‘ಪ್ರೀತಿ ತೋರಿಸೋ ನಮಗೆ ಬೆನ್ನಿಗೆ ಚೂರಿ ಹಾಕೋ ಕೆಲಸ ಮಾಡ್ದಾಗ ಬೇಜಾರಾಗತ್ತೆ’: ರಚಿತಾ ರಾಮ್

'ಪ್ರೀತಿ ತೋರಿಸೋ ನಮಗೆ ಬೆನ್ನಿಗೆ ಚೂರಿ ಹಾಕೋ ಕೆಲಸ ಮಾಡ್ದಾಗ ಬೇಜಾರಾಗತ್ತೆ': ರಚಿತಾ ರಾಮ್​
‘ಬೇಜಾರು ಆಗಿದೆ ಅಂತ ನಾವು ಸುಮ್ಮನೆ ಕೂರುವಂತಿಲ್ಲ. ನಮ್ಮನ್ನು ಕೆಣಕಿ ರೋಷ ಬರುವಂತೆ ಮಾಡಲಾಗಿದೆ’ ಎಂದು ರಚಿತಾ ರಾಮ್​ ಹೇಳಿದ್ದಾರೆ.

ಕನ್ನಡ ಚಿತ್ರರಂಗದ ಅನೇಕರು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ನಟಿ ರಚಿತಾ ರಾಮ್​ (Rachita Ram) ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಖಿಲ್​ ಕುಮಾರಸ್ವಾಮಿ ನಟನೆಯ ‘ರೈಡರ್​’ ಸಿನಿಮಾದ (Rider Movie) ಪ್ರೀ-ರಿಲೀಸ್​ ಕಾರ್ಯಕ್ರಮದಲ್ಲಿ ಅವರು ಭಾಗಿ ಆಗಿದ್ದರು. ಈ ವೇಳೆ ‘ಟಿವಿ9 ಕನ್ನಡ’ದ ಜತೆ ಮಾತನಾಡಿದ ಅವರು ಕೆಲವು ವಿಷಯಗಳನ್ನು ಹಂಚಿಕೊಂಡರು. ‘ಖಂಡಿತ ಇದು ಬೇಜಾರಾಗುವಂತಹ ಸಂದರ್ಭ. ಕೆಲವೊಂದು ವಿಷಯವನ್ನು ಮಾತಿನಲ್ಲಿ ಹೇಳೋಕೆ ಆಗಲ್ಲ. ಎಲ್ಲರಿಗೂ ಪ್ರೀತಿ ನೀಡುವವರು ನಾವು. ನಮ್ಮ ಬೆನ್ನಿಗೆ ಚೂರಿ ಹಾಕುವಂತಹ ಕೆಲಸ ಮಾಡಿದಾಗ ಬೇಜಾರು ಆಗುತ್ತೆ. ಬೇಜಾರು ಆಗಿದೆ ಅಂತ ನಾವು ಸುಮ್ಮನೆ ಕೂರುವಂತಿಲ್ಲ. ನಮ್ಮನ್ನು ಕೆಣಕಿ ರೋಷ ಬರುವಂತೆ ಮಾಡಲಾಗಿದೆ. ಇದರ ಬಗ್ಗೆ ದೊಡ್ಡವರು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ನನ್ನ ಬೆಂಬಲ ಇದಕ್ಕೆ ಇದ್ದೇ ಇರುತ್ತದೆ’ ಎಂದು ರಚಿತಾ ರಾಮ್​ ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಯ್ಯೋ ದೇವ್ರೆ. ಮಗಳಿಗೆ ಸ್ಮಾರ್ಟ್ ಫೋನ್ ಕೊಡಿಸಿದ ಅಪ್ಪ ನಂತರ ಮಾಡಿದ್ದೇನು..?

Thu Dec 23 , 2021
ನಾವು ನೀವೆಲ್ಲ ಸಾಮಾನ್ಯವಾಗಿ ಸ್ಮಾರ್ಟ್ ಫೋನ್ ಕೊಂಡುಕೊಂಡ ನಂತರ, ಅದಕ್ಕೆ ಸಿಮ್ ಹಾಕಿ ಬಳಸಲು ಶುರು ಮಾಡ್ತೀವಿ. ಕೆಲವರು ಈ ಖುಷಿಯನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಇನ್ನು ಕೆಲವರು ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಬರುತ್ತಾರೆ. ಆದ್ರೆ ಇಲ್ಲೊಬ್ಬ ವಿಚಿತ್ರ ಮನುಷ್ಯ, ತನ್ನ ಮಗಳಿಗೆ ಸ್ಮಾರ್ಟ್ ಫೋನ್ ಕೊಡಿಸಿದ್ದಕ್ಕಾಗಿ, ಅಂಗಡಿಯಿಂದ ಹಿಡಿದು, ಮನೆಯ ತನಕ ಬ್ಯಾಂಡ್‌ ಸಮೇತ, ಭರ್ಜರಿ ಮೆರವಣಿಗೆ ಮಾಡಿದ್ದಾನೆ. ಮಧ್ಯ ಪ್ರದೇಶದ ಗ್ರಾಮವೊಂದರಲ್ಲಿ ಟೀ ಅಂಗಡಿ ಇಟ್ಟುಕೊಂಡಿರುವ […]

Advertisement

Wordpress Social Share Plugin powered by Ultimatelysocial