ಸೆಕ್ಸಿಲುಕ್, ಮಾದಕ ಮೈಮಾಟ ಅಂದ್ರೆ ನೆನಪಾಗೋದೆ ಬಬ್ಲಿ ಬ್ಯೂಟಿ ನಮಿತಾ. ಇಂದು ಕಾಲಿವುಡ್, ಸ್ಯಾಂಡಲ್‍ವುಡ್ ನಟಿ ನಮಿತಾ ಹುಟ್ಟಿದ ದಿನ. ಗುಜರಾತ್ ರಾಜ್ಯದ ಸುರತ್ ನಲ್ಲಿ ಜನಿಸಿದ ನಮಿತಾ ೨೦೦೨ರಲ್ಲಿ ತೆಲುಗಿನ ‘ಸ್ವತಂ’ ಚಿತ್ರದ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟರು. ರವಿಚಂದ್ರನ್ ಅಭಿನಯದ ನೀಲಕಂಠದಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟ ಬಳಿಕ ರ‍್ಶನ್ ಜೊತೆಗೆ ಇಂದ್ರ ಚಿತ್ರದಲ್ಲೂ ಅಭಿನಯಿಸಿದ್ದಾರೆ. ಹೂ, ನಮಿತಾ ಐ ಲವ್ ಯೂ, ಬೆಂಕಿ ಬಿರುಗಾಳಿಯಲ್ಲೂ […]

ಬೆಂಗಳೂರು: ರಾಜ್ಯಕ್ಕೆ ಮರಳಲಿಚ್ಚಿಸುವ ಕನ್ನಡಿಗರಿಗೆ ಸರ್ಕಾರದಿಂದ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅನ್ಯಾಯವಾಗಿದೆ ಜನ ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ. ಇರುವಾಗಲೇ ಬದುಕು ಕಲ್ಪಿಸುವುದು ಸರ್ಕಾರದ ಕರ್ತವ್ಯ. ವಲಸೆ ಕಾರ್ಮಿಕರ ವಿಚಾರದಲ್ಲಿ ಮಾನವೀಯತೆಯಿಂದ ವರ್ತಿಸಿ ಲಾಕ್​ಡೌನ್ ಅವಧಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದೆ ಸರ್ಕಾರ ಅಥವಾ ದಾನಿಗಳು ನೀಡುವ ದವಸ, ಧಾನ್ಯಕ್ಕೆ ಕೈಯೊಡ್ಡಲು ಮನಸ್ಸು ಒಪ್ಪದೆ ಸಾವಿರಾರು ಸ್ವಾಭಿಮಾನಿ ಕಾರ್ಮಿಕರು ತಮ್ಮ ತಮ್ಮ […]

ಗ್ರೀನ್‌ ಜೋನ್‌ನಲ್ಲಿದ್ದ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೂ ಡೆಡ್ಲಿ ವೈರಸ್‌ ಕೊರೋನಾ ಕಾಲಿಟ್ಟಿದ್ದು, ಎಂಟು ಮಂದಿಗೆ ಕೊರೊನಾ ಸೊಂಕು ಧೃಡಪಟ್ಟಿದೆ ಎಂದು  ಸಚಿವ  ಕೆ ಎಸ್ ಈಶ್ವರಪ್ಪ  ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು,  8 ಮಂದಿಗೆ ಕೊರೊನಾ ವೈರಸ್‌ ಇರುವುದು  ಧೃಡಪಟ್ಟಿದೆ. ಜಿಲ್ಲೆಯ ಶಿಕಾರಿಪುರ ಮೂಲದ 8 ಮಂದಿ ಹಾಗೂ  ತೀರ್ಥಹಳ್ಳಿಯ ಒಬ್ಬರು ತಬ್ಲಿಘಿಗಳು ಗುಜರಾತ್‍ನ ಅಹಮದಾಬಾದ್‍ನಿಂದ ಬೆಳಗಾವಿ ಗಡಿ ಮೂಲಕ ಶಿವಮೊಗ್ಗಕ್ಕೆ ವಾಪಸ್ ಬಂದಿದ್ದರು, ಇದೇ ವೇಳೆ ಅವರನ್ನು ಶಿವಮೊಗ್ಗದ […]

ಕೊರೊನಾ ತಡೆಯುವಲ್ಲಿ ನಮ್ಮ  ರಾಜ್ಯ 2ನೇ ಸ್ಥಾನದಲ್ಲಿದೆ. ಕೋವಿಡ್ ತಡೆಗೆ ಶ್ರಮಿಸುತ್ತಿರುವ ಸಚಿವರು ಜನಪ್ರತಿನಿಧಿಗಳು,ಸರ್ಕಾರದ ಅಧಿಕಾರಿಗಳು, ಸಿಬ್ಬಂದಿ ವರ್ಗ,ವೈದ್ಯರು,ನರ್ಸ್,ಸಿಬ್ಬಂದಿ ಆರೋಗ್ಯ ಕಾರ್ಯಕರ್ತರು,ಪೊಲೀಸರು, ಪೌರ ಕಾರ್ಮಿಕರು,ಚಾಲಕರು, ಆಶಾ ಅಂಗನವಾಡಿ ಕಾರ್ಯಕರ್ತೆಯರ  ಕೆಲಸದಿಂದ ಸೋಂಕು ಹರಡುವಿಕೆ ರಾಜ್ಯದಲ್ಲಿ ಹತೋಟಿಯಲ್ಲಿದೆ. ಇವರೆಲ್ಲ ತಮ್ಮ ಜೀವ ಪಣಕ್ಕಿಟ್ಟು ದುಡಿಯುತ್ತಿದ್ದಾರೆ ಎಂದು  ಕೊರೊನಾ ವಾರಿಯರ್ಸ್ ಗೆ ಸಿಎಂ  ಧನ್ಯವಾದ ಸಲ್ಲಿಸಿದ್ದಾರೆ.

ಕರೋನವೈರಸ್ ನಿರ್ಬಂಧದಿಂದಾಗಿ ನೇಪಾಳದಲ್ಲಿ ಸಿಲುಕಿರುವ ಚೀನಾದ ಪ್ರಜೆಗಳ ಗುಂಪು ಕಠ್ಮಂಡುವಿನಲ್ಲಿರುವ ಪ್ರಧಾನ ಮಂತ್ರಿ ಕಚೇರಿಯನ್ನು ತಲುಪುವ ಪ್ರಯತ್ನದಲ್ಲಿ ಪೊಲೀಸರೊಂದಿಗೆ ಘರ್ಷಣೆ ನಡೆಸಿತು. ಅವರಲ್ಲಿ 45 ಜನರನ್ನು ಬಂಧಿಸಲಾಗಿದೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ.  “ಪ್ರತಿಭಟನಾಕಾರರು ನಿಷೇಧಿತ ವಲಯಕ್ಕೆ ಪ್ರವೇಶಿಸಿದಾಗ ಘರ್ಷಣೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಹರಿಬಹಾದೂರ್ ಬಾಸ್ನೆಟ್ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ” ಎಂದು ನೇಪಾಳ ಪೊಲೀಸ್ ವರಿಷ್ಠಾಧಿಕಾರಿ ಸೋಮಂದ್ರ ಸಿಂಗ್ ರಾಥೋಡ್ ದೂರವಾಣಿ ಮೂಲಕ ಎಎನ್‌ಐಗೆ ತಿಳಿಸಿದ್ದಾರೆ. […]

ಬಾಗಲಕೋಟೆಯಲ್ಲಿ ನಡೆದಿದ್ದ ಒಂದು ಮದುವೆ ಗದಗ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಕೊರೋನಾ ಹರಡುವ ಭೀತಿಗೆ ಕಾರಣವಾಗಿತ್ತು. ಏಕೆಂದರೆ ಈ ಮದುವೆಯಲ್ಲಿ ಪಾಲ್ಗೊಂಡಿದ್ದ ಕೆಲವರಲ್ಲಿ ಕೊರೋನಾ ಸೋಂಕು ಕಂಡುಬಂದಿತ್ತು. ಅಲ್ಲದೆ, ಇವರ ಟ್ರಾವೆಲ್‌ ಹಿಸ್ಟರಿಯನ್ನು ಕೆದಕಿದಾಗ  ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗಲ್, ಹನುಮನಾಳದ ವರೆಗೆ ವಿಸ್ತರಿಸಿತ್ತು. ಈ ವಿಚಾರ ಸಾಮಾನ್ಯವಾಗಿ ಇಡೀ ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿತ್ತು. ಹೀಗಾಗಿ ಕೊಪ್ಪಳ ಜಿಲ್ಲೆಯಲ್ಲಿ ನಿಲೊಗಲ್ ಗ್ರಾಮದ 18 ಜನರನ್ನು ಮೇ 7ರಂದು […]

  ಲಂಚ ಸ್ವೀಕಾರ ಮಾಡಿದ ಆರೋಪ ಸಾಬೀತಾದ ಹಿನ್ನೆಲೆ ಎಸಿಪಿ ಪ್ರಭುಶಂಕರ್ ರನ್ನು ಸಿಸಿಬಿಯಿಂದ ವರ್ಗಾವಣೆ ಮಾಡಲಾಗಿದೆ. ರೇಡ್ ಮಾಡಿ ಪ್ರಕರಣ  ಮುಚ್ಚಿ ಹಾಕಲು ಸಿಗರೇಟ್ ಡೀಲರ್ ಗಳಿಂದ ಪ್ರಭುಶಂಕರ್ 60 ಲಕ್ಷರೂಪಾಯಿ ಲಂಚ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಸಿಸಿಬಿ ಹಿರಿಯ ಅಧಿಕಾರಿಗಳು ತನಿಖೆ ನಡೆಸಿ ಕಮಿಷನರ್ ಗೆ ವರದಿ ಸಲ್ಲಿಸಿದ್ದಾರೆ. ಕಾನೂನಿನ ಮುಂದೆ ಎಲ್ರೂ ಒಂದೇ ಒಬ್ಬರಿಗೊಂದು ಇನ್ನೊಬ್ಬರಿಗೊಂದು ಮಾಡೋದು ಸರಿಯಲ್ಲ.  ಇಷ್ಟಾದರೂ ಎಸಿಪಿಯನ್ನು […]

ಸದಾ ಹೊಸ ರಾಗ, ಹೊಸ ಚಿಂತನೆಯಲ್ಲಿ ತೊಡಗಿರುವ ಸಂಗೀತ ನಿರ್ದೇಶಕ ಕಿರಣ್ ರವೀಂದ್ರನಾಥ್ ಈಗ ಒಂದು ಹೊಸ ಹೆಜ್ಜೆ ಇಟ್ಟಿದ್ದಾರೆ. ಕನ್ನಡದಲ್ಲಿ ‘ಫಸ್ಟ್ ರ‍್ಯಾಂಕ್ ರಾಜು’ ಸಿನಿಮಾದಲ್ಲಿ ಎಲ್ಲ ಹಾಡುಗಳಿಗೆ ಮಾಧುರ್ಯ ತುಂಬಿಕೊಟ್ಟಿದ್ದ ಕಿರಣ್ ರವೀಂದ್ರನಾಥ್ ಈಗ ಲಾಕ್‌ಡೌನ್ ಸಂದರ್ಭದಲ್ಲಿ ‘ಚಹಾ ಥಾ ಕ್ಯಾ ಹಮ್ ನೇ’ ಗೀತೆಯನ್ನು ಸ್ವತಃ ಹಾಡಿದ್ದಾರೆ ಹಾಗೂ ರಾಗ ಸಂಯೋಜನೆ ಸಹ ಮಾಡಿದ್ದಾರೆ. ಇವರ ಸ್ನೇಹಿತ ಗಿಟಾರ್ ವಾದ್ಯಗಾರ ಹಾಗೂ ಸಿವಿಲ್ ಇಂಜಿನಿಯರ್ ಆಗಿರುವ […]

ದಾವಣಗೆರೆ : ಕೋವಿಡ್-19 ರೋಗದ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜೊತೆ ಸಾರ್ವಜನಿಕರು ಕೂಡ ಕೈಜೋಡಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಪರಾಮರ್ಶೆ ಸಭೆಯಲ್ಲಿ ಮಾತನಾಡಿದ ಸಚಿವರು, ಇದುವರೆಗೂ ರಾಜ್ಯ ಸರ್ಕಾರ ಅತ್ಯಂತ ಜವಾಬ್ದಾರಿಯುತವಾಗಿ ಕರೋನಾ ಸೋಂಕನ್ನು ಹಿಮ್ಮೆಟ್ಟಿಸಿದೆ. ಲಾಕ್ ಡೌನ್ ಸಡಿಲಿಕೆ ಬಳಿಕ ಜನರು ಕೂಡ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ ಎಂದರು. ರಾಜ್ಯ ಸರ್ಕಾರ ಜನರ ಜೀವ ಮತ್ತು […]

ಚೆನ್ನೈ: ಮದ್ಯದಂಗಡಿ ತೆರೆದುದರಿಂದ ಹಲವಾರು ಸಮಸ್ಯೆಗಳು ಉಂಟಾದ ಪರಿಣಾಮ, ಮದ್ಯದ ಅಂಗಡಿಗಳನ್ನು ಬಂದ್ ಗೆ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಲಾಕ್ ಡೌನ್ ಗೆ ವಿನಾಯಿತಿ ನೀಡಿ ಮದ್ಯದಂಗಡಿ ತೆರೆಯಲು ಅನುವು ಮಾಡಿಕೊಟ್ಟ ಬೆನ್ನಲ್ಲೇ ಹಲವು ಸಮಸ್ಯೆ ಉಂಟಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಮದ್ರಾಸ್ ಹೈಕೋರ್ಟ್ ಮದ್ಯದಂಗಡಿಗಳನ್ನು ಬಂದ್ ಮಾಡಿ ಹೋಮ್ ಡೆಲಿವರಿ, ಆನ್ ಲೈನ್ ಮಾರಾಟಕ್ಕೆ […]

Advertisement

Wordpress Social Share Plugin powered by Ultimatelysocial