ಅರುಣ್ ಎನ್ನುವ ಯುವಕ ಗೋಪಾಲ್ ಎನ್ನುವ ಗೆಳೆಯನ ಬಳಿ ಪೊಲೀಸ್ರಂತೆ ನಟಿಸಿ ಫೋನ್ ಮಾಡಿಸಿದ್ದಾನೆ . ಸಾಕ್ಷಿಯ ಮಾವ ಪ್ರಜ್ವಲ್ ಎನ್ನುವವರಿಗೆ ಫೋನ್ ಮಾಡಿ ಸಾಕ್ಷಿಯ ಬಳಿ ಮಾತನಾಡಿದ್ದಾನೆ . ನಕಲಿ ಪೊಲೀಸ್ ಗೋಪಾಲ್ ಬಸವೇಶ್ವರ ನಗರ ಪೊಲೀಸ್ ಠಾಣೆಯಿಂದ ಫೋನ್ ಮಾಡುತ್ತಿರುವುದಾಗಿ ಹೇಳಿದ್ದಾನೆ . ಬಳಿಕ ಮುಂದುವರೆದು ನಾನು ಬಸವೇಶ್ವರ್ ನಗರ ಪೊಲೀಸ್ ಠಾಣೆಯಿಂದ ಕರೆ ಮಾಡ್ತಾ ಇದ್ದೇನೆ . ಅರುಣ್ ಎಂಬ ಯುವಕ ನಿಮ್ಮ ಹೆಸರು ಹೇಳಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಅವನನ್ನು ಮದುವೆ ಮಾಡಿಕೊಳ್ಳಿ ಇಲ್ಲವಾದರೆ ಎಫ್ಐಆರ್ ದಾಖಲಿಸುತ್ತೇವೆ ಎಂದು ಬೆದರಿಸಿದ್ದಾನೆ . ಇದರಿಂದ ಭಯಗೊಂಡ ಯುವತಿ ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ . ಈ ಬಗ್ಗೆ ಸಾಕ್ಷಿ ಪೋಷಕರು ದೂರು ನೀಡಿದ್ದು , ಪೀಣ್ಯ ಪೊಲೀಸರು ಆರೋಪಿಗಳಾದ ಪ್ರೇಮಿ ಅರುಣ್ ಹಾಗೂ ನಕಲಿ ಪೊಲೀಸ್ ಗೋಪಾಲ್ನನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ . ಸಾಕ್ಷಿ ಬೆಂಗಳೂರಿನ ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿಯಲ್ಲಿ ಕೆಲಸ ಮಾಡುತ್ತಿದ್ದು , ಯುವಕನ ಪ್ರೀತಿಯ ಹುಚ್ಚಾಟಕ್ಕೆ ಯುವತಿ ಬಲಿಯಾಗಿದ್ದಾಳೆ .
CRIME : ಪಾಗಲ್ ಪ್ರೇಮಿಯ ಬೆದರಿಕೆ ಕರೆ: ಭಯಗೊಂಡ ಯುವತಿ ಆತ್ಮಹತ್ಯೆಗೆ ಶರಣು
ಪ್ರೀತಿಸು ಎಂದು ಪೀಡಿಸುತ್ತಿದ್ದ ಯುವಕನೊಬ್ಬ ಯುವತಿಯೊಬ್ಬಳಿಗೆ ಗೆಳೆಯನ ಮೂಲಕ ಬೆದರಿಕೆ ಕರೆ ಮಾಡಿಸಿದ ಪರಿಣಾಮ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದೊಡ್ಡಬಿದರಕಲ್ಲು ಬಳಿ ನಡೆದಿದೆ. ಸಾಕ್ಷಿ (24) ಆತ್ಮಹತ್ಯೆಗೆ ಶರಣಾದ ಯುವತಿ.ಬೆಂಗಳೂರು: ಪಾಗಲ್ ಪ್ರೇಮಿಯೊಬ್ಬ ಯುವತಿಯೊಬ್ಬಳಿಗೆ ಗೆಳೆಯನ ಮೂಲಕ ಬೆದರಿಕೆ ಕರೆ ಮಾಡಿಸಿದ ಪರಿಣಾಮ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದೊಡ್ಡಬಿದರಕಲ್ಲು ಬಳಿ ನಡೆದಿದೆ . ಸಾಕ್ಷಿ (24) ಆತ್ಮಹತ್ಯೆಗೆ ಶರಣಾದ ಯುವತಿ . ಅರುಣ್ ಎಂಬಾತ ಸಾಕ್ಷಿಯನ್ನು ಪ್ರೀತಿಸು , ಮದುವೆಯಾಗು ಎಂದು ಪೀಡಿಸುತ್ತಿದ್ದ . ಆಕೆ ಅದಕ್ಕೆ ಒಪ್ಪದ ಕಾರಣ ಅತನ ಗೆಳೆಯ ಗೋಪಾಲ್ ಬಳಿ ಬೆದರಿಕೆ ಕರೆ ಮಾಡಿಸಿದ್ದಾನೆ . ಇದರಿಂದ ಹೆದರಿದ ಯುವತಿ ದೊಡ್ಡಬಿದರಕಲ್ಲು ಮನೆಯ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ .
Please follow and like us: