ಪ್ರಾಣ ಲೆಕ್ಕಿಸದೇ ಕೊರೋನಾ ಸಂಕಷ್ಟ ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸಮೂಹಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಶುಭ ಕೋರಿದ್ದಾರೆ. ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಸಮಸ್ತ ವೈದ್ಯ ಸಮೂಹಕ್ಕೆ ಹಾಗೂ ಅವರಿಗೆ ಬೆಂಬಲ ನೀಡುತ್ತಿರುವ ಕುಟುಂಬ ಸದಸ್ಯರಿಗೆ ಶುಭಾಶಯಗಳು. ದೇಶವನ್ನು ಸೈನಿಕರು ಕಾಯುವಂತೆ ಜನರ ಆರೋಗ್ಯ ಕಾಪಾಡುವ, ಇನ್ನೊಬ್ಬರ ಪ್ರಾಣ ಉಳಿಸುವ ಮಹಾತ್ಕಾರ್ಯದಲ್ಲಿ ತೊಡಗಿರುವ ವೈದ್ಯರ ಶ್ರಮ ಅಮೂಲ್ಯವಾದದ್ದು. ಕರ್ನಾಟಕದ ಪ್ರತಿಯೊಂದು ಆರೋಗ್ಯ ಕೇಂದ್ರಗಳಲ್ಲಿ […]
ಚಾಮರಾಜನಗರದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಜಿಲ್ಲೆಯಾದ್ಯಂತ ಪ್ರತಿದಿನ ಸಂಜೆ 4 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹೌದು ಇನ್ನು ಮುಂದೆ ಸಂಜೆ 4 ಗಂಟೆ ನಂತರ ಅಗತ್ಯಸೇವೆಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ವ್ಯಾಪಾರ ವಹಿವಾಟನ್ನು ನಿರ್ಬಂಧಿಸಲಾಗಿದೆ. ವಾಹನ ಸಂಚಾರವನ್ನು ಸಹ ನಿಷೇಧಿಸಲಾಗಿದೆ. ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಹಾಗೂ ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾ […]
ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಕುರಿತು ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ಹೌದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಲಾಕ್ ಡೌನ್ ತೀರ್ಮಾನ ಸರ್ಕಾರ ಮಾಡುವುದಿಲ್ಲ. ತಜ್ಞರು ಕೊಡುವ ವರದಿ ಆಧಾರದ ಮೇಲೆ ಲಾಕ್ ಡೌನ್ ಮಾಡಬೇಕಾ? ಬೇಡವಾ ಎಂದು ಯೋಚನೆ ಮಾಡುತ್ತೇವೆ ಎಂದು ಹೇಳಿದರು. ಹಾಗೂ ಕೊರೊನಾ […]
ಕೇಂದ್ರ ವಲಯ ಐಜಿ ಸೀಮಂತ್ ಕುಮಾರ್ ಸಿಂಗ್ ರವರು ಗಡಿ ಪರಿಶೀಲನೆಗಾಗಿ ಅತ್ತಿಬೆಲೆಗೆ ಆಗಮಿಸಿದರು. ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಜೊತೆ ಮಾತನಾಡಿ. ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಹಾಗೆಯೇ ತಮಿಳುನಾಡಿನಿಂದ ಬರುವವರನ್ನು ಪರಿಶೀಲನೆ ಮಾಡಿ ಬಿಡುವಂತೆ ಆದೇಶಿಸಿದರು. ಅಲ್ಲದೆ ಪೊಲೀಸರ ಆರೋಗ್ಯದ ಕಾಳಜಿ ನಮ್ಮ ಆದ್ಯತೆಯಾಗಿದೆ. ಸಿಬ್ಬಂದಿ ಕೊರತೆ ಇದ್ದರೆ ಕ್ರಮ ಕೈಗೊಳ್ಳಲು ಚರ್ಚೆ ಮಾಡಲಾಗುವುದು. ಎಸ್ಪಿ ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿ […]
ಬೀದರ್ ಜಿಲ್ಲೆಯ ಉಪನಿರ್ದೇಶಕ ಚಂದ್ರಶೇಖರ್ ರವರು ಎಸ್ಎಸ್ಎಲ್ ಸಿ ಪರಿಕ್ಷೆಯನ್ನು ಮಕ್ಕಳು ಯಾವುದೇ ಆತಂಕ ವಿಲ್ಲದೆ ಬರೆಯುವುದಕ್ಕೆ ಅನುವು ಮಾಡಿದ ಜಿಲ್ಲಾಡಳಿತ ಕ್ಕೆ ಧನ್ಯವಾದ ಹೇಳಿದರು. 94℅ರಷ್ಟರಂತೆ ಜಿಲ್ಲೆಯಲ್ಲಿ ಒಟ್ಟು 26882 ಮಕ್ಕಳು ಪರೀಕ್ಷೆ ಹಾಜರಾಗಿದ್ದು ಜಿಲ್ಲೆಯಲ್ಲಿ ಒಟ್ಟು 99 ಪರೀಕ್ಷಾ ಕೇಂದ್ರಗಳು ಇದ್ದು ಕರೋನಾ ವೈರಸ್ ನ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಮಾಜಿಕ ಅಂತರ ಕಾಪಾಡಲು ಹೆಚ್ಚುವರಿಯಾಗಿ ಹತ್ತು ಪರೀಕ್ಷಾ ಕೇಂದ್ರಗಳು ಮಾಡಲಾಗಿದ್ದು. ಸರ್ಕಾರಿ ಸಾರಿಗೆ ವ್ಯವಸ್ಥೆ ಇದ್ದರು […]
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ 5 ದಿನಗಳವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಏಳುತ್ತಿರುವುದರಿಂದ ಇನ್ನೂ 5 ದಿನಗಳ ಕಾಲ ಕರ್ನಾಟಕ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ತುಮಕೂರು, ಧಾರವಾಡ ಸೇರಿದಂತೆ 15 ಜಿಲ್ಲೆಗಳಲ್ಲಿ ಗುಡುಡು ಸಹಿತ […]
ಕರ್ನಾಟಕ – ಕೇರಳಕ್ಕೆ ಸಂಪರ್ಕಿಸುವ ರಸ್ತೆಗಳನ್ನು ಮಣ್ಣು ಮುಚ್ಚಿ ಬಂದ್ ಮಾಡಿಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲಾಡಳಿತ ಈ ನಿರ್ಧಾರವನ್ನು ತೆಗೆದುಕೊಂಡಿದೆ, ಬೆರಿಪದವು, ಪಾದೆಕಲ್ಲು, ಮುಗುಳಿ ಹಾಗೂ ಪದ್ಯಾಣ ಮೊದಲಾದ ಕಡೆಗಳಿಂದ ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ. ಕಾಸರಗೋಡು ಗಡಿಭಾಗದ ಜನರು ತಮ್ಮ ಕೆಲಸ ಕಾರ್ಯಗಳಿಗೆ ಇದೇ ರಸ್ತೆಯ ಮೂಲಕ ಮಂಗಳೂರನ್ನು ಸಂಪರ್ಕಿಸಬೇಕು ಆದರೆ ಕೇರಳ ಸರ್ಕಾರ […]
ಕೋಲಾರ ಜಿಲೆಯಲ್ಲಿ ಮೂವರಿಗೆ ಕೊರೊನಾ ಪಾಸಿಟಿವ್ ದೃಡವಾಗಿದೆ. ಕೆಜಿಎಫ್ 1, ಬಂಗಾರಪೇಟೆ 1, ಕೋಲಾರದಲ್ಲಿ ಒಬ್ಬರಲ್ಲಿ ಕರೋನಾ ಪಾಸಿಟಿವ್, ಸೋಂಕಿತರಿಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಮತ್ತೊಬ್ಬರಿಗೆ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ , ಸೋಂಕಿತರ ಏರಿಯಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕಂಟೈನ್ಮೆಂಟ್ ಜೋನ್ ಘೋಷಣೆ. ಸೋಂಕಿತರ ಸಂರ್ಪಕದಲ್ಲಿದ್ದವರಿಗೆ ಕ್ವಾರಂಟೈನ್ ಮಾಡಲಾಗಿದೆ. ಕೋಲಾರ ಜಿಲ್ಲೆಯಲ್ಲಿ 122ಕ್ಕೆ ಏರಿಕೆಯಾದ ಕೊರೊನಾ ಸೊಂಕಿತರು, ಒಟ್ಟು ಸಕ್ರಿಯ ಪ್ರಕರಣಗಳು 63, ಈ ಪೈಕಿ ಒಟ್ಟು […]
ಮಧುಗಿರಿ ತಾಲ್ಲೂಕಿನ ಚಿನಕವಜ್ರ ಗ್ರಾಮಪಂಚಾಯಿತಿ ಕಾರ್ಯಲಯವನ್ನು ಸ್ಥಳಾಂತರಿಸುವುದನ್ನು ವಿರೋಧಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿಯ 14 ಜನ ಸದಸ್ಯರಿದ್ದು 3 ಜನ ಸದಸ್ಯರು ಸ್ಥಳಾಂತರಿಸುವುದಕ್ಕೆ ಒಪ್ಪಿಗೆ ಸೂಚಿಸಿಲ್ಲ. ಕೆಲವು ಸದಸ್ಯರು ಕಾರ್ಯಾಲಯ ಬದಲಾಯಿಸುವಂತೆ ಮನವಿ ಮಾಡಿದ್ದರು. ಅದಕ್ಕೆ ಸಾರ್ವಜನಿಕರು ಒಪ್ಪುವುದಿಲ್ಲ ಎಂದು ಸ್ಥಳಿಯ ನಿವಾಸಿ ಮಂಜುಳಾ ಮಾತಾನಡಿ ಯಾವುದೇ ಕಾರಣಕ್ಕೂ ಕೂಡ ಪಂಚಾಯತಿ ಸ್ಥಳಾಂತರ ಮಾಡುವುದು ಬೇಡ ಸ್ಥಳಾಂತರಿಸುವ ಜಾಗವು ಊರಿನ ಹೊರಭಾಗದಲ್ಲಿದ್ದು, ಹುಡುಗಿಯರು ಹಾಗೂ ವೃದ್ಧರು ಓಡಾಡಲು […]
ಕೋಲಾರ ಮಾಲೂರು ತಾಲ್ಲೂಕು ಪುರಸಭೆ ಕಚೇರಿಯಲ್ಲಿ ಮುಖ್ಯಾಧಿಕಾರಿ ಪ್ರಸಾದ್ ರೆಡ್ಡಿಯಿಂದ ಅಂಗವಿಕಲನಿಗೆ ಅಂಗಡಿ ಮಳಿಗೆಗೆ ಅನುಮತಿ ಕೇಳಲು ಹೋದ ವ್ಯಕ್ತಿಯ ಮೇಲೆ ಗೂಂಡ ವರ್ತನೆ ಶಾಸಕ ಕೆ. ವೈ. ನಂಜೇಗೌಡರು ಹೇಳಿದರು ಅಂಗಡಿಗೆ ಅನುಮತಿ ನೀಡುವುದಿಲ್ಲ ಎಂದು ಏಕವಚನದಲ್ಲಿ ನಿಂದನೆ. ಕೋಲಾರ ಮಾಲೂರು ತಾಲ್ಲೂಕು ಪುರಸಭೆ ಕಚೇರಿಯಲ್ಲಿ ಘಟನೆ ಮುಖ್ಯಾಧಿಕಾರಿಯ ಗೂಂಡ ವರ್ತನೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗಿದೆ