ಕಳೆದ ಮೂರು ವರ್ಷಗಳಿಂದ ಉತ್ತರ ಪ್ರದೇಶದ ಸಾರಿಗೆ ನಿಗಮ ರಕ್ಷಾ ಬಂಧನ ನಿಮಿತ್ತ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ನೀಡುತ್ತಿದೆ. ಈ ವರ್ಷವು ಕೂಡ ಅದೇ ಪದ್ಧತಿಯನ್ನು ಮುಂದುವರಿಸಿದೆ. ಈ ವರ್ಷವೂ ರಕ್ಷಾ ಬಂಧನ ದಿನದಂದು ಮಹಿಳೆಯರಿಗೆ ಫ್ರೀ ರೈಡ್ ಗಿಫ್ಟ್ ನೀಡಲಾಗುತ್ತಿದೆ. ಎಲ್ಲಾ ಮಾದರಿಯ ಬಸ್ಸ್ನಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವಂತೆ ಸಿಎಂ ಯೋಗಿ ಆದಿತ್ಯನಾಥ್ ಸೂಚನೆ. ಇದರ ಜೊತೆಗೆ ರಾಜಸ್ಥಾನದಲ್ಲೂ ಕೂಡ ಮಹಿಳೆಯರಿಗೆ ರಕ್ಷಾ ಬಂಧನದoದು ಪ್ರಯಾಣ […]
ಮಂಡ್ಯದ ಕೆರೆ ಕಾಮೇಗೌಡರು ಕೊರೊನಾದಿಂದ ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ, ೮೨ ವರ್ಷದ ಕಾಮೇಗೌಡರು ಈಚೆಗೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕಾಲಿಗೆ ತೀವ್ರ ಗಾಯವಾಗಿತ್ತು. ಬಲಗಾಲಿನ ನರ ಸಂಬAಧಿ ಕಾಯಿಲೆಯ ಗಾಯ ಉಲ್ಬಣಗೊಂಡಿದ್ದ ಹಿನ್ನೆಲೆ ಮಳವಳ್ಳಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಮಯದಲ್ಲೇ ಅವರಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿತ್ತು. ಕಳೆದ ವಾರ ಮಂಡ್ಯದ ಕಾಮೇಗೌಡರನ್ನು ಕೊವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ […]
ಕೋವಿಡ್ ಸಂಕಷ್ಟದ ಹಿನ್ನಲೆಯಲ್ಲಿ ರಾಜ್ಯ ರ್ಕಾರ ಕರ್ಮಿಕರಿಗಾಗಿ ಹಮ್ಮಿಕೊಂಡಿರುವ ಯೋಜನೆಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಇಲಾಖೆಯ ಅಧಿಕಾರಿಗಳು ಶ್ರಮವಹಿಸಬೇಕು ಎಂದು ಕರ್ಮಿಕ ಹಾಗೂ ಸಕ್ಕರೆ ಸಚಿವ ಅರಬೈಲ್ ಶಿವರಾಮ ಹೆಬ್ಬಾರ್ ಅವರು ಅಧಿಕಾರಿಗಳಿಗೆ ಕಟ್ಟುನಿಟಿನ ಸೂಚನೆ ನೀಡಿದರು. ಹಾಗೂ ರಾಯಚೂರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ಮಿಕ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್-೧೯ ಸಾಂಕ್ರಾಮಿಕ ರೋಗ ತಡೆಯಲು ಲಾಕ್ಡೌನ್ ಜಾರಿ ಮಾಡಿದ […]
ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ೬ ನೇ ಕಂತು ಶೀಘ್ರವೇ ರೈತರ ಖಾತೆಗೆ ಜಮಾಆ ಮಾಡಲಿದೆ. ಈ ಕುರಿತು ಮಾಹಿತಿ ನೀಡಿರುವ ಯೋಜನೆಯ ಸಿಇಒ ವಿವೇಕ್ ಅಗರ್ವಾಲ್, ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರನೇ ಕಂತಿನ ಹಣವನ್ನು ಕಳುಹಿಸುವ ಪ್ರಕ್ರಿಯೆ ಆರಂಭವಾಗಿದ್ದು, ಆಗಸ್ಟ್ ೧ ರಿಂದ ನವೆಂಬರ್ ೩೦ ರವರೆಗೆ ನೋಂದಾಯಿತ ರೈತರ ಖಾತೆಗೆ ಹಣ ಕಳುಹಿಸಲಾಗುತ್ತದೆ […]
ಎರಡು ದಿನಗಳ ಹಿಂದೆ ಗೋಕಾಕ ರ್ಕಾರಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿ ಮೂಡಲಗಿ ಪುರಸಭೆಯ ಸಿಬ್ಬಂದಿಯಾಗಿದ್ದು ಮೃತ ದೇಹವನ್ನು ಹೊರಗಡೆ ಇಟ್ಟಿದ್ದಾರೆ. ಮೃತ ದೇಹವನ್ನು ಬೇಗನೆ ಅಂತ್ಯ ಸಂಸ್ಕಾರ ಮಾಡದೆ ಬೇಕಾಬಿಟ್ಟಿಯಾಗಿ ಮುಂಜಾನೆ ೭ ಗಂಟೆಯಿಂದ ಹೊರಗಡೆ ಇಟ್ಟು ಇಲ್ಲಿನ ಸಿಬ್ಬಂದಿಗಳು ನರ್ಲಕ್ಷ್ಯ ತೋರುತ್ತಿದ್ದಾರೆ. ೩ ಆ್ಯಂಬುಲೆನ್ಸ್ ಇದ್ದರೂ ಸಹ ಮೃತ ದೇಹವನ್ನು ಮಧ್ಯಾನ್ಹದವರೆಗೆ ಹಾಗೆ ಇಟ್ಟಿದ್ದಾರೆ. ಅಲ್ಲದೆ ಗೋಕಾಕ ಕೋವಿಡ್ ಸೆಂಟರ್ ಗೆ ಸೋಂಕಿತ […]
ನೆಲಮಂಗಲದ ಪಂಚಾಯತ್ ಸದಸ್ಯನ ಹೆಂಡತಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.ಪಂಚಾಯತ್ ಸದಸ್ಯ ಮಾನಸಿಕ ಹಾಗು ದೈಹಿಕ ಹಿಂಸೆಯಿAದ ಖಿನ್ನತೆಗೊಳಗಾಗಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಮಹಿಳೆಯ ಕುಟುಂಬದವರು ಪಂಚಾಯತ್ ಸದಸ್ಯ ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಸಾಯಿಸಿದ್ದಾನೆ ಎಂದು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆಯನ್ನ ಮಾಡಿದ್ದಾರೆ.
ಭಾರೀ ಗಾತ್ರದ ಕ್ರೇನ್ ಒಂದು ವಿಶಾಖಪಟ್ಟಣಂನ ಹಿಂದೂಸ್ಥಾನ್ ಶಿಫ್ ಯರ್ಡ್ ನಲ್ಲಿ ಕಾಮಗಾರಿ ನಡೆಸುತ್ತಿರುವ ವೇಳೆಯಲ್ಲಿ ಕುಸಿದು ಬಿದ್ದಿದೆ. ಇದರ ಪರಿಣಾಮ, ಕಾಮಗಾರಿಯಲ್ಲಿ ತೊಡಗಿದ್ದಂತ ೧೦ ಕರ್ಮಿಕರು ಸ್ಥಳದಲ್ಲಿಯೇ ಸಾನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಈ ಕುರಿತಂತೆ ವಿಶಾಖಪಟ್ಟಣಂ ಡಿಸಿಪಿ ಸುರೇಶ್ ಬಾಬು ಸ್ಪಷ್ಟ ಪಡಿಸಿದ್ದರು. ತಕ್ಷಣವೇ ಸ್ಥಳಕ್ಕೆದಾವಿಸಿದ ಪೊಲೀಸರು, ರಕ್ಷಣಾ ತಂಡದ ಸದಸ್ಯರು, ಕ್ರೇನ್ ಅಡಿಯಲ್ಲಿ ಸಿಲುಕಿರುವಂತ ಕರ್ಮಿಕರ ರಕ್ಷಣಾ ಕರ್ಯದಲ್ಲಿ ತೊಡಗಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, […]
ಸುಶಾಂತ್ ಸಿಂಗ್ ರಜಪೂತರ ಸಾವಿನ ಪ್ರಕರಣವನ್ನ ಸಿಬಿಐಗೆ ಒಪ್ಪಿಸಬೇಕೆಂಬ ಕೂಗು ಬಲವಾಗಿ ಕೇಳಿಬಂದ ಹಿನ್ನಲೆಯಲ್ಲಿ ಮಹಾರಾಚ್ಟç ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮುಂಬೈ ಪೊಲೀಸರು ತನಿಖೆ ನಡೆಸಲು ಸಮರ್ಥರಿದ್ದಾರೆ ಸಿಬಿಐಗೆ ಒಪ್ಪಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ತನಿಖೆ ವಿಳಂಬವಾಗುತ್ತಿದೆ ಎಂಬ ಕೂಗು ಕೇಳಿಬಂದ ಹಿನ್ನಲೆಯಲ್ಲಿ ಸಿಬಿಐಗೆ ಕೇಸನ್ನ ಒಪ್ಪಿಸಬೇಕೆಂಬ ಕೂಗು ಕೇಳಿಬಂದಿತ್ತು ಇದಕ್ಕೆ ಉದ್ದವ ಠಾಕ್ರೆ ತಮ್ಮ ರಾಜ್ಯದ ಪೊಲೀಸರನ್ನ ವಹಿಸಿಕೊಂಡು ಅವರು ಮುಂಬೈ ಪೊಲೀಸರು ಕೋವಿಡ್ ೧೯ ವಿರುದ್ಧ ಹೋರಾಡುತ್ತಿದ್ದಾರೆ […]
ಕೊರೊನಾ ಹೆಸರಿನಲ್ಲಿ ನಡೆಸಿದ ಭ್ರಷ್ಟಾಚಾರವೇ ಬಿಜೆಪಿ ಸಂಸ್ಕಾರ ಎನ್ನುವಂತಾಗಿದೆ. ಸಾರ್ವಜನಿಕ ಲೆಕ್ಕ ಸಮಿತಿ ಸಭೆ ನಡೆಸಲು ಸರ್ಕಾರ ಮುಂದಾಗಿಲ್ಲ. ಭ್ರಷ್ಟಾಚಾರದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ಆಗಬೇಕು’ ರಾಜ್ಯದ ಎಲ್ಲ ಜಿಲ್ಲೆಗಳಿಗೂ 30 ಜನರ ತಂಡ ಭೇಟಿ ನೀಡಲಿದೆ. ಕೊರೊನಾ ಸಂತ್ರಸ್ತರಿಗೆ ಧೈರ್ಯ ತುಂಬುವ, ಸಹಾಯ ಮಾಡುವ ಮತ್ತು ಭ್ರಷ್ಟಾಚಾರ ಬಯಲಿಗೆ ಎಳೆಯುವ ಕೆಲಸವನ್ನು ಈ ತಂಡ ಮಾಡಲಿದೆ’ ರಾಜ್ಯ ಸರ್ಕಾರ ಕೋವಿಡ್ -19 ಸಂದರ್ಭದಲ್ಲಿ ಆರೋಗ್ಯ ಇಲಾಖೆಯ […]
ಆಗಸ್ಟ್ ೫ ರಂದು ನಡೆಯಲಿರುವ ಅಯೋಧ್ಯೆಯ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದ ಬಗ್ಗೆ ಮಾತನಾಡಿರುವ ಯುಪಿ ಮಾಜಿ ಸಿಎಂ ಕಲ್ಯಾಣ್ ಸಿಂಗ್ ‘ಆಗಸ್ಟ್ ೫ ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಆಗಸ್ಟ್ ೪ರಂದು ನಾನು ಅಯೋದ್ಯೆಗೆ ತಲುಪಿ, ಮರುದಿನ ನಡೆಯುವ ಸಮಾರಂಭದಲ್ಲಿ ಭಾಗವಹಿಸಲಿದ್ದೇನೆ. ಇದು ನನಗೆ ಅತ್ಯಂತ ಸಂತಸ ತರುವ ವಿಚಾರವಾಗಿದೆ’ ಎಂದು ಕಲ್ಯಾಣ್ ಸಿಂಗ್ ಹೇಳಿದ್ದಾರೆ. ೧೯೯೨ ರಲ್ಲಿ ನಡೆದ […]