ಅಮರನಾಥ ಯಾತ್ರಾರ್ಥಿಗಳಿಗೆ ಅಮರನಾಥೇಶ್ವರ ಆಡಳಿತ ಮಂಡಳಿ ಮುಖ್ಯ ಮಾಹಿತಿಯೊಂದನ್ನು ನೀಡಿದ್ದು ಈ ತಿಂಗಳಲ್ಲಿ ಅಮರನಾಥೇಶ್ವರನ ದರ್ಶನ ಪಡೆಯಲು ದಿನಕ್ಕೆ ಗರಿಷ್ಠ 500 ಯಾತ್ರಾರ್ಥಿಗಳಿಗೆ ಮಾತ್ರ ಅವಕಾಶ ನೀಡಿವುದರ ಮೂಲಕ ಸರ್ಕಾರ ಅನುಮತಿ ನೀಡಲಾಗಿದೆ. ದರ್ಶನಕ್ಕೆ ಬರುವ ಎಲ್ಲಾ ಯಾತ್ರಾರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ಮತ್ತು ಕೋವಿಡ್ 19 ಟೆಸ್ಟ್ ಕಡ್ಡಾಯ ಮಾಡಿಸಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಅಮರನಾಥ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು ಎಂದು ಆಡಳಿತ ಮಂಡಳಿಗೆ ಸರ್ಕಾರ ಸೂಚನೆ ನೀಡಿದೆ.

ಮೈಸೂರಿನ ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿಯೊಬ್ಬರಿಗೆ ಕೋವಿಡ್-೧೯ ಇರುವುದು ದೃಢಪಟ್ಟಿದೆ. ಈ ವ್ಯಕ್ತಿಯನ್ನು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದು, ಜೊತೆಗಿದ್ದ ನಾಲ್ವರನ್ನು ಜೈಲಿನಲ್ಲೇ ಕ್ವಾರಂಟೈನ್ ಮಾಡಲಾಗಿದೆ.ಮೈಸೂರಿನಲ್ಲಿ ಈಚೆಗೆ ನಡೆದಿದ್ದ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಈತ, ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ. ನಂತರ ಪೊಲೀಸರಿಗೆ ಶರಣಾಗಿದ್ದ. ಬೆಂಗಳೂರಿನಲ್ಲಿದ್ದ ಕಾರಣ ಆತನನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಜೂನ್ ೩೦ರಂದು ಗಂಟಲು ದ್ರವ ಪಡೆದು, ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಹೀಗಾಗಿ, ವಿಜಯನಗರ ಠಾಣೆಯ ಪೊಲೀಸರು ಕೂಡ ಈಗ ಆತಂಕದಲ್ಲಿದ್ದಾರೆ. […]

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯ ಉಪಾಧ್ಯಕ್ಷ ಮಜೀದ್ ಖಾನ್ ಅವರು, ರಾಜ್ಯ ಸರ್ಕಾರವು ಕೋವಿಡ್-೧೯ ನಿರ್ವಹಣೆಗಾಗಿ ಇಲ್ಲಿಯವರೆಗೆ ಮೂರು ಸಾವಿರದ ಮುನ್ನೂರ ತೊಂಬತ್ತೆರಡು (೩೩೯೨) ಕೋಟಿ ರೂಪಾಯಿ ಖರ್ಚು ಮಾಡಿರುವುದಾಗಿ ಹೇಳಿಕೊಂಡಿದೆ. ಯಾವ ಯಾವ ವಿಷಯಕ್ಕೆ ಎಷ್ಟು ಖರ್ಚು ಮಾಡಲಾಗಿದೆ ಮಾಹಿತಿ ಹಕ್ಕು (ಖಖಿI) ಮೂಲಕ ಕೇಳಿದಾಗ ಆಡಿಟ್ ಆಗಬೇಗು ಎಂಬ ಮಾಹಿತಿಯನ್ನು ರವಾನಿಸುವ ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು […]

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಹೈಡ್ರಾಕ್ಸಿಕ್ಲೋರೋಕ್ವಿನ್ ಕೊರೋನಾ ವೈರಸ್ ಗೆ ಔಷಧಿಯಾಗಬಲ್ಲದು ಎಂದು ಹೇಳಿದ್ದರು. ಆದರೆ ಆ ಬಳಿಕ ಕೊರೋನಾ ವೈರಸ್ ಸಾವುಗಳ ಪ್ರಮಾಣ ಕಡಿಮೆ ಮಾಡುವಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ನಿಷ್ಪ್ರಯೋಜಕ ಎಂದು ವಿಜ್ಞಾನಿಗಳು ಹೇಳಿದ್ದರು. ಹೀಗಾಗಿ ಅಮೆರಿಕ ವಿಜ್ಞಾನಿಗಳು ಇದರ ಮೇಲಿನ ಪ್ರಯೋಗವನ್ನು ಕೈ ಬಿಟ್ಟಿದ್ದರು.ಇದೀಗ ವಿಶ್ವ ಆರೋಗ್ಯ ಸಂಸ್ಥೆ ಕೂಡ ಊಅಕಿ ಮೇಲಿನ ಪ್ರಯೋಗವನ್ನು ಕೈ ಬಿಟ್ಟಿದೆ. HCQ ಮಾತ್ರವಲ್ಲದೇ lopinavir/ritonavir   ಔಷಧಿ ಮೇಲಿನ ಪ್ರಯೋಗವನ್ನೂ […]

ಗಲ್ವಾನ್ ಕಣಿವೆಯ ರಕ್ತ ಸಿಕ್ತ ಘರ್ಷಣೆಯಲ್ಲಿ ಸಾಕಷ್ಟು ಹಾನಿ ಅನುಭವಿಸಿರುವುದಲ್ಲದೆ, ಜಾಗತಿಕವಾಗಿ ಏಕಾಂಗಿಯಾಗುವ ಭೀತಿ ಇದ್ದರೂ ಚೀನಾ ಸುಮ್ಮನಾಗುತ್ತಿಲ್ಲ. ಲಡಾಖ್ ಪೂರ್ವಭಾಗದ ನಾಲ್ಕು ಕಡೆಗಳಲ್ಲಿ ಸೇನೆಯನ್ನು ನಿಯೋಜಿ ಸಿರುವ ಅದು, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಕ್ಕೆ ಹೊಂದಿಕೊAಡ ಗಡಿಗಳಲ್ಲೂ ತನ್ನ ಸೇನೆಯನ್ನು ನಿಯೋಜಿ ಸಿದೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ದೀಢೀರ್ ಲೇಹ್ ಭೇಟಿಯ ನಂತರದಲ್ಲಿ ಈ ವಿದ್ಯಮಾನ ಕಂಡು ಬಂದಿದೆ.ಅಲ್ಲಿ ನಿಯೋಜನೆಗೊಂಡಿರುವ ಭಾರತೀಯ ಸೇನಾಪಡೆ, ವಾಯುಪಡೆ ಮತ್ತು […]

ಗಂಟೆಗಟ್ಟಲೆ ಆಂಬ್ಯುಲೆನ್ಸ್ ಗೆ ಕಾದು ಮನೆ ಮುಂದೆ ರಸ್ತೆಯಲ್ಲಿ ಕೋವಿಡ್-೧೯ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಕ್ಷಮೆ ಕೇಳಿದ್ದಾರೆ.ಘಟನೆ ಬಳಿಕ ಕುಟುಂಬಸ್ಥರನ್ನು ಭೇಟಿ ಮಾಡಿದ ಬಿಬಿಎಂಪಿ ಆಯುಕ್ತ ಬಿ ಎಚ್ ಅನಿಲ್ ಕುಮಾರ್, ಪಾಲಿಕೆ ಪರವಾಗಿ ಕ್ಷಮೆಯಾಚಿಸಿದ್ದಾರೆ.ಅವರು ಮಾಡಿರುವ ಟ್ವೀಟ್ ನಲ್ಲಿ ಕುಟುಂಬ ಸದಸ್ಯರ ಬಳಿ ಕ್ಷಮೆಯಾಚುತ್ತಿರುವ ದೃಶ್ಯ ಕಂಡುಬರುತ್ತಿದೆ. ಕೊರೋನಾ ರೋಗಿಗಳನ್ನು ಮತ್ತು ಅವರ ಮನೆಯವರನ್ನು ಕಳಂಕಿತರAತೆ ಕಾಣಬೇಡಿ ಎಂದು ಸಹ ಟ್ವೀಟ್ […]

ಕೊರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ. ಆದ್ದರಿಂದ ಸೀಲ್ ಡೌನ್ ಪ್ರದೇಶಗಳಲ್ಲಿ ನೆಲೆಯೂರಿರುವ ವಿಧಾನಸೌಧ ಸೇರಿದಂತೆ ಸರ್ಕಾರಿ ಸಚಿವಾಲಯಗಳ ಸಿಬ್ಬಂದಿಗಳು ಮನೆಯಿಂದಲೇ ಕೆಲಸ ಮಾಡಲು ರಾಜ್ಯ ಸರ್ಕಾರ ಅನುಮಂತಿ ನೀಡಿದೆ.ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದೆ, ಹೀಗಾಗಿ ವಿಧಾನಸೌಧ, ವಿಕಾಸಸೌಢ, ಎಂ.ಎಸ್.ಬಿಲ್ಡಿಂಗ್ ಸೇರಿದಂತೆ ಸರ್ಕಾರದ ಸಚಿವಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಸೀಲ್ಡೌನ್ ಪ್ರದೇಶದಲ್ಲಿದ್ದರೆ ಮನೆಯಿಂದಲೇ ಕಾರ್ಯನಿರ್ವಹಿಸಬಹುದು ಎಂದು ತಿಳಿಸಿದೆ.

ಸಿಲಿಕಾನ್ ಸಿಟಿಯಲ್ಲಿ ಆಸ್ಪತ್ರೆಗಳ ಬೇಜವಾಬ್ದಾರಿತನ ಮತ್ತೆ ಮತ್ತೆ ವರದಿಯಾಗುತ್ತಲೇ ಇದೆ. ಕೋವಿಡ್ ಪರಿಸ್ಥಿತಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಕೊರೊನಾ ಸೋಂಕು ಇಲ್ಲದ ರೋಗಿಗಳಿಗೆ ಚಿಕಿತ್ಸೆ ಸಿಗುವುದು ಕಷ್ಟಕರವಾಗಿದೆ. ಅನಾರೋಗ್ಯಕ್ಕೀಡಾಗಿದ್ದ ಮಹಿಳೆಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ಆಕೆ ಸಾವನ್ನಪ್ಪಿದ್ದಾರೆ. ಕುರುಬರಹಳ್ಳಿಯ ಲೋಕೇಶ್ ಎಂಬವರ ತಾಯಿಗೆ ಹೃದಯಾಘಾತ ಸಂಭವಿಸಿತ್ತು. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆಕೆಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿದರು. ಬಳಿಕ ಜಯದೇವ ಸೇರಿದಂತೆ ನಾಲ್ಕೈದು […]

ಜನರು ಅಸ್ವಸ್ಥ ಪಂಜಾಬ್‌ನ ತಾರ್ನ್ ತರಣ್‌ನ ಗುರುದ್ವಾರದಲ್ಲಿ ಪ್ರಸಾದ ಸೇವಿಸಿದ ನಂತರ ಕನಿಷ್ಠ 10 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಅಮೃತಸರ ಮೂಲದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗಷ್ಟೆ ನಿಧನರಾದ ತಾಯಿಗಾಗಿ ರಘುವೀರ್ ಸಿಂಗ್ ಎನ್ನುವವರು ಆಯೋಜಿಸಿದ್ದ ಸುಖಮಣಿ ಸಾಹಿಬ್ ಪ್ರವಚನದಲ್ಲಿ ಈ ಘಟನೆ ನಡೆದಿದೆ. ಅವರ ಮನೆಯಲ್ಲಿ ಪ್ರಾರ್ಥನಾ ಪ್ರವಚನವನ್ನು ಆಯೋಜಿಸಲಾಗಿತ್ತು. ಪ್ರಾರ್ಥನೆಯ ಪ್ರವಚನದ ನಂತರ ರಘುವೀರ್ ಸಿಂಗ್ […]

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿ ಕಾಡಸಿದ್ದೇಶ್ವರ ಮಠಕ್ಕೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿದ್ದು, ಕಾಡಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಡಾ.ಶ್ರೀಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಯವರನ್ನು ಭೇಟಿ ಮಾಡಿ ಅವರ, ಆಶೀರ್ವಾದ ಪಡೆದುಕೊಂಡರು. ಕೆಪಿಸಿಸಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಶ್ರೀಮಠಕ್ಕೆ ಭೇಟಿ ನೀಡಿದ ಅವರು ಪಕ್ಷದ ಸಂಘಟನೆ ಮತ್ತು ಪಕ್ಷವನ್ನು ಹೇಗೆ ಅಧಿಕಾರಕ್ಕೆ ತರಬೇಕೆಂಬುದರ ಬಗ್ಗೆ […]

Advertisement

Wordpress Social Share Plugin powered by Ultimatelysocial