ಗದ್ದಲದ ನಡುವೆಯೇ ನಡೆದ ಪರಿಷತ್ ಪ್ರಶ್ನೋತ್ತರ ಕಲಾಪ

ಗದ್ದಲದ ನಡುವೆಯೇ ನಡೆದ ಪರಿಷತ್ ಪ್ರಶ್ನೋತ್ತರ ಕಲಾಪ

ಬೆಳಗಾವಿ, ಡಿ.20- ಕಾಂಗ್ರೆಸ್ ಸದಸ್ಯರ ಧರಣಿ, ಗದ್ದಲದ ನಡುವೆಯೂ ವಿಧಾನ ಪರಿಷತ್‍ನಲ್ಲಿ ಪ್ರಶ್ನೋತ್ತರ ಕಲಾಪ ನಡೆಯಿತು. ಸಂಧಾನ ಸಭೆಯ ಬಳಿಕ ಸದನ ಸಮಾವೇಶಗೊಂಡಾಗ ಕಾಂಗ್ರೆಸ್ ಸದಸ್ಯರು ಧರಣಿಯನ್ನು ಮುಂದುವರೆಸಿದರು.

ಈ ವೇಳೆ ಜೆ.ಡಿ.ಎಸ್.ನ ಕೆ.ಟಿ.ಶ್ರೀಕಂಠೇಗೌಡರು, 2018ರ ನಂತರ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ.

ಜನ ನಮ್ಮ ಸಮಸ್ಯೆಗಳು ಚರ್ಚೆಯಾಗಬಹುದು ಎಂಬ ವಿಶ್ವಾಸದಲ್ಲಿದ್ದಾರೆ. ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಸುಗಮ ಕಲಾಪಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಸಭಾನಾಯಕರು ಸರ್ಕಾರ ಚರ್ಚೆಗೆ ಹಾಗೂ ಕಲಾಪದಲ್ಲಿ ಭಾಗವಹಿಸಲು ಸಿದ್ಧವಿದೆ ಎಂದು ಹೇಳಿದರು.

ನಂತರ ಸಭಾಧ್ಯಕ್ಷರು ಪ್ರಶ್ನೋತ್ತರವನ್ನು ಕೈಗೆತ್ತಿಕೊಂಡರು. ಆಗ ಧರಣಿ ನಿರತ ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗಿ ಗದ್ದಲವೆಬ್ಬಿಸಿದರು. ಆಡಳಿತ ಪಕ್ಷ ಬಿಜೆಪಿಯ ಸದಸ್ಯರು ಕಾಂಗ್ರೆಸ್ ಸದಸ್ಯರು ವೈಯಕ್ತಿಕ ವಿಚಾರಕ್ಕೆ ಸದನದ ಸಮಯವನ್ನು ಹಾಳು ಮಾಡುತ್ತಿದ್ದಾರೆ. ಇತರ ಸದಸ್ಯರ ಹಕ್ಕುಗಳನ್ನು ಮೊಟಕುಗೊಳಿಸಲಾಗುತ್ತಿದೆ. ಕಾಂಗ್ರೆಸ್ ಉತ್ತರ ಕರ್ನಾಟಕ ಭಾಗದ ವಿರೋಯಾಗಿದೆ ಎಂದು ಬಿಜೆಪಿ ಸದಸ್ಯರು ಧಿಕ್ಕಾರ ಕೂಗಿದರು.

ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಪರಸ್ಪರ ಘೋಷಣೆಗಳನ್ನು ಕೂಗುತ್ತಿದ್ದ ನಡುವೆಯೇ ಪ್ರಶ್ನೋತ್ತರ ಕಲಾಪ ಮುಂದುವರೆಸಲಾಯಿತು. ಆಡಳಿತ ಪಕ್ಷದ ಸದಸ್ಯ ಶಾಂತರಾಮ್ ಬುಡ್ನ ಸಿದ್ಧಿ ಅವರು ಕೇಳಿದ ಪ್ರಶ್ನೆಗೆ ಅರಣ್ಯ ಸಚಿವ ಉಮೇಶ್ ಕತ್ತಿ ಉತ್ತರಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲೂ ವ್ಯಾಪಕ ಪ್ರತಿಭಟನೆ

Mon Dec 20 , 2021
ಬೆಂಗಳೂರು, ಡಿ.20- ಅತ್ತ ಬೆಳಗಾವಿ ಯಲ್ಲಿ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದರೆ ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಶಿವರಾಮೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮಹಾರಾಷ್ಟ್ರ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿವೆ. ಎಂಇಎಸ್‍ನವರು ನಮ್ಮ ನಾಡಧ್ವಜಕ್ಕೆ ಅವಮಾನ ಮಾಡಿದ್ದಾರೆ. ಸರ್ಕಾರದ ವಾಹನಗಳಿಗೆ ಬೆಂಕಿ ಇಟ್ಟು ಸರ್ಕಾರದ ಮೇಲೆ ದಾಳಿ ಮಾಡಿದ್ದಾರೆ. ಆದರೆ ಸರ್ಕಾರ ಕ್ರಮ ಕೈಗೊಳ್ಳಲು ಹಿಂದೆ ಮುಂದೆ ನೋಡುತ್ತಿದೆ ಎಂದು ಕರವೇ ಅಧ್ಯಕ್ಷ ಶಿವರಾಮೇಗೌಡ […]

Advertisement

Wordpress Social Share Plugin powered by Ultimatelysocial