲು ಚಾನಲ್ಗಳ ಸಂಖ್ಯೆಯನ್ನು ೨೦೦ಕ್ಕೆ ಹೆಚ್ಚಿಸುವ ಪ್ರಧಾನಿ ನರೇದ್ರ ಮೋದಿ ಸರ್ಕಾರದ ಘೋಷಣೆ ಶ್ಲಾಘನೀಯ. ಇದು ಶಿಕ್ಷಣದ ಪ್ರಸರಣಕ್ಕೆ ಇನ್ನಷ್ಟು ನೆರವಾಗಲಿದೆ […]

Advertisement

Wordpress Social Share Plugin powered by Ultimatelysocial