ಬೆಂಗಳೂರಿಗೆ ಕಂಟಕವಾಗಿರುವ ಪಾದರಾಯನಪುರದಲ್ಲಿ ಇಂದು ಅಲ್ಲಿನ ಪ್ರತಿಯೊಬ್ಬರಿಗೂ ಕೋವಿಡ್-19 ಟೆಸ್ಟ ಮಾಡಲು ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ. ಈಗಾಗಲೇ ಹಲವು ಜನರನ್ನು ಟೆಸ್ಟ್ ಗೆ ಒಳಪಡಿಸಲಾಗಿದೆ. ವಾರ್ಡನಲ್ಲಿ ರ್ಯಾಂಡಮ್ ಟೆಸ್ಟನಲ್ಲಿ 6 ಮಂದಿಗೆ ಸೋಂಕು ಧೃಡಪಟ್ಟಿರುವ ಹಿನ್ನೆಲೆ ಈ ನಿರ್ಧಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದವರನ್ನು ಹೊರತು ಪಡಿಸಿ, 188 ನಿವಾಸಿಗಳ ಮಾದರಿಗಳನ್ನ ಕಲೆಕ್ಟ ಮಾಡಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 6 ಜನರಿಗೆ ಸೋಂಕು ಧೃಡಪಟ್ಟಿದೆ.
ಇನ್ನು 26 ಪರೀಕ್ಷಾ ವರದಿ ಬರುವುದು ಬಾಕಿಯಿದ್ದು, ಯಾವುದೇ ಸಂಪರ್ಕ ಇಲ್ಲದಿದ್ದರೂ ಸೀಲ್ ಡೌನ್ ಆಗಿರುವ ವಾರ್ಡ್ ನಲ್ಲಿ ಆರು ಮಂದಿಗೆ ಸೋಂಕು ಉಂಟಾಗಿದೆ. ಇದರಲ್ಲಿ ಒಬ್ಬ ತರಕಾರಿ ವ್ಯಾಪಾರಿಯೂ ಇದ್ದುದ್ದರಿಂದ ಪಾದರಾಯನಪುರ ವಾರ್ಡ್ ನಲ್ಲಿ ಇನ್ನೂ ಹೆಚ್ಚು ಮಂದಿಗೆ ಸೋಂಕು ಉಂಟಾಗಿರಬಹುದು. ಹೀಗಾಗಿ ಸಾಮೂಹಿಕ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳು ಪಾದರಾಯನಪುರದ ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆ ಮಾಡಲಿದ್ದಾರೆ ಎನ್ನಲಾಗಿದೆ. ಇಂದು ನಡೆಯುವ ಸಭೆಯಲ್ಲಿ ಆರೋಗ್ಯಾಧಿಕಾರಿಗಳು ಹೇಗೆ ಪರೀಕ್ಷೆ ನಡೆಸಬೇಕು. ಸಿಬ್ಬಂದಿ ಬಳಕೆ, ಭದ್ರತೆ ಸೇರಿದಂತೆ ಇನ್ನಿತರೆ ಸಿದ್ಧತೆ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.