ದಾವಣಗೆರೆ: ಕೊರೊನಾ ವಾರಿಯರ್ಸ್ ಗೆ ಒಳ್ಳೆಯದಾಗಲಿ ಹಾಗೂ ಕೊರೊನಾ ವೈರಸ್ ನಿವಾರಣೆಗೆ ಪ್ರಾರ್ಥಿಸಿ ಹೊನ್ನಾಳಿಯ ಹಿರೇಕಲ್ಮಠದಲ್ಲಿ ಮೃತ್ಯುಂಜಯ ಹೋಮ ಹಮ್ಮಿಕೊಳ್ಳಲಾಗಿತ್ತು.ಹೊನ್ನಾಳಿ ಮತ್ತು ನ್ಯಾಮತಿಯ ಅವಳಿ ತಾಲ್ಲೂಕಿನಲ್ಲಿ ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಿದವರಿಗೆ ಇಂದು ಹೊನ್ನಾಳಿಯ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಪುಷ್ಪವೃಷ್ಟಿ ಹಾಗೂ ಮಾಲಾರ್ಪಣೆಯ ಮೂಲಕ ಅಭಿನಂದನೆ ಸಲ್ಲಿಸಲಾಯಿತು. ಸರ್ವರಿಗೂ ಒಳ್ಳೆಯದಾಗಲಿ, ಕಾಲಕಾಲಕ್ಕೆ ಮಳೆ-ಬೆಳೆ ಉತ್ತಮವಾಗಲಿ ಎಂದು ಪ್ರಾರ್ಥಿಸಲಾಯಿತು. ಈ ವೇಳೆ ಹಿರೇಕಲ್ಮಠದ ಶ್ರೀಗಳು, ಶಾಸಕರಾದ ರೇಣುಕಾಚಾರ್ಯ ದಂಪತಿ, ಜಿಲ್ಲಾಧಿಕಾರಿ […]
ಬಾಲಿವುಡ್ನ ಖ್ಯಾತ್ ಸಂಗೀತ ಸಂಯೋಜಕ ವಾಜಿದ್ ಖಾನ್ ವಿಧಿವಶರಾಗಿದ್ದಾರೆ. ಕೆಲ ಸಮಯದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ಸೋಂಕು ತಗುಲಿತ್ತು ಎಂಬ ಶಂಕೆ ಕೂಡಾ ವ್ಯಕ್ತವಾಗಿತ್ತು. ವಾಜಿದ್ ಖಾನ್ಗೆ ೪೨ ವಯಸ್ಸಾಗಿತ್ತು. ಸಾಜಿದ್-ವಾಸಿದ್ ಜೋಡಿ ಸಾಕಷ್ಟು ಪ್ರಸಿದ್ಧಿ ಪಡೆದಿತ್ತು. ೧೯೯೮ರಲ್ಲಿ ಸಲ್ಮಾನ್ ಖಾನ್ ನಟನೆಯ ಪ್ಯಾರ ಕಿಯಾ ತೋ ಡರ್ನಾ ಕ್ಯಾ ಮೂಲಕ ಈ ಜೋಡಿ ಬಾಲಿವುಡ್ಗೆ ಎಂಟ್ರಿ ಕೊಟ್ಟಿತ್ತು. ಲಾಕ್ಡೌನ್ ಟೈಮ್ನಲ್ಲಿ ಬಿಡುಗಡೆಯಾಗಿರೋ […]
ನಟ ಸೋನು ಸೂದ್ ಅನೇಕ ದಿನಗಳಿಂದ ಸುದ್ದಿಯಲ್ಲಿದ್ದಾರೆ. ಸೋನು ಸೂದ್ ಅನೇಕ ಕಾರ್ಮಿಕರ ನೆರವಿಗೆ ಬಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸೋನು ಸೂದ್ ನೆರವಿನ ಹಸ್ತ ಚಾಚುವುದಾಗಿ ಹೇಳಿದ್ದರು. ಅವ್ರ ಈ ಹೇಳಿಕೆ ನಂತ್ರ ಚಿತ್ರವಿಚಿತ್ರ ವಿನಂತಿಗಳು ಬರ್ತಿವೆ. ಈಗ ಮಹಿಳೆಯೊಬ್ಬಳು ಸೋನು ಸೂದ್ ಗೆ ಸಹಾಯ ಮಾಡುವಂತೆ ಕೇಳಿದ್ದಾಳೆ. ಲಾಕ್ ಡೌನ್ 4 ಮುಗಿಯುವವರೆಗೂ ನಾನು ಗಂಡನ ಜೊತೆಗಿದ್ದೆ. ಇನ್ನು ಇರಲು ಸಾಧ್ಯವಿಲ್ಲ. ನನ್ನನ್ನು ನನ್ನ ತಾಯಿ ಮನೆಗೆ ಕಳುಹಿಸುತ್ತೀರಾ […]
ದೀರ್ಘಕಾಲದ ಲಾಕ್ಡೌನ್ ನಂತರ ಇಂದು ರೈಲು ಸೇವೆ ಆರಂಭವಾಗಿದೆ. ೨೦೦ ರೈಲುಗಳು ವೇಳಾಪಟ್ಟಿ ಅನುಸಾರ ಸಂಚರಿಸಲಿದ್ದು, ಮೊದಲ ರೈಲು ಮಹಾನಗರಿ ಎಕ್ಸ್ಪ್ರೆಸ್ ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ನಿಂದ ಉತ್ತರ ಪ್ರದೇಶದ ವಾರಣಾಸಿಗೆ ಪ್ರಯಾಣ ಬೆಳೆಸಿದೆ. ಮೊದಲ ರೈಲು ೦೧೦೯೨ ಸಿಎಸ್ಎಂಟಿ ಮುಂಬೈ-ವಾರಣಾಸಿ ವಿಶೇಷ ರೈಲು ೨೦೨೦ ಜೂನ್. ೧ರಂದು ೦೦.೧೦ಕ್ಕೆ ಹೊರಟಿದೆ ಎಂದು ಸೆಂಟ್ರಲ್ ರೈಲ್ವೆ ಇಲಾಖೆ ಟ್ವೀಟ್ ಮಾಡಿದೆ. ಮೇ ೧೨ರಂದು ಸರಿಸುಮಾರು ೧.೪೫ ಲಕ್ಷ ಪ್ರಯಾಣಿಕರು […]
ರಾಜ್ಯ ಕಾಂಗ್ರೆಸ್ನಲ್ಲಿ ಎರಡು ಶಕ್ತಿ ಕೇಂದ್ರಗಳ ನಡುವೆ ತಿಕ್ಕಾಟ ಶುರುವಾಗಿದೆ. ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ನಡೀತಿದೆ. ಪಕ್ಷದ ಮೇಲೆ ಹಿಡಿತ ಸಾಧಿಸಲು ಉಭಯ ನಾಯಕರ ನಡುವೆ ತೆರೆಮರೆ ನಡುವೆ ಪೈಪೋಟಿ ಏರ್ಪಟ್ಟಿದೆ ಎನ್ನಲಾಗ್ತಿದೆ.ಪದಾಧಿಕಾರಿಗಳ ನೇಮಕ ಸೇರಿದಂತೆ ಹಲವು ವಿಚಾರಗಳಲ್ಲಿ ಇಬ್ಬರು ನಾಯಕರ ನಡುವೆ ಮನಸ್ತಾಪ ಇರೋದು ಈಗಾಗಲೇ ಬಹಿರಂಗವಾಗಿದೆ. ತಮ್ಮ ಬೆಂಬಲಿಗರಿಗೆ ಪದಾಧಿಕಾರಿಗಳ ನೇಮಕದಲ್ಲಿ ಅವಕಾಶ ನೀಡಲು ಸಿದ್ದರಾಮಯ್ಯ ಹಾಗೂ […]
ಲಾಕ್ ಡೌನ್ ಸಂದರ್ಭದಲ್ಲಿ ಜನರು ಊರು ತಲುಪಲು ಸಾಕಷ್ಟು ಕಸರತ್ತು ನಡೆಸಿದ್ದಾರೆ. ಕೆಲವರು ಕಾಲ್ನಡಿಗೆಯಲ್ಲಿ ಊರು ತಲುಪಿದ್ರೆ ಮತ್ತೆ ಕೆಲವರು ಬೈಕ್ ಮೂಲಕ ಮನೆ ಸೇರಿದ್ದರು. ಈ ಎಲ್ಲದರ ಮಧ್ಯೆ ತಮಿಳುನಾಡಿನ ವ್ಯಕ್ತಿಯೊಬ್ಬ ಗಮನ ಸೆಳೆದಿದ್ದಾರೆ. ಕೊಯಮತ್ತೂರಿನ ಟೀ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿ ಹೆಂಡತಿ, ಮಕ್ಕಳನ್ನು ಮನೆಗೆ ತಲುಪಿಸಲು ಬೈಕ್ ಕದ್ದಿದ್ದಾನೆ. ಎರಡು ವಾರಗಳ ನಂತ್ರ ಬೈಕ್ ಪಾರ್ಸಲ್ ಮಾಡಿದ್ದಾನೆ. ವ್ಯಕ್ತಿ ಉದ್ಯಮಿಯೊಬ್ಬರ ಬೈಕ್ ಕದ್ದಿದ್ದ. ಪಾರ್ಸಲ್ ಕಂಪನಿ […]
ಕಿರಿಕ್ ಪರ್ಟಿ’, ‘ರಿಕ್ಕಿ’, ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾಗಳಿಗೆ ನರ್ದೇಶನ ಮಾಡಿ ಗುರುತಿಸಿಕೊಂಡ ರಿಷಬ್ ಶೆಟ್ಟಿ, ‘ಬೆಲ್ ಬಾಟಂ’ ಸಿನಿಮಾ ಮೂಲಕ ಹೀರೋ ಆಗಿಯೂ ಬಡ್ತಿ ಪಡೆದರು. ಆ ಬಳಿಕ ಅವರಿಗೆ ನಟನೆಯ ಅವಕಾಶ ಹೇರಳವಾಗಿ ಸಿಗುತ್ತಿದ್ದು, ಈಗ ಹೊಸ ಪ್ರಾಜೆಕ್ಟ್ವೊಂದಕ್ಕೆ ಕೈ ಹಾಕಿದ್ದಾರೆ. ಡಾನ್ ಅಮರ್ ಆಳ್ವಾ ಪಾತ್ರಕ್ಕೆ ರಿಷಬ್ ಬಣ್ಣ ಹಚ್ಚಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡ್ತಿದೆ. ರಿಷಬ್ ಜೊತೆ ಸಹ-ನರ್ದೆಶಕನಾಗಿ ಕೆಲಸ ಮಾಡಿರುವ […]
ಉತ್ತರ ಪ್ರದೇಶ: ಕಾನ್ಪುರ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲೆಯೊಬ್ಬರು ಮಾತನಾಡಿರುವ ವಿಡಿಯೋ ಒಂದು ಭಾರೀ ವಿವಾದಕ್ಕೆ ಕಾರಣವಾಗಿದೆ. ತಬ್ಲಿಘಿ ಜಮಾತ್ ಸದಸ್ಯರನ್ನು ಅವರು ಭಯೋತ್ಪಾದಕರು ಎಂದು ಕರೆದಿದ್ದಾರೆ. ತಮ್ಮ ಕಚೇರಿಯಲ್ಲಿ ಹಲವು ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಾಂಶುಪಾಲೆ. ಕೊರೊನಾ ಸೋಂಕು ಅಂಟಿಸಿಕೊಂಡ ತಬ್ಲಿಘಿ ಜಮಾತ್ ಸಂಘಟನೆ ಸದಸ್ಯರಿಗೆ ಸರ್ಕಾರ ಉಚಿತವಾಗಿ ಚಿಕಿತ್ಸೆ ನೀಡುತ್ತಿದೆ ಎಂದಿದ್ದಾರೆ. ತಬ್ಲಿಘಿ ಜಮಾತ್ ಸದಸ್ಯರಿಗೆ ಚಿಕಿತ್ಸೆ ನೀಡಲು ಐಸೋಲೇಷನ್ ವಾರ್ಡ್ಗಳನ್ನು ನಿರ್ಮಿಸಲಾಗಿದೆ. ಇದಕ್ಕಾಗಿ ತೆರಿಗೆದಾರರ ಕೋಟ್ಯಂತರ ರೂ […]
ಏನೇ ಮಾಡಿದರೂ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇರುವ ಈ ಕೊರೊನಾ ಸೋಂಕು ದೊಡ್ಡ ತಲೆನೋವಾಗಿ ಪರಿಣಮಿಸಿರುವ ಬೆನ್ನಲ್ಲೇ ವಿಜ್ಞಾನಿಗಳು ಅತ್ಯಂತ ಭಯ ಹುಟ್ಟಿರುವ ವರದಿಯನ್ನು ನೀಡಿದ್ದಾರೆ. ಅದೇನೆಂದರೆ, ಕರೊನಾ ವೈರಸ್ಗಿಂತಲೂ ಭೀಕರ ವೈರಸ್ ಜಗತ್ತನ್ನು ಆವರಿಸಲಿದ್ದು, ಅದು ವಿಶ್ವದ ಅರ್ಧದಷ್ಟು ಜನರ ಪ್ರಾಣಕ್ಕೆ ಕುತ್ತು ತರುತ್ತದೆ ಎಂಬ ವರದಿಯನ್ನು ಅವರು ನೀಡಿದ್ದಾರೆ. ವಿಜ್ಞಾನಿಗಳು ಹೇಳಹೊರಟಿರುವ ಈ ವೈರಸ್ ಶುರುವಾಗುವುದು ಕೋಳಿ ಸಾಕಾಣಿಕೆ ಕೇಂದ್ರದಿಂದ ಎಂಬುದು. ಅಂದರೆ ಇತ್ತೀಚೆಗೆ ಕೋಳಿ […]
ಬೀಜಿಂಗ್: ಎಲಿವೇಟರ್ನಲ್ಲಿ ಮಗುವೊಂದು ಅಪಾಯಕ್ಕೆ ಸಿಲುಕಿದ ಘಟನೆ ಹುಬೇ ಪ್ರಾಂತ್ಯದ ದಯೆ ಎಂಬಲ್ಲಿ ನಡೆದಿದೆ. ಈ ಹೃದಯವಿದ್ರಾವಕ ಘಟನೆಯು ಸಿಸಿ ಟಿವಿ ವಿಡಿಯೋವನ್ನು ಅಲ್ಲಿನ ಸುದ್ದಿ ಸಂಸ್ಥೆ ಪೀಪಲ್ಸ್ ಡೇಲಿ ಟ್ವಿಟರ್ ನಲ್ಲಿ ಅಪ್ ಲೋಡ್ ಮಾಡಿದೆ. 2 ವರ್ಷದ ಹೆಣ್ಣು ಮಗು ಏಕಾಂಗಿಯಾಗಿ ಎಲಿವೇಟರ್(ಲಿಫ್ಟ್) ನೊಳಗೆ ನಡೆದು ಬರುತ್ತದೆ. ಎಲಿವೇಟರ್ ನ ಬಾಗಿಲ ಮೇಲೆ ಇರುವ ಸುರಕ್ಷಾ ಹಗ್ಗವು ಇದ್ದಕ್ಕಿದ್ದಂತೆ ಬಾಲಕಿಯ ಕೈಯ್ಯನ್ನು ಎಳೆದುಕೊಳ್ಳುತ್ತದೆ. ಒಂದು ಹಂತದಲ್ಲಿ ಬಾಲಕಿಯನ್ನು […]